ದೈಹಿಕ-ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ: ಡಾ| ಸತೀಶ ತಿವಾರಿ
Team Udayavani, Jan 3, 2022, 2:56 PM IST
ಮುದ್ದೇಬಿಹಾಳ: ನಿತ್ಯವೂ ಒತ್ತಡದಲ್ಲಿ ಜನರ ಸೇವೆ ಸಲ್ಲಿಸುವ ಆರೋಗ್ಯ ಇಲಾಖೆ ಸಿಬ್ಬಂದಿ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅವಶ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ ಹೇಳಿದರು.
ಇಲ್ಲಿನ ವಿಬಿಸಿ ಪ್ರೌಢಶಾಲೆ ಮೈದಾನದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ, ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಜ. 26ರ ಗಣರಾಜ್ಯೋತ್ಸವ ಅಂಗವಾಗಿ ಆರಂಭಗೊಂಡ ಹೆಲ್ತ್ ಪ್ರೀಮಿಯರ್ ಲೀಗ್ (ಎಚ್ ಪಿಎಲ್) ಮುದ್ದೇಬಿಹಾಳ ಕ್ರಿಕೆಟ್ ಸೀಜನ್-3 ಪಂದ್ಯಾವಳಿಗೆ ರವಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆ ನೌಕರರು ಹಲವಾರು ಕೆಲಸಗಳ ಮಧ್ಯೆ, ಅದರಲ್ಲೂ ಇತ್ತೀಚಿನ ಕೋವಿಡ್ನಂಥ ಕಠಿಣ ಕೆಲಸದ ಒತ್ತಡದಲ್ಲಿ ದಿನದ 24 ತಾಸು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಕ್ರೀಡೆ ಪುನಶ್ಚೇತನ ನೀಡುವಂಥದ್ದಾಗಿದೆ. ಇಲಾಖೆ ನೌಕರರೆಲ್ಲರೂ ಸೇರಿಕೊಂಡು ಏರ್ಪಡಿಸಿರುವ ಈ ಪಂದ್ಯಾವಳಿಯನ್ನು ರಜಾ ದಿನಗಳಲ್ಲಿ ಮಾತ್ರ ನಡೆಸಲು ನಿರ್ಧರಿಸಿರುವುದು ಒಳ್ಳೆ ವಿಚಾರವಾಗಿದೆ. ನೌಕರರು ಪರಸ್ಪರ ಪ್ರೀತಿ-ವಿಶ್ವಾಸದಿಂದ ಮತ್ತು ಮನರಂಜನೆಗಾಗಿ ಪಾಲ್ಗೊಳ್ಳಬೇಕು ಎಂದರು.
ಕರ್ನಾಟಕ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಡಾ| ಬಾಬಾಸಾಹೇಬ ವಿಜಯದಾರ, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಅನಿಲಕುಮಾರ ಶೇಗುಣಸಿ, ಕೊಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾ ಧಿಕಾರಿ ಡಾ| ಶ್ರೀಶೈಲ್ ಹುಕ್ಕೇರಿ, ವಿಜಯಪುರದ ಜೆಒಸಿಸಿ ಬ್ಯಾಂಕ್ನ ಉಪಾಧ್ಯಕ್ಷ ಆನಂದಗೌಡ ಬಿರಾದಾರ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಬಿ.ಬಿ. ದೇಸಾಯಿ ಮುಖ್ಯ ಅತಿಥಿಗಳಾಗಿದ್ದರು.
ಬಸವರಾಜ ಕೋರಡ್ಡಿ ಮೊದಲಿಗರಾಗಿ ಬ್ಯಾಟ್ ಬೀಸಿ ಪ್ರಥಮ ಪಂದ್ಯಕ್ಕೆ ಚಾಲನೆ ನೀಡಿದರು. ವಿಜಯಪುರ, ಸಿಂದಗಿ, ತಾಳಿಕೋಟೆ, ಹುನಗುಂದ ಮತ್ತು ಮುದ್ದೇಬಿಹಾಳ ಸೇರಿ ಒಟ್ಟು 13 ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿವೆ. ವಿಜೇತ ತಂಡಕ್ಕೆ ಜ. 26 ರ ಗಣರಾಜ್ಯೋತ್ಸವ ದಿನದಂದು ಬಹುಮಾನ ವಿತರಿಸಿ ಪುರಸ್ಕರಿಸಲಾಗುತ್ತದೆ. ಪಂದ್ಯಾವಳಿಯ ಆಯೋಜಕರಾದ ಆರೋಗ್ಯ ಇಲಾಖೆಯ ಡಾ| ಎಂ.ಎಸ್. ಪಾಟೀಲ, ಡಾ| ಪ್ರವೀಣ ಸುಣಕಲ್ಲ, ಯಲ್ಲಪ್ಪ ಚಲವಾದಿ, ಎಂ.ಎಸ್. ಗೌಡರ, ಬಸವರಾಜ, ಸತೀಶ ಕುಲಕರ್ಣಿ, ವೀರೇಶ ಎಸ್ .ಬಿ., ಸುನೀಲ ನಿಂಬಾಳ, ಸಚಿನ ರಾಠೊಡ, ಹಮೀದ ಹಾಲ್ಯಾಳ, ಕೃಷ್ಣಾ ಚವ್ಹಾಣ, ಸಿದ್ದು ಬಿದಗೊಂಡ, ಎಸ್.ಸಿ. ರುದ್ರವಾಡಿ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?