ಸುಗಮ ಸಂಚಾರ ಸಮಸ್ಯೆಗೆ ಸಿಗಬೇಕಿದೆ ಮುಕ್ತಿ

ಅಡ್ಡಾ ದಿಡ್ಡಿಯಾಗಿ ವಾಹನಗಳು ಒಡಾಡುತ್ತಿರುವುದರಿಂದ ಈ ವೃತ್ತದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ.

Team Udayavani, Dec 2, 2021, 6:17 PM IST

ಸುಗಮ ಸಂಚಾರ ಸಮಸ್ಯೆಗೆ ಸಿಗಬೇಕಿದೆ ಮುಕ್ತಿ

ಇಂಡಿ: ಸುಮಾರು 45ರಿಂದ 50 ಸಾವಿರ ಜನಸಂಖ್ಯೆ ಹೊಂದಿದ ಇಂಡಿ ಪಟ್ಟಣದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಗ್ರಾಮಿಣ ಭಾಗದಿಂದ ಬರುವ ಜನರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಅಲ್ಲದೆ ಬಸವೇಶ್ವರ ವೃತ್ತದಲ್ಲಿರುವ ಸಿಗ್ನಲ್‌ ಸಹ ಕಾರ್ಯ ನಿರ್ವಹಿಸದೇ ಇರುವ ಕಾರಣ ವಾಹನ ಸವಾರರು ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿದ್ದಾರೆ.

ಪಟ್ಟಣದ ಹೃದಯ ಭಾಗ ಎಂದೆ ಕರೆಸಿಕೊಳ್ಳುವ ಜಗಜ್ಯೋತಿ ಬಸವೇಶ್ವರ ವೃತ್ತ ಪ್ರಮುಖ ಮಾರ್ಗಗಳಿಂದ ಕೂಡಿದ್ದು ಸುತ್ತವರಿದು ವಾಹನಗಳು ಹಾದು ಹೊಗಬೇಕು. ಪಟ್ಟಣದಲ್ಲಿ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಬೇಕಾಗಿದೆ.

ಬಸವೇಶ್ವರ ವೃತ್ತ ಪ್ರಮುಖ ಮಾರ್ಗಗಳಿಂದ ಕೂಡಿದ್ದು ಲಾರಿ, ಭಾರಿ ಗಾತ್ರದ ಹೈವಾ, ಟ್ರ್ಯಾಕ್ಟರ್‌, ಬಸ್‌, ಕಾರು, ಜಿಪು, ದ್ವಿಚಕ್ರ ವಾಹನ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ನಿತ್ಯ ವಾಹನಗಳು ಓಡಾಡುತ್ತವೆ. ಅಡ್ಡಾ ದಿಡ್ಡಿಯಾಗಿ ವಾಹನಗಳು ಒಡಾಡುತ್ತಿರುವುದರಿಂದ ಈ ವೃತ್ತದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ.

ಆದರೆ ಈ ವೃತ್ತದ ಮೂಲಕ ವಿಜಯಪುರ, ಝಳಕಿ, ಕಲಬುರಗಿ, ಅಕ್ಕಲಕೊಟ, ಸೊಲ್ಲಾಪುರ, ಪಂಢರಪುರ, ಗಾಣಗಾಪುರ, ಲಿಂಗಸಸೂರು ಸೇರಿದಂತೆ ನೆರೆಯ ಮಹಾರಾಷ್ಟ್ರ, ಆಂಧ್ರ ಕಡೆ ಹಾದು ಹೋಗಬೇಕು. ಹೀಗಾಗಿ ನಾನಾ ಭಾಗಗಳಿಂದ ಹೋಗಿ ಬರುವ ಎಲ್ಲ ವಾಹನಗಳು ಈ ವೃತ್ತದ ಮೂಲಕ ಸಂಚರಿಸುತ್ತಿರುವುದರಿಂದ ವಾಹನ ದಟ್ಟಣೆ ಹಾಗೂ ಪಕ್ಕದಲ್ಲಿ ಬಸ್‌ ನಿಲ್ದಾಣ ಇರುವುದರಿಂದ ಜನ ದಟ್ಟಣೆ ಕೂಡಾ ಹೆಚ್ಚಾಗಿದೆ. ಅಲ್ಲದೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ಸಿಗ್ನಲ್‌ ಬಲ್ಬ್ಗಳು ಪೊಲೀಸರಿಗೆ ಸಹಕಾರಿಯಾಗಿದ್ದು ಸಿಗ್ನಲ್‌ ಬಲ್ಬ್ ಗಳ ನಿರ್ವಹಣೆ ಮಾಡಬೇಕಾದ ಪುರಸಭೆಯವರು ಹಾಗೂ ಪೊಲೀಸ್‌ ಇಲಾಖೆಯವರು ಕೈ ಕಟ್ಟಿ ಕುಳಿತಿದ್ದಾರೆ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಈ ಕುರಿತು ಈಗಾಗಲೆ ಪುರಸಭೆಯವರ ಗಮನಕ್ಕೆ ತರಲಾಗಿದೆ. ಶಾಸಕರ ಅನುದಾನದಲ್ಲಿ ನಿರ್ಮಾಣ ಮಾಡಲಾಗಿದೆ. ಹಾಗಾಗಿ ಇದರ ನಿರ್ವಹಣೆ, ರಿಪೇರಿ ವೆಚ್ಚ ಏನಿದ್ದರೂ ಪುರಸಭೆಯವರು ನೋಡಿಕೊಳ್ಳಬೇಕು.
ಭೀಮನಗೌಡ ಬಿರಾದಾರ,
ಸಿಪಿಐ ಶಹರ ಠಾಣೆ, ಇಂಡಿ

ವಿಜಯಪುರ ಜಿಲ್ಲೆಯ ಯಾವ ತಾಲೂಕು ಕೇಂದ್ರದಲ್ಲಿ ಇಲ್ಲದೆ ಇರುವ ಸಿಗ್ನಲ್‌ ಬಲ್ಬ್ಗಳನ್ನು ಪಟ್ಟಣದಲ್ಲಿ ಅಳವಡಿಸಲಾಗಿದೆ. ಇದರ ಕೀರ್ತಿ ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸಲ್ಲಬೇಕು. ಶಾಸಕರು ಮುತುವರ್ಜಿ ವಹಿಸಿ ಅನುದಾನ ಕೊಡಿಸಿದ್ದರಿಂದ ಸಿಗ್ನಲ್‌ ಅಳವಡಿಸಲು ಸಾಧ್ಯವಾಗಿದೆ. ಆದರೆ ಇಂದು ಅದೇ ಸಿಗ್ನಲ್‌ ಬಲ್ಬ್ಗಳು ಸ್ಥಗಿತಗೊಂಡು ಜನರ ಅಪಹಾಸ್ಯಕೆ ಈಡಾಗಿದ್ದು ಸಂಬಂಧಿಸಿದವರು ತ್ವರಿತವಾಗಿ ಸಿಗ್ನಲ್‌ ಆರಂಭಿಸಬೇಕು.
ಲಕ್ಷ್ಮಣ ಕರಕ್ಕಿ, ಇಂಡಿ ನಿವಾಸಿ

ಯಲಗೊಂಡ ಬೇವನೂರ

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.