ಸೈನಿಕರ ತ್ಯಾಗ ಬಲಿದಾನದಿಂದ ದೇಶದಲ್ಲಿ ನೆಮ್ಮದಿ: ಹಂಚಲಿ


Team Udayavani, Mar 5, 2018, 2:42 PM IST

vij-5.jpg

ನಿಡಗುಂದಿ: ದೇಶದಲ್ಲಿ ಜನರ ನೆಮ್ಮದಿ ಜೀವನಕ್ಕೆ ಸೈನಿಕರ ತ್ಯಾಗ ಬಲಿದಾನವೇ ಕಾರಣ. ವೈಯಕ್ತಿಕ ಜೀವನ ಬದಿಗೊತ್ತಿ ದೇಶ ರಕ್ಷಣೆ ಧ್ಯೇಯವಾಗಿಸಿಕೊಂಡಿರುವ ಅವರ ಕಾರ್ಯ ಎಲ್ಲರಿಗೂ ಮಾದರಿ ಎಂದು ಉಪನ್ಯಾಸಕ ಬಸವರಾಜ ಹಂಚಲಿ ಹೇಳಿದರು.

ರವಿವಾರ ಪಟ್ಟಣದ ರುದ್ರೇಶ್ವರ ಸಂಸ್ಥಾನ ಮಠದ ಆವರಣದಲ್ಲಿ ನಡೆದ ನೂತನ ನಿಡಗುಂದಿ ತಾಲೂಕು ನಿವೃತ್ತ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಸುಭ್ರದತೆಗಾಗಿ ಗಡಿ ಭಾಗದಲ್ಲಿ ದೇಶದ್ರೋಹಿಗಳ ವಿರುದ್ಧ ಸೈನಿಕರು ನಿತ್ಯ ರಣಕಹಳೆ ಮೊಳಗಿಸಿ ಹೋರಾಟ ನಡೆಸುತ್ತಾರೆ. ಅವರ ದೇಶ ರಕ್ಷಣೆ ಕಾರ್ಯದಿಂದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟು ಸುಂದರ ಬದುಕು ನಡೆಸಲು ಕಾರಣವಾಗಿದೆ. ಕಳೆದ ಹಲವಾರು ವರ್ಷಗಳಿಂದ ದೇಶಕ್ಕಾಗಿ ದುಡಿದು ನಿವೃತ್ತಿ ಪಡೆದರೂ ತಮ್ಮ ಸೇವೆ ಮುಂದುವರಿಸುವ ನಿಟ್ಟಿನಲ್ಲಿ ಸದ್ಯ ನಿಡಗುಂದಿ ಪಟ್ಟಣದಲ್ಲಿ ನಿವೃತ್ತ ಸೈನಿಕರು ಸಂಘ ನಿರ್ಮಿಸಿ ಸಮಾಜ ರಕ್ಷಣೆಯ ಪಣ ತೊಡುತ್ತಿರುವ ಕಾರ್ಯ ಅನನ್ಯವಾಗಿದೆ ಎಂದರು.

ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಂಗಮೇಶ ಕೆಂಭಾವಿ ಮಾತನಾಡಿ, ಹಲವಾರು ವರ್ಷಗಳಿಂದ ದೇಶದ ಗಡಿಯಲ್ಲಿ ಹಗಲು, ರಾತ್ರಿ ಮಳೆ, ಚಳಿ, ಬಿಸಿಲು ಎನ್ನದೇ ದೇಶವೇ ನನ್ನ ಉಸಿರು ಎಂದು ಕೆಚ್ಚದೆಯಿಂದ ದೇಶದ್ರೋಹಿಗಳನ್ನು ಸದೆಬಡಿದು ನಮ್ಮ ದೇಶದ ಶಕ್ತಿ ಹೆಚ್ಚಿಸುತ್ತಿರುವ ಸೈನಿಕರ ಕೆಲಸವನ್ನು ಪ್ರತಿಯೊಬ್ಬರು ಗೌರವದಿಂದ ಕಾಣಬೇಕು. ಜಾತಿ, ಭೇದ ಲೆಕ್ಕಿಸದೆ ತಮ್ಮ ಜೀವನವನ್ನು ತಾಯಿ ನಾಡಿಗೆ ಅರ್ಪಿಸುವ ಅವರು ದೇಶದ ರಿಯಲ್‌ ಹೀರೋಗಳು ಎಂದರು.

ನಿಡಗುಂದಿ ತಾಲೂಕು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಜಿ.ಎಲ್‌. ಮನಹಳ್ಳಿ ಮಾತನಾಡಿ, ದೇಶ ಮೊದಲು, ದೇಶದ ಜನರ ನೆಮ್ಮದಿ ನಮಗೆ ಅತ್ಯವಶ್ಯ. ಅವರ ರಕ್ಷಣೆಗೆ ಸೈನಿಕರು ಸದಾ ಸಿದ್ಧರಾಗಿರುತ್ತಾರೆ. ಹಲವಾರು ವರ್ಷಗಳ ಕಾಲ ದೇಶಸೇವೆ ಮಾಡಿದ ನಾವೆಲ್ಲ ಈಗ ನಾಡ ಸೇವೆಗೆ ಸಿದ್ಧರಾಗಿದ್ದೇವೆ. ನಮ್ಮ ಕಷ್ಟ ನಷ್ಟಗಳ ಮಧ್ಯ ನಿಮ್ಮ ರಕ್ಷಣೆಗೆ ನಾವುಗಳು ದಿನಪೂರ್ತಿ ಕಾಯಕ ಮಾಡಲು ಸಿದ್ಧರಾಗಿದ್ದೇವೆ ಎನ್ನುವ ಸಂಕಲ್ಪದೊಂದಿಗೆ ಸಂಘಟನೆಗೆ ಚಾಲನೆ ನೀಡಲಾಗಿದೆ ಎಂದರು.

ರುದ್ರೇಶ್ವರ ಸಂಸ್ಥಾನ ಮಠದ ರುದ್ರಮುನಿ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಶಿಕ್ಷಣ ಪ್ರೇಮಿ ಸಿದ್ದಣ್ಣ ನಾಗಠಾಣ, ಕೃಷ್ಣಾ ಕಾಡಾ ಮಾಜಿ ಅಧ್ಯಕ್ಷ ಬಸವರಾಜ ಕುಂಬಾರ, ಜಿ.ಬಿ. ಬಿರಾದಾರ, ಪ್ರಭಾರಿ ಮುಖ್ಯಾಧಿಕಾರಿ ಡಿ.ಎನ್‌. ತಹಶೀಲ್ದಾರ್‌ ಮಾತನಾಡಿದರು.

ರಾಮನಗೌಡ ಬಿರಾದಾರ, ಶಿವಾನಂದ ರೂಢಗಿ, ವೈ.ಎಸ್‌. ಗಂಗಶೆಟ್ಟಿ, ಎಸ್‌.ಆರ್‌. ವಿಭೂತಿ, ಬಸವರಾಜ ಗಣಿ, ಭೀಮಣ್ಣ ವಿಭೂತಿ, ಹೊಳಿಬಸಪ್ಪ ಮನಹಳ್ಳಿ, ಗೂಳಪ್ಪ ಅಂಗಡಿ, ಜಟ್ಟೆಪ್ಪ ಯಲಗೂರ, ಸಂಗಪ್ಪ ಕೂಡಗಿ, ಬಸವರಾಜ ಬಿರಾದಾರ, ಮಲ್ಲಪ್ಪ ಗುಂಡಿನಮನಿ, ಶ್ರೀಶೈಲ ದೊಡಮನಿ, ಆನಂದ ಕಮತಗಿ, ಬಿ.ಐ. ಯಡ್ರಾಮಿ ಮುಂತಾದವರಿದ್ದರು. ಯಾಸಿನ್‌ ಮುಲ್ಲಾ ನಿರೂಪಿಸಿದರು. ಎಸ್‌.ಎಸ್‌. ಹುಬ್ಬಳ್ಳಿ ವಂದಿಸಿದರು.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.