ಭಾರತಕ್ಕಿದೆ ವಿಶ್ವದಲ್ಲಿ ವಿಶೇಷ ಸ್ಥಾನ


Team Udayavani, Feb 25, 2018, 3:46 PM IST

vij-6.jpg

ಇಂಡಿ: ವಿಶ್ವದಲ್ಲಿಯೇ ಭಾರತ ತನ್ನದೆಯಾದ ವೈಚಾರಿಕ ನಿಲುವು ಹೊಂದಿದೆ. ಭಾರತ ದೇಶದಲ್ಲಿ ವಿಶೇಷ ಆಚಾರ ವಿಚಾರಗಳು, ಜಾತ್ರಾ ಮಹೋತ್ಸವ ನಡೆಯುತ್ತಿವೆ. ಇದರಿಂದ ನಮ್ಮ ದೇಶ ವಿಶ್ವದಲ್ಲಿಯೇ ಉನ್ನತ ಹೆಸರು ಪಡೆದುಕೊಂಡಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಕಾಸುಗೌಡ ಬಿರಾದಾರ ಹೇಳಿದರು.

ಪಟ್ಟಣದ ಜಾಂಬವ ನಗರದಲ್ಲಿ ದುರ್ಗಾ ಪರಮೇಶ್ವರಿ ಮೂರ್ತಿ ಪ್ರತಿಷ್ಠಾಪನಾ ಉತ್ಸವ, ಹೋಮ ಹವನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದುರ್ಗಾ-ಪರಮೇಶ್ವರಿ ದೇವಿ ಜಾತ್ರಾ ಮಹೋತ್ಸವ ಪ್ರತಿ ವರ್ಷ ಮಾಡಲು ಒಂದು ಇತಿಹಾಸವಿದೆ. ಗಂಡಿನಷ್ಟೇ ಸರಿ ಸಮಾನಳು ಹೆಣ್ಣು ಎಂಬುದು ದೇವಲೋಕದಲ್ಲಿಯೂ ತಿಳಿದಿತ್ತು ಎಂದರು.

ಎಲ್ಲರೂ ಒಂದೆಡೆ ಸೇರಿ ಭಕ್ತಿ ಭವದಿಂದ ಜಾತ್ರಾ ಮಹೋತ್ಸವ ಆಚರಿಸಿ ನೆಮ್ಮದಿಯ ಬಾಳು ಬದುಕಿ ತೋರಿಸುತ್ತೇವೆ. ಇಂತಹ ಆಚರಣೆ ನಮ್ಮ ದೇಶ ಬಿಟ್ಟರೆ ಬೇರೆಲ್ಲಿಯೂ ನೋಡಲು ಸಿಗುವುದಿಲ್ಲ ಎಂದರು. ಕಾರ್ಯಕ್ರಮ ಮುನ್ನ ಪರಮೇಶ್ವರಿಯ ಮೆರವಣಿಗೆ ಸಾರೋಟದ ರಥದಲ್ಲಿ ವಿವಿಧ ಹೂಮಾಲೆಗಳಿಂದ ತಳಿರು ತೋರಣಗಳಿಂದ ರಥವನ್ನು ಸಿಂಗರಿಸಿ ಮೆರವಣಿಗೆ ಮಾಡಲಾಯಿತು.

ಝಳಕಿಯ ಮರಗಮ್ಮದೇವಿ, ಆಳವಿಯ ದುರ್ಗಾದೇವಿ ಪಲ್ಲಕ್ಕಿ, ಬರಗುಡಿಯ ದುರ್ಗಾದೇವಿ ಪಲ್ಲಕ್ಕಿ, ಹಡಲಸಂಗದ ಮರಗಮ್ಮ ಪಲ್ಲಕ್ಕಿ ಉತ್ಸಗಳು ಮತ್ತು ಸುಮಾರು 151 ಸುಮಂಗಲೆಯರು ಹಳದಿ ಸೀರೆ, ಕುಪ್ಪಸ ತೊಟ್ಟು ಕುಂಭ ಹೊತ್ತು ಬಿರು ಬಿಸಿಲಿನಲ್ಲಿ ರಸ್ತೆಯುದ್ದಕ್ಕೂ ಸಾಗಿದರು. ಡೊಳ್ಳು ಕುಣಿತ, ಚಿಟ್ಟಲಗೆ, ಹಲಗೆ, ಚಿಕ್ಕರೂಗಿಯ ಡೊಳ್ಳಿನ ವಾದ್ಯ, ಮಣೂರ, ಅಂಜುಟಗಿ, ಮಂದ್ರೂಪ, ಸಾಲೋಟಗಿ ಗ್ರಾಮಗಳ ಹಲಗೆ ವಾದ್ಯಗಳೊಂದಿಗೆ ಬ್ಯಾಂಜೋ ನವಿಲು ಕುಣಿತ ಗಮನ ಸೆಳೆದವು.

ದುರ್ಗಾ ಪರಮೇಶ್ವರಿಗೆ ಜಯವಾಗಲಿ ಮರಗಮ್ಮ ಮಾತಾಕೀ ಜೈ ಎಂದು ಸಾವಿರಾರು ಭಕ್ತರು ಉತ್ತತ್ತಿ, ಬಾದಾಮಿ, ಖಾರಿಕ, ಹೂಗಳು, ಭಂಡಾರವನ್ನು ದುರ್ಗಾ ಪರಮೇಶ್ವರಿ ಮೇಲೆ ಎರಚುತ್ತಾ ಭಕ್ತಿಯ ಭಾವ ಪರವಶರಾದರು. ನಂತರ ಶಿಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸಿದ್ದಾರೂಢ ಮಠದ ಸ್ವರೂಪಾನಂದ ಶ್ರೀಗಳ ಅಮೃತ ಹಸ್ತದಿಂದ ನೆರವೇರಿತು. ದತ್ತಾ ಬಡೇನವರ, ಸಿದ್ದು ಕಟ್ಟಿಮನಿ, ಮಹಾದೇವ ಕಟ್ಟಿಮನಿ, ಶಾಂತು ಭಾವಿಕಟ್ಟಿ, ಭೀಮಾಶಂಕರ ವಾಲೀಕಾರ, ಪರಶುರಾಮ ಭಾವಿಕಟ್ಟಿ, ಎಸ್‌.ಕೆ. ಹಂಚನಾಳ,
ರಾಜು ಪಡಗಾನೂರ, ಅರ್ಜುನ ಪಾರ್ಸಿ , ಬಿ.ಎನ್‌. ಮಾರ್ಕಪ್ಪನಹಳ್ಳಿ, ಸಿದ್ದಪ್ಪ ಪೂಜಾರಿ, ಸಚಿನ ಕಟ್ಟಿಮನಿ, ಮಲ್ಲಿಕಾರ್ಜುನ ಕಾಂಬಳೆ ಸೇರಿದಂತೆ ವಿವಿಧ ಗ್ರಾಮಗಳ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

love birds

Vijayapura: ಪ್ರೇಮ ವಿವಾಹವಾಗಿದ್ದ ನವ ದಂಪತಿ ನೇಣಿಗೆ ಶರಣು

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

police

Vijayapura: ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ

1-weqwqe

Babaleshwar: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.