ತಿಂಗಳೊಳಗೆ ವಿದ್ಯುತ್‌ ಕಾಮಗಾರಿ ಆರಂಭಿಸಿ: ಡಿಸಿ


Team Udayavani, Oct 23, 2020, 7:41 PM IST

vp-tdy-1

ವಿಜಯಪುರ: ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ನವೆಂಬರ್‌ ತಿಂಗಳೊಳಗೆ ವಿದ್ಯುತ್‌ ಕಾಮಗಾರಿ ಆರಂಭಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಸಂಬಂಧಿಸಿದ ಅಧಿಕಾರಿಗೆ ಸೂಚಿಸಿದ್ದು, ಅಲಿಯಾಬಾದ್‌ ಕೈಗಾರಿಕಾ ಪ್ರದೇಶದಲ್ಲಿ ಅತಿಕ್ರಮಣ ತೆರವಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಗುರುವಾರ ಜರುಗಿದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಬಸವನಬಾಗೇವಾಡಿ ತಾಲೂಕಿನ ಮುಳವಾಡ ಗ್ರಾಮದಲ್ಲಿ 564 ಜಮೀನಿನಲ್ಲಿ ಮೂಲಭೂತ ಸೌಕರ್ಯ ಕಾಮಗಾರಿಗಳು 90ರಷ್ಟು ಮುಗಿದಿದೆ. ಬಾಕಿ ಕಾಮಗಾರಿಗಳನ್ನು ತಿಂಗಳಾಂತ್ಯಕ್ಕೆ ಮುಗಿಸಬೇಕು. ಅಲ್ಲದೇ ನವೆಂಬರ್‌ ತಿಂಗಳಲ್ಲಿ ಸದರಿ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್‌ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದರು.

ಮುಳವಾಡ ಗ್ರಾಮದ ಮೊದಲ ಹಂತದ ಕಾಮಗಾರಿಗೆ ಸಂಬಂಧಿಸಿದಂತೆ ಸಿವಿಲ್‌ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಶೀಘ್ರವಾಗಿ ವಿದ್ಯುತ್‌ ಸೌಲಭ್ಯ ಕಲ್ಪಿಸಲು ಅನುಕೂಲವಾಗುವಂತೆ ವಿದ್ಯುತ್‌ ಇಲಾಖೆಯ ಸಂಬಂಧಪಟ್ಟ ಅಭಿಯಂತರು ನವೆಂಬರ್‌ ಅಂತ್ಯದಲ್ಲಿ ಟೆಂಡರ್‌ ಪ್ರಕ್ರಿಯೆ ಆರಂಭಿಸಿ, ಜನೇವರಿ ತಿಂಗಳಲ್ಲಿ ಕಾಮಗಾರಿ ಆರಂಭಿಸುವಂತೆ ಸೂಚಿಸಿದರು.

ಮುಳವಾಡ ಹಂತ-1ರಲ್ಲಿ ಕೈಗಾರಿಕಾ ಪ್ರದೇಶದ ಮೂಲಸೌಕರ್ಯ ಕಾಮಗಾರಿಗಳು ಪೂರ್ಣ ಪ್ರಮಾಣದಲ್ಲಿ ಮುಕ್ತಾಯಗೊಂಡ ನಂತರ ಸರ್ಕಾರದ ಮಾರ್ಗಸೂಚಿಯಂತೆ ನಿವೇಶನ ಹಂಚಿಕೆ ಮಾಡುವಂತೆ ತಿಳಿಸಿದರು.

ತೆರವಿಗೆ ತಾಕೀತು: ಜಿಲ್ಲೆಯಲ್ಲಿ ವಿವಿಧ ಕೈಗಾರಿಕಾ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಸಿಂದಗಿ ತಾಲೂಕಾ ಸಣ್ಣ ಕೈಗಾರಿಕಾ ಉದ್ಯಮಿದಾರರು ಹಾಗೂ ಸೇವಾ ಸಂಸ್ಥೆಗಳ ಕೋರಿಕೆ ಮೇರೆಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಸಿಂದಗಿ ಕೈಗಾರಿಕಾ ಪ್ರದೇಶದಲ್ಲಿ 458.20 ಚಮೀ ಸ್ಥಳವನ್ನು ನಿಯಮಾವಳಿಯಂತೆ ದರ ಪಡೆದು ಹಂಚಿಕೆ ಪತ್ರ ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು. ಕೆಐಎಡಿಬಿ ಕೈಗಾರಿಕಾ ಪ್ರದೇಶಆಲಿಯಾಬಾದ್‌ ಬ್ಲಾಕ್‌-2 ರಸ್ತೆ ಬದಿ ಅನ ಧಿಕೃತ ಅಂಗಡಿಗಳನ್ನು 10 ದಿನಗಳಲ್ಲಿ ತೆರವುಗೊಳಿಸಲು ತಾಕೀತು ಮಾಡಿದರು.

ಸಿಂದಗಿ ತಾಲೂಕಿನ ಸಣ್ಣ ಕೈಗಾರಿಕಾ ಉದ್ಯಮದಾರರ ನಿವೇಶನ ಅಳತೆ ಸರಿಪಡಿಸಿ ನಿವೇಶನಗಳ ಸರಹದ್ದನ್ನು ಹೊಸದಾಗಿ ಸರ್ವೇ ಮಾಡಿಸಬೇಕು. ನೀರು, ವಿದ್ಯುತ್‌ ಸೌಲಭ್ಯ ಸೇರಿ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು ಎಂಬ ಆಗ್ರಹ ವ್ಯಕ್ತವಾಯಿತು. ಮಲಘಾಣ ಗ್ರಾಮದಲ್ಲಿ ಬೆಲ್ಲ ತಯಾರಿಕಾ ಘಟಕ ಸ್ಥಾಪನೆಗೆ ಮೆ.ಮಹಾಲಕ್ಷ್ಮೀಜಾಗೇರಿ ಕೈಗಾರಿಕಾ ಸಂಸ್ಥೆಗೆ 1 ಎಕರೆ ನಿವೇಶನ, ಹೆಸ್ಕಾಂದಿಂದ 30 ಕೆವಿ ವಿದ್ಯುತ್‌ ಮಂಜೂರಾತಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಲಾಯಿತು. ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ. ಸಿದ್ದಣ್ಣ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.