![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಕ್ರೀಡೆಗಳು ಸಹಕಾರಿ: ಧರಿಕಾರ
Team Udayavani, Aug 3, 2022, 4:45 PM IST
![10-sports](https://www.udayavani.com/wp-content/uploads/2022/08/10-sports-620x225.jpg)
ಮುದ್ದೇಬಿಹಾಳ: ವಿದ್ಯಾರ್ಥಿ ಜೀವನದಲ್ಲಿ ಆಟಗಳು ಆರೋಗ್ಯ ವೃದ್ಧಿಸುವುದು ಮಾತ್ರವಲ್ಲದೆ ಬೌದ್ಧಿಕ ಶಕ್ತಿಯನ್ನೂ ಬಲಪಡಿಸುತ್ತವೆ. ಆತ್ಮವಿಶ್ವಾಸದ ಜೊತೆಗೆ ಸಹೋದರತ್ವ ಗುಣಗಳನ್ನೂ ಬೆಳೆಸುತ್ತವೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಹೇಳಿದರು.
ಸಂತ ಕನಕದಾಸ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಕಾರಿ ಮತ್ತು ಕ್ಷೇತ್ರ ಸಮನ್ವಯಾಕಾರಿ ಕಾರ್ಯಾಲಯದ ವತಿಯಿಂದ ಏರ್ಪಡಿಸಿದ್ದ ನಗರ ದಕ್ಷಿಣ ವಲಯ ಮಟ್ಟದ ಖಾಸಗಿ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಮಾತನಾಡಿ, ಕ್ರೀಡೆಗಳಲ್ಲಿ ಯಾರೇ ಗೆಲ್ಲಲಿ, ಸೋಲಲಿ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಗುಣವನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು. ಇದು ದೇಶದ ಉತ್ತಮ ಪ್ರಜೆಗಳನ್ನು ರೂಪಿಸಲು ನೆರವಾಗುತ್ತದೆ ಎಂದರು.
ತಾಲೂಕು ಕುರುಬರ ಸಂಘದ ಉಪಾಧ್ಯಕ್ಷ ಸಂತೋಷ, ಎಸ್ಡಿಎಂಸಿ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ, ಕಾರ್ಯದರ್ಶಿ ಬಿ.ಎಸ್.ಮೇಟಿ, ಸಂಘಟನಾ ಕಾರ್ಯದರ್ಶಿ ನಾಗಪ್ಪ ರೂಢಗಿ, ಬಿಆರ್ಪಿ ಸಿದ್ದನಗೌಡ, ಶಿಕ್ಷಣ ಸಂಯೋಜಕರಾದ ವಿಜಯಲಕ್ಷ್ಮೀ ಚಿಲ್ಲಾಳಶೆಟ್ಟರ, ಎಸ್.ಎಸ್.ರಾಮತಾಳ, ಮುಖ್ಯಾಧ್ಯಾಪಕ ಬಿ.ಎಸ್ .ಪಣೇದಕಟ್ಟಿ ಇದ್ದರು. ಶಿಕ್ಷಕಿ ಎಂ.ಆರ್.ತಡಸದ ಪ್ರಾರ್ಥಿಸಿದರು. ಸಿಆರ್ಪಿ ಜಿ.ಎಚ್.ಚವ್ಹಾಣ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಾಧ್ಯಾಪಕ ಎಂ.ಎನ್.ಯರಝರಿ ಸ್ವಾಗತಿಸಿದರು. ಶಿಕ್ಷಕ ಗೋಪಾಲ ಹೂಗಾರ ನಿರೂಪಿಸಿದರು. ಶಿಕ್ಷಕ ಎಂ.ಸಿ.ಕಬಾಡೆ ವಂದಿಸಿದರು.
ವಿವಿಧ ಆಟಗಳ ಫಲಿತಾಂಶ: ಬಾಲಕರ ಗುಂಪು ಆಟಗಳಾದ ಖೋಖೋದಲ್ಲಿ ಸಂತ ಕನಕದಾಸ ಪ್ರಾಥಮಿಕ ಶಾಲೆ, ಕಬಡ್ಡಿಯಲ್ಲಿ ಜ್ಞಾನಭಾರತಿ ಪ್ರಾಥಮಿಕ ಶಾಲೆ, ವಾಲಿಬಾಲ್ನಲ್ಲಿ ಇಂದಿರಾನಗರದ ಪ್ರಾಥಮಿಕ ಶಾಲೆ, ರಿಯೆಲ್ಲಿ ಜ್ಞಾನಭಾರತಿ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡರು. ಬಾಲಕರ ವೈಯುಕ್ತಿಕ ಆಟಗಳಾದ 100 ಮೀ. ಓಟದಲ್ಲಿ ಜ್ಞಾನಭಾರತಿ ಶಾಲೆಯ ಅಭಿಷೇಕ ರಾಠೊಡ ಪ್ರಥಮ, ಚೇತನ ಪ್ರಾಥಮಿಕ ಶಾಲೆಯ ಸಾಗರ ಕುಂಬಾರ ದ್ವಿತೀಯ, 200 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ರಾಕೇಶ ಚವ್ಹಾಣ ಪ್ರಥಮ, ಚೇತನ ಶಾಲೆಯ ಸಾಗರ ಕುಂಬಾರ ದ್ವಿತೀಯ, 400 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ರಾಕೇಶ್ ಚವ್ಹಾಣ ಪ್ರಥಮ, ಜ್ಞಾನಭಾರತಿ ಶಾಲೆಯ ಸುದೀಪ ರಾಠೊಡ ದ್ವಿತೀಯ, 600 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ರೋಹಿತ್ ಹಿರೇಮಠ ಪ್ರಥಮ, ರಾಕೇಶ್ ಚವ್ಹಾಣ ದ್ವಿತೀಯ, ಚಕ್ರ ಎಸೆತದಲ್ಲಿ ಸಂತ ಕನಕದಾಸ ಶಾಲೆಯ ಸಂತೋಷ ನಾಯಕ ದ್ವಿತೀಯ ಸ್ಥಾನ ಪಡೆದುಕೊಂಡರು.
ಬಾಲಕಿಯರ ಗುಂಪು ಆಟಗಳಾದ ಖೋಖೋ, ವಾಲಿಬಾಲ್, ರಿಲೇಗಳಲ್ಲಿ ಸಂತ ಕನಕದಾಸ ಪ್ರಾಥಮಿಕ ಶಾಲೆ ತಂಡ ಪ್ರಥಮ, ಕಬಡ್ಡಿಯಲ್ಲಿ ಜ್ಞಾನಭಾರತಿ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡವು. ಬಾಲಕಿಯರ ವೈಯುಕ್ತಿಕ ಆಟಗಳಾದ 100 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ಐಶ್ವರ್ಯ ಹಡಲಗೇರಿ ಪ್ರಥಮ, ಜ್ಞಾನಭಾರತಿ ಶಾಲೆಯ ಪಲ್ಲವಿ ಬಿರಾದಾರ ದ್ವಿತೀಯ, 200 ಮೀ. ಓಟದಲ್ಲಿ ಜ್ಞಾನಭಾರತಿ ಶಾಲೆಯ ಪಲ್ಲವಿ ಬಿರಾದಾರ ಪ್ರಥಮ, ಸಂತ ಕನಕದಾಸ ಶಾಲೆಯ ಬಸಮ್ಮ ಚಿನಿವಾರ ದ್ವಿತೀಯ, 400 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ಐಶ್ವರ್ಯ ಹಡಲಗೇರಿ ಪ್ರಥಮ, ಜ್ಞಾನಭಾರತಿ ಶಾಲೆಯ ಪಲ್ಲವಿ ಬಿರಾದಾರ ದ್ವಿತೀಯ, 600 ಮೀ. ಓಟದಲ್ಲಿ ಸಂತ ಕನಕದಾಸ ಶಾಲೆಯ ಭಾಗ್ಯಶ್ರೀ ಯಾಳವಾರ ಪ್ರಥಮ, ಬಸಮ್ಮ ಚಿನಿವಾರ ದ್ವಿತೀಯ ಸ್ಥಾನ ಪಡೆದುಕೊಂಡರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.