ಕನ್ಹಯ್ಯಲಾಲ್ ಹಂತಕರಿಗೆ ಕಠಿಣ ಶಿಕ್ಷೆಯಾಗಲಿ: ಶ್ರೀಶೈಲಶ್ರೀ
Team Udayavani, Jul 2, 2022, 6:12 PM IST
ವಿಜಯಪುರ: ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ ಅಮಾನವೀಯ ಕೃತ್ಯ ಖಂಡನಾರ್ಹ. ಪ್ರಜಾ ಪ್ರಭುತ್ವದ ಈ ದೇಶದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅಭಿಪ್ರಾಯ ಬೇಧವಿದ್ದಲ್ಲಿ ಸಮರ್ಥ ಅಭಿಪ್ರಾಯದ ಮೂಲಕವೇ ವಿರೋಧಿಸಿ, ಗೆಲ್ಲಬೇಕು. ಆದರೆ ಜೀವ ಘಾತುಕ ಹತ್ಯೆ ಮೂಲಕ ಅಲ್ಲ ಎಂದು ಶ್ರೀಶೈಲ ಸೂರ್ಯಸಿಂಹಾಸನ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಶ್ರೀಗಳು ಅಭಿಪ್ರಾಯಪಟ್ಟರು.
ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಹಿಂಸೆಯನ್ನು ಪ್ರತಿಪಾದಿಸುವ ಇಂಥವರಿಗೆ ಕಠಿಣ ಶಿಕ್ಷೆಯಾಗಬೇಕು. ಹೇಯವಾದ ಈ ಕೃತ್ಯದಲ್ಲಿ ಭಾಗಿಯಾದ ಹಾಗೂ ಇಂಥ ಕೃತ್ಯಗಳಿಗೆ ಪ್ರಚೋದನೆ ನೀಡುವವರಿಗೂ ಭವಿಷ್ಯದಲ್ಲಿ ಇಂಥ ಘಟನೆಗಳು ಸಂಭವಿಸದಂತೆ ಎಚ್ಚರಿಕೆಯ ಪಾಠವಾಗುವಂತೆ ಕೃತ್ಯದಲ್ಲಿ ಭಾಗಿಯಾದ ಹಾಗೂ ಪ್ರಚೋದಿಸಿದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಸಿಎಂ ಅಭ್ಯರ್ಥಿಗಳನ್ನು ಘೋಷಿಸಿ: ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸಿ.ಎಂ.ಇಬ್ರಾಹಿಂ ಸವಾಲು
ಶ್ರೀಶೈಲ ಕ್ಷೇತ್ರದಲ್ಲಿ ಕರ್ನಾಟಕದ ಭಕ್ತರ ಮೇಲೆ, ಸಾರಿಗೆ ಸಂಸ್ಥೆಯ ಸಿಬ್ಬಂದಿ ಮೇಲೆ, ಕನ್ನಡಿಗರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಇಂಥ ಘಟನೆಗಳು ಯಾರೋ ಕೆಲವರ ಕುತಂತ್ರದಿಂದ ಎರಡು ರಾಜ್ಯಗಳ ಭಾವನೆಗಳಿಗೆ ಧಕ್ಕೆ ತರುತ್ತಿವೆ. ವೈಯಕ್ತಿಕ ಘರ್ಷಣೆಗಳು ರಾಜ್ಯದ ಘರ್ಷಣೆಗೆ ಕಾರಣ ಆಗಬಾರದು ಎಂದರು.
ಶ್ರೀಶೈಲದಲ್ಲಿ ಭಕ್ತರ ಮೇಲೆ ಹಲ್ಲೆ ಘಟನೆ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿ ಸಮಸ್ಯೆ ಇತ್ಯರ್ಥಪಡಿಸಲಾಗಿದೆ. ಪದೇ ಪದೇ ಇಂಥ ಘಟನೆಗಳು ಜರುಗಂದಂತೆ ನಿಗ್ರಹಿಸಲು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ಮೀಸಲಾತಿ ಹೋರಾಟ ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ ಶ್ರೀಗಳು, ಸಮಾಜದಲ್ಲಿ ಮೇಲು-ಕೀಳು ಎಂಬ ಜಾತಿ ವ್ಯವಸ್ಥೆ ಜೀವಂತ ಇರುವ ವರೆಗೂ ಸೌಲಭ್ಯಗಳಿಗಾಗಿ ಮೀಸಲಾತಿ ಹೋರಾಟ ನಡೆಯುತ್ತಲೇ ಇರುತ್ತದೆ. ಸರ್ಕಾರದ ಸೌಲಭ್ಯ ಎಲ್ಲ ಸಮುದಾಯದ ಜನರಿಗೆ ಸಿಗಬೇಕು. ಇದಕ್ಕಾಗಿ ನ್ಯಾಯ ಸಮ್ಮತವಾಗಿರುವ ಬೇಡಿಕೆ ಇರುವ ಸಮುದಾಯದ ಬೇಡಿಕೆ ಈಡೇರಿಸುವುದು ಸರ್ಕಾರದ ಕರ್ತವ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ