ಅಧ್ಯಾತ್ಮವೇ ದೇಶದ ನಿಜವಾದ ಆಸ್ತಿ: ನಡಹಳ್ಳಿ

ದಾರಿ ಹೋಕರಿಗೂ ದಾಸೋಹ ಮಾಡುವ ಸಂಪ್ರದಾಯ ಇಂದಿಗೂ ನಮ್ಮ ದೇಶ, ನಮ್ಮ ರಾಜ್ಯದಲ್ಲಿದೆ

Team Udayavani, Aug 24, 2022, 6:17 PM IST

ಅಧ್ಯಾತ್ಮವೇ ದೇಶದ ನಿಜವಾದ ಆಸ್ತಿ: ನಡಹಳ್ಳಿ

ಮುದ್ದೇಬಿಹಾಳ: ನಮ್ಮ ದೇಶದ ನಿಜವಾದ ಆಸ್ತಿ ಅಧ್ಯಾತ್ಮವಾಗಿದೆ. ಜಗತ್ತಿನಲ್ಲಿಯೇ ನಿಜವಾದ ಶ್ರೀಮಂತ ಹಾಗೂ ಅಧ್ಯಾತ್ಮದ ಸಾಮ್ರಾಜ್ಯ ವಿಜಯನಗರ ಸಾಮ್ರಾಜ್ಯವಾಗಿತ್ತು. ಆಗ ಈ ಭಾಗ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಗೆ ಒಳಪಟ್ಟಿತ್ತು ಅನ್ನೋದು ನಮಗೆಲ್ಲ ಹೆಮ್ಮೆ ತರುವಂಥದ್ದು ಎಂದು ಶಾಸಕ, ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದ ಪಾರ್ವತಿ ಸಂಗಮೇಶ್ವರ ದೇವಸ್ಥಾನ ಆವರಣದಲ್ಲಿ ಶ್ರಾವಣ ಮಾಸದ ಪ್ರಯುಕ್ತ ನಡೆಯುತ್ತಿರುವ ಮಹಾದಾಸೋಹಿ ಕಲಬುರಗಿಯ ಶರಣಬಸವೇಶ್ವರ ಮಹಾಪುರಾಣ ಪ್ರವಚನದಲ್ಲಿ ಯುವಕ ಮಂಡಳಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜಗತ್ತಿನಲ್ಲಿ ಹೇಗೆ ಬದುಕಬೇಕು ಅನ್ನೋದನ್ನು ಹೇಳಿಕೊಟ್ಟ ದೇಶ ನಮ್ಮ ಭಾರತ. ಕಾಯಕ ಮಾಡುತ್ತಲೇ ಸಂಸ್ಕೃತಿ, ಸಂಸ್ಕಾರ ಪಾಲಿಸುತ್ತ ಆಧ್ಯಾತ್ಮದ ಒಲವನ್ನು ಹೊಂದಿರುವ ಈ ದೇಶದ ಹಿರಿಮೆ ಬೇರೆ ಯಾವ ದೇಶದಲ್ಲೂ ಕಂಡು ಬರೊಲ್ಲ. ಇದು ಶರಣರು, ಸಂತರ ನಾಡು. ಇಂಥ ನಾಡಿನಲ್ಲಿ ಪ್ರವಚನ ನಡೆದರೆ ಮನೆ ಮನೆಗಳಿಂದ ತಾಯಂದಿರು ಬರುತ್ತಾರೆ. ಇದು ನಮ್ಮ ಸಂಸ್ಕೃತಿ. ದಾರಿ ಹೋಕರಿಗೂ ದಾಸೋಹ ಮಾಡುವ ಸಂಪ್ರದಾಯ ಇಂದಿಗೂ ನಮ್ಮ ದೇಶ, ನಮ್ಮ ರಾಜ್ಯದಲ್ಲಿದೆ ಎಂದರು.

ಪ್ರವಚನಕಾರ ವೇದಮೂರ್ತಿ ಶಿವಮೂರ್ತಿ ಶಾಸ್ತ್ರಿಯವರು, ವಿಜಯಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಗಣ್ಯರಾದ ಪ್ರಸನ್ನಕುಮಾರ ಜಹಾಗೀರದಾರ, ಬಸನಗೌಡ ಪಾಟೀಲ, ಅಶೋಕ ಬೋವಿ, ತಾಪಂ ಮಾಜಿ ಸದಸ್ಯ ಮಲ್ಲನಗೌಡ ಪಾಟೀಲ, ಪಣಯ್ಯ ಹಿರೇಮಠ, ಬಿ.ಬಿ. ಭೋವಿ, ಸಂಗಪ್ಪ ರಾಮೋಡಗಿ, ಅಡಿವೆಪ್ಪ ನಾಡಗೌಡ್ರ, ಶೇಖಪ್ಪ ನಾರಯಣಪುರ, ರುದ್ರು ರಾಮೋಡಗಿ, ಮಲ್ಲಿಕಾರ್ಜನ ಗುಡಗುಂಟಿ, ಗಿರೀಶ ಲಿಂಗದಳ್ಳಿ, ಎಚ್‌.ಎನ್‌. ಭೋವಿ, ಆದೇಶ ನಾಗರತ್ತಿ ಮುಂತಾದವರು ಇದ್ದರು.

ಸಂಗಮೇಶ್ವರ ದೇವಸ್ಥಾನದ ನೂತನ ತೇರು ನಿರ್ಮಾಣಕ್ಕೆ ವೈಯುಕ್ತಿಕವಾಗಿ 2 ಲಕ್ಷ ರೂ. ನೆರವು ನೀಡುತ್ತೇನೆ. ಒಂದು ವೇಳೆ ತೇರು ಪೂರ್ಣಗೊಳ್ಳಲು ಇನ್ನೂ ಹೆಚ್ಚಿನ ನೆರವು ಬೇಕಾದರೂ ನೀಡುತ್ತೇನೆ.
ಎ.ಎಸ್‌. ಪಾಟೀಲ ನಡಹಳ್ಳಿ, ಶಾಸಕರು

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.