SSLC Result: ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ
Team Udayavani, May 9, 2024, 2:30 PM IST
ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಸರ್ಕಾರಿ ಆದರ್ಶ ಆರ್.ಎಂ.ಎಸ್.ಎ. ಶಾಲೆಯ ವಿದ್ಯಾರ್ಥಿನಿ ಢವಳಗಿ ಗ್ರಾಮದ ಪವಿತ್ರಾ ಮಡಿವಾಳಪ್ಪ ಗೌಡ ಕೊಣ್ಣೂರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಇಂಗ್ಲೀಷ್ ಮಾಧ್ಯಮ ವಿಭಾಗದಲ್ಲಿ 623 ಅಂಕ ಪಡೆದು ರಾಜ್ಯಕ್ಕೆ 3ನೇ ಮತ್ತು ವಿಜಯಪುರ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾಳೆ.
ಇಂಗ್ಲೀಷ್ ಮತ್ತು ವಿಜ್ಞಾನದಲ್ಲಿ ತಲಾ 99 ಅಂಕ, ಕನ್ನಡದಲ್ಲಿ 125, ಉಳಿದೆಲ್ಲ ವಿಷಯಗಳಿಗೆ 100 ಅಂಕ ಗಳಿಸಿದ್ದಾಳೆ.
ಇವರ ತಂದೆ ಪಿಯುಸಿವರೆಗೆ ಓದಿದ್ದು ಕಲಬುರ್ಗಿ ಸಾರಿಗೆ ಘಟಕದಲ್ಲಿ ಕಂಡಕ್ಟರ್ ಆಗಿದ್ದಾರೆ. ತಾಯಿ ಎಸ್ಸೆಸ್ಸೆಲ್ಸಿವರೆಗೆ ಓದಿದ್ದು ಗೃಹಿಣಿಯಾಗಿದ್ದಾರೆ.
ಹಾರ್ಡ್ ವರ್ಕ್ ಗಿಂತ ಸ್ಮಾರ್ಟ್ ವರ್ಕ್ ಗೆ ಒತ್ತು ಕೊಟ್ಟಿದ್ದು, ಈ ಸಾಧನೆಗೆ ಅವಕಾಶವಾಗಿದೆ ಎಂದಿರುವ ಆಕೆ ಉತ್ತಮ ಮಾರ್ಗದರ್ಶನ ನೀಡಿದ ಶಾಲೆಯ ಎಚ್ಎಂ, ಶಿಕ್ಷಕರನ್ನು ಸ್ಮರಿಸುತ್ತಾಳೆ. ಪಿಯುಸಿ ವಿಜ್ಞಾನದ ನಂತರ ಎಂಬಿಬಿಎಸ್ ಮಾಡುವ ಕನಸು ಈಕೆಯದ್ದಾಗಿದೆ.
ಫಲಿತಾಂಶ ಹೊರಬಿದ್ದ ಕೂಡಲೇ ತಂದೆ, ತಾಯಿ ಜೊತೆ ಶಾಲೆಗೆ ಬಂದಿದ್ದ ಪವಿತ್ರಾಳನ್ನು ಬಿಇಓ ಬಿ.ಎಸ್. ಸಾವಳಗಿ, ಇಸಿಓ ಮತ್ತು ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿ ಎಚ್.ಎ.ಮೇಟಿ, ಎಚ್ಎಂ ನೀಲಮ್ಮ ತೆಗ್ಗಿನಮಠ, ಶಿಕ್ಷಕರು ಸನ್ಮಾನಿಸಿ, ಸಿಹಿ ತಿನ್ನಿಸಿ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ
ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ
MUST WATCH
ಹೊಸ ಸೇರ್ಪಡೆ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’