ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
Team Udayavani, Feb 21, 2018, 1:17 PM IST
ವಿಜಯಪುರ: ಕರ್ನಾಟಕ ಲಲಿತ ಕಲಾ ಅಕಾಡೆಮಿ ಸಹಾಯ ಧನದಲ್ಲಿ ಫೆ. 24ರಂದು ಧಾರವಾಡದಲ್ಲಿ ಯುವ ಕಲಾವಿದ ವರ್ಧಮಾನ ಕೇದ್ರಾಪುರ ಇವರ ಏಕವ್ಯಕ್ತಿ ಚಿತ್ರಕಲಾ ಕೃತಿಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಧಾರವಾಡದ ಸರ್ಕಾರಿ ಸರಕಾರಿ ಚಿತ್ರಕಲಾ ಆರ್ಟ್ ಗ್ಯಾಲರಿಯಲ್ಲಿ ಅಂದು ಬೆಳಗ್ಗೆ 10:30ಕ್ಕೆ ಚಿತ್ರಕಲಾ ಪ್ರದರ್ಶನಕ್ಕೆ ಹಿರಿಯ ಕಲಾವಿದ ಎಂ.ಆರ್. ಬಾಳಿಕಾಯಿ ಚಾಲನೆ ನೀಡಲಿದ್ದು, ಕರ್ನಾಟಕ ಲಲಿತ ಕಲಾ ಅಕಾಡೆಮಿ ಸದಸ್ಯ ಎಫ್.ವಿ. ಚಿಕ್ಕಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಕಲಾವಿದ ಡಾ| ಪಿ.ಎಸ್. ಕಡೆಮನಿ, ಬಿ.ಎಚ್. ಕುರಿ ಪಾಲ್ಗೊಳ್ಳಲಿದ್ದಾರೆ.
ವಿಜಯಪುರ ಜಿಲ್ಲೆಯ ಸಿದ್ದಾಪುರ (ಕೆ) ಗ್ರಾಮದ ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದಿರುವ ವರ್ಧಮಾನ ಅವರು, ಹಲವು ಚಿತ್ರಕಲೆ ಪ್ರದರ್ಶನದಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿದ್ದು ಬಹುಮಾನ-ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಇವರು ರಚಿಸಿದ ಕಲಾಕೃತಿ ಕೃಷ್ಣನ ಬಾಲ್ಯ ಲೀಲೆಗಳು, ಪ್ರೇಮಿ, ಕನಸು, ತ್ರಿ ಇಡಿಯಟ್, ಹಾಳು ಗೇಡಿಸುವ ಮಂಗ, ಬೀದಿಯ ಮಗು, ಇಂದಿನ ರಾಜಕೀಯ, ನೀರಿಗಾಗಿ ಪರದಾಡುವ ಕಾಗೆ ಹಾಗೂ ಮಂಗಗಳು, ಹಳ್ಳಿಯ ಬದುಕು,
ಡೊಳ್ಳು ಕುಣಿತ, ನದಿಯಲ್ಲಿ ಸ್ನಾನ ಮಾಡಿ ಪುಡಿಯಿಂದ ದೇವಾಲಯಕ್ಕೆ ಹೋಗುತ್ತಿರುವ ಮಹಿಳೆ ಶಿಲೆ ಮತ್ತು ಮಹಿಳೆ ಮುಂತಾದ ಕಲಾಕೃತಿಗಳು ಸದರಿ ಪ್ರದರ್ಶನದಲ್ಲಿ ಬೆಳಕು ಕಾಣಲಿರುವ ಕಲಾಕೃತಿಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ