ಹಸೆಮಣೆ ಏರಿ 15 ದಿನದಲ್ಲೇ ಕೋವಿಡ್ ಸೇವೆಗೆ ಹಾಜರಾದ ನರ್ಸ್‌

ಕುಟುಂಬಸ್ಥರ ಪ್ರೋತ್ಸಾಹದಿಂದ ಸೇವೆ

Team Udayavani, May 8, 2021, 12:56 PM IST

ಹಸೆಮಣೆ ಏರಿ 15 ದಿನದಲ್ಲೇ ಕೋವಿಡ್ ಸೇವೆಗೆ ಹಾಜರಾದ ನರ್ಸ್‌

ಇಂಡಿ: ಹಸೆಮಣೆ ಏರಿ ಕೇವಲ 15 ದಿನಗಳಲ್ಲಿಯೇ ಮತ್ತೆ ಕೆಲಸಕ್ಕೆ ಹಾಜರಾಗುವ ಮೂಲಕ ಕೋವಿಡ್  ರೋಗಿಗಳ ಸೇವೆಯಲ್ಲಿ ದೇವರನ್ನು ಕಾಣುತ್ತಿದ್ದಾರೆ ಸ್ಟಾಫ್‌ ನರ್ಸ್‌.

ಹೌದು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ (ಸ್ಟಾಫ್‌ ನರ್ಸ್‌) ಸೇವೆ ಸಲ್ಲಿಸುತ್ತಿರುವ ಭಾರತಿ ಹಿಟ್ನಳ್ಳಿ ಕೇವಲ 25 ದಿನಗಳ ಹಿಂದೆಯಷ್ಟೇ ತಾಲೂಕಿನ ಲೋಣಿ ಗ್ರಾಮದ ಜಟ್ಟಿಂಗರಾಯ ಉಟಗಿ ಎಂಬವರ ಜತೆ ಮದುವೆಯಾಗಿದ್ದರು. ಈಗ ಕಳೆದ ಹತ್ತು ದಿನಗಳಿಂದ ಮತ್ತೆ ಸೇವೆಗೆ ಹಾಜರಾಗಿ ಕೋವಿಡ್ ರೋಗಿಗಳ ಆರೈಕೆ ಮಾಡುತ್ತಿದ್ದಾರೆ.

ಭಾರತಿ ಹಿಟ್ನಳ್ಳಿ ಕಳೆದ ಆರು ತಿಂಗಳಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಟಾಫ್‌ ನರ್ಸ್‌ ಆಗಿ (ಗುತ್ತಿಗೆ ಆಧಾರದ ಮೇಲೆ) ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ 15 ದಿನಗಳ ಹಿಂದೆಯಷ್ಟೇ ಮದುವೆ ಕೂಡ ಆಗಿದ್ದರು. ಸೇವೆಗೆ ಹೋಗಬೇಕೆಂಬಬಯಕೆ ಇದ್ದರೂ ಪತಿ, ಅತ್ತೆ, ಮಾವ ಏನೆನ್ನುತ್ತಾರೋ?ಎನ್ನುವ ಭಯದಿಂದ ಸುಮ್ಮನಿದ್ದ ಭಾರತಿ ಕೊನೆಗೆ “ನಾನು ಸೇವೆಗೆ ಹೋಗಬೇಕೆಂದಿದ್ದೇನೆ’ ಎಂದು ಕೇಳಿ ಮನೆಯವರ ಒಪ್ಪಿಗೆ ಪಡೆದು ಸೇವೆಗೆ ಹಾಜರಾಗಿದ್ದಾರೆ.

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವುದು ಅಷ್ಟು ಸುಲಭವಲ್ಲ. ಆದರೂ ಈ ಸ್ಟಾಫ್‌ ನರ್ಸ್‌ ರೋಗಿಗಳಬಿ.ಪಿ, ಶುಗರ್‌ ಪರೀಕ್ಷೆ ಮಾಡುವುದು, ಜ್ವರ ಸೇರಿದಂತೆರೆಮ್‌ಡೆಸಿವಿಯರ್‌, ಸಪ್ರಾಕ್ಸಿನ್‌ ಸೇರಿದಂತೆ ಅವಶ್ಯಕ ಇಂಜೆಕ್ಸನ್‌ ನೀಡುವುದು, ಆಕ್ಸಿಜನ್‌ ಕೊರತೆ ಇದ್ದರೆ ಅವರಿಗೆ ಆಮ್ಲಜನಕ ಹಚ್ಚುವುದು..ಹೀಗೆ ವೈದ್ಯರ ಮಾರ್ಗದರ್ಶನದಲ್ಲಿ ಹಲವಾರು ಚಿಕಿತ್ಸೆ ನೀಡುತ್ತಿದ್ದಾರೆ.

ಆಸ್ಪತ್ರೆಯಲ್ಲಿ ರೋಗಿಗಳ ಸೇವೆ ಮಾಡುವ ಅವಕಾಶ ಎಲ್ಲರಿಗೂಸಿಗುವುದಿಲ್ಲ. ಆದರೆ ನಿನಗೆ ಆಅವಕಾಶ ಸಿಕ್ಕಿದೆ. ಹೀಗಾಗಿ ನೀನು ನಮ್ಮ ಸೇವೆಗಿಂತಲೂ ಕೋವಿಡ್ ಪೀಡಿತರಸೇವೆ ಮಾಡು, ಕಷ್ಟದಲ್ಲಿದ್ದವರ ಸೇವೆ ಮಾಡುವುದೇ ನಿಜವಾದ ಸೇವೆ ಎಂದು ಅತ್ತೆ-ಮಾವ ನನ್ನನ್ನು ಹುರಿದುಂಬಿಸಿ, ಪ್ರೋತ್ಸಾಹಿಸಿದ್ದಾರೆ. ತುಂಬಆಸಕ್ತಿಯಿಂದ ಸೇವೆ ಮಾಡುತ್ತಿದ್ದೇನೆ. ನಾನು ಮಾಡಿದ ಕೆಲಸ ನನಗೆ ತೃಪ್ತಿ ತಂದಿದೆ.ಭಾರತಿ ಹಿಟ್ನಳ್ಳಿ, ಸ್ಟಾಫ್‌ ನರ್ಸ್‌.

ಕೋವಿಡ್ ರೋಗ ವೇಗವಾಗಿ ಹರಡುತ್ತಿದ್ದರೂ ನನ್ನ ಪತ್ನಿ ರೋಗಿಗಳ ಆರೈಕೆ ಮಾಡುತ್ತೇನೆ. ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಹೀಗಾಗಿ ನಾನು ಆಸ್ಪತ್ರೆಗೆ ಹೋದರೆ ನನ್ನ ಕೈಲಾದಷ್ಟು ಜೀವ ಉಳಿಸಲು ಸಾಧ್ಯವಾಗುತ್ತದೆ. ನನಗೆ ಅವಕಾಶ ಕೊಡಿ ಎಂದು ಕೇಳಿದಾಗಮನೆಯಲ್ಲಿ ಎಲ್ಲರೂ ಅವಳ ಒಳ್ಳೆಯ ಭಾವನೆಗೆಬೆಲೆ ಕೊಟ್ಟು ಆಸ್ಪತ್ರೆಗೆ ರೋಗಿಗಳ ಸೇವೆ ಮಾಡಲು ಕಳಿಸಿದ್ದೇವೆ.ಜಟ್ಟಿಂಗರಾಯ ಉಟಗಿ, ಸ್ಟಾಫ್‌ ನರ್ಸ್‌ ಪತಿ

 

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.