ಮಿತಿ-ಸಾಮರ್ಥ್ಯ ಮೀರಿ ಗಣಿಗಾರಿಕೆ ನಡೆಸಿದರೆ ಕಠಿಣ ಕ್ರಮ: ಸುನೀಲಕುಮಾರ
ಅಕ್ರಮ ಗಣಿಗಾರಿಕೆ, ಸ್ಫೋಟಕ ಬಳಕೆ ಕುರಿತು ಅಮೂಲಾಗ್ರ ಸಮೀಕ್ಷೆ ನಡೆಸುತ್ತೇನೆ.
Team Udayavani, Jan 23, 2021, 4:46 PM IST
ವಿಜಯಪುರ: ಅಕ್ರಮ ಗಣಿಗಾರಿಕೆ ಪತ್ತೆ ಹಚ್ಚಲು ಅದರಲ್ಲೂ ಪರವಾನಿಗೆ ಪಡೆದಿರುವ ಪ್ರದೇಶ ಹಾಗೂ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಿದ ಕುರಿತು ಪರಿಶೀಲನೆ ನಡೆಸಲು ಜಿಲ್ಲಾಡಳಿತ ಡಿಜಿಪಿಎಸ್ ತಂತ್ರಜ್ಞಾನ ಬಳಸಲು ಮುಂದಾಗಿದೆ.
ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲು 89 ಗಣಿಗಳಿಗೆ ಪರವಾನಿಗೆ ನೀಡಿದ್ದರೆ, ಕಲ್ಲು ಕತ್ತರಿಸುವ ಕ್ರಸಿಂಗ್ ನಡೆಸಲು 83 ಲೈಸೆನ್ಸ್ ನೀಡಿದ್ದು, ಈಚೆಗೆ ಮತ್ತೆ 4 ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ. ಆದರೆ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಕೇಂದ್ರಗಳಲ್ಲಿ ಸೊ ಸ್ಫೋಟಕ ಬಳಸಿ ಕಲ್ಲು ಗಣಿಗಾರಿಕೆ ನಡೆಸಲು ಪರವಾನಿಗೆ ಪಡೆದಿರುವ ಕುರಿತು ಜಿಲ್ಲಾಡಳಿತ ಪರಿಶೀಲನೆ ನಡೆಸಲು ಮುಂದಾಗಿದೆ.
ಕಲ್ಲು ಗಣಿಗಾರಿಕೆ ನಡೆಸಲು ಜಿಲ್ಲೆಯಲ್ಲಿ ಅನುಮತಿ ನೀಡಿದ ಪ್ರದೇಶಗಳಲ್ಲಿ ನಿಯಮ ಮೀರಿ, ಸಾಮರ್ಥ್ಯ ಮೀರಿ ಕಲ್ಲು ಗಣಿಗಾರಿಕೆ ನಡೆಸಿದ ಕುರಿತು ಜಿಲ್ಲಾಡಳಿತ ಪರಿಶೀಲನೆಗೆ ಮುಂದಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಪರವಾನಿಗೆ ಪಡೆದ ಪ್ರದೇಶದಲ್ಲೂ ಪರಿಮಿತಿ ಸಾಮರ್ಥ್ಯ ಮೀರಿ ಗಣಿಗಾರಿಕೆ ನಡೆಸಿದ್ದನ್ನು ಪತ್ತೆ ಹಚ್ಚಲು ಡಿಜಿಪಿಎಸ್ ತಂತ್ರಜ್ಞಾನ ಬಳಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸುನೀಲಕುಮಾರ ಮಾಹಿತಿ ನೀಡಿದ್ದಾರೆ.
“ಉದಯವಾಣಿ’ ಜತೆ ಮಾತನಾಡಿದ ಜಿಲ್ಲಾಧಿಕಾರಿ ಸುನೀಲಕುಮಾರ, 2018ರಲ್ಲಿ ಸರ್ಕಾರ ಪರವಾನಿಗೆ ಸಹಿತ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಪ್ರದೇಶದಲ್ಲಿ ಮತ್ತೆ 20 ವರ್ಷ ನವೀಕರಿಸಿದೆ. ಹೀಗಾಗಿ ನವೀಕೃತ ಕಲ್ಲು ಗಣಿಗಾರಿಕೆ, ಅಕ್ರಮ ಗಣಿಗಾರಿಕೆ, ಸ್ಫೋಟಕ ಬಳಕೆ ಕುರಿತು ಅಮೂಲಾಗ್ರ ಸಮೀಕ್ಷೆ ನಡೆಸುತ್ತೇನೆ. ಇದಕ್ಕಾಗಿ ಶೀಘ್ರವೇ ಸಂಬಂಧಿಸಿದ ಅಧಿಕಾರಿಗಳ ಹಾಗೂ ಲೈಸೆನ್ಸ್ ಹೊಂದಿರುವ ಗಣಿಗಾರಿಕೆ ಮಾಲೀಕರು, ಕಲ್ಲು ಕಡಿ ಮಾಡುವ ಘಟಕಗಳ ಮಾಲೀಕರ ಸಭೆ ಕರೆದು ಪರಿಶೀಲನೆ ನಡೆಸುವುದಾಗಿ ಹೇಳಿದರು.
ಪರವಾನಿಗೆ ಪಡೆದಿರುವ ಪ್ರದೇಶದಲ್ಲಿ ಅಕ್ರಮವಾಗಿ ಅಧಿ ಕ ಪ್ರಮಾಣದಲ್ಲಿ ಕಲ್ಲು ಗಣಿಗಾರಿಕೆ ನಡೆಸಿದ್ದಲ್ಲಿ ನಿಖರವಾಗಿ ಪತ್ತೆ ಹಚ್ಚಲು ಸಾಧ್ಯವಿದೆ. ಇದರಿಂದ ಸಕ್ರಮದ ಹೆಸರಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿ ಸರ್ಕಾರಕ್ಕೆ ರಾಯಲ್ಟಿ ಕಟ್ಟುವುದನ್ನು ವಂಚಿಸಿರುವ ಪ್ರಕರಣಗಳನ್ನು ನಿಖರವಾಗಿ ಗುರುತಿಸಲು ಸಾಧ್ಯವಿದೆ. ಹೀಗಾಗಿ ಜಿಲ್ಲೆಯಲ್ಲಿ ಡಿಜಿಪಿಎಸ್ ತಂತ್ರಜ್ಞಾನದ ಮೂಲಕ ಗಣಿಗಾರಿಕೆ ಪರಿಶೀಲನೆ ನಡೆಯಲಿದೆ ಎಂದರು.
ಜಿಲ್ಲೆಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುವುದು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಂಡು, ಸರ್ಕಾರಕ್ಕೆ ರಾಯಲ್ಟಿ ಕಟ್ಟುವಿಕೆಯಲ್ಲಿ ವಂಚನೆ ಆಗಿದ್ದರೆ ದಂಡ ವಿಧಿಸಿ, ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ವಿವರಿಸಿದರು.
ಕಲ್ಲು ಗಣಿಗಾರಿಕೆಯಲ್ಲಿ ಕಾನೂನು ಬದ್ಧವಾಗಿ ಸ್ಫೋಟಕ ಬಳಸಲು ಚೆನ್ನೈನಲ್ಲಿರುವ ಸ್ಫೋಟಕ ಬಳಕೆ ಅನುಮತಿ ಪ್ರಾ ಧಿಕಾರದಿಂದ ಪರವಾನಿಗೆ ಪಡೆದಿರುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೇ ಸಕ್ರಮವಾಗಿಸ್ಫೋಟಕ ಬಳಸುವಲ್ಲಿ ನಿಯಮ ಪಾಲನೆ ಆಗುತ್ತಿದೆಯೇ, ಒಂದೊಮ್ಮೆ ಅಕ್ರಮವಾಗಿ ಕಾನೂನು ಬಾಹೀರವಾಗಿ ಸ್ಫೋಟಕ ಬಳಸುತ್ತಿರುವ ದೂರು ಇದ್ದಲ್ಲಿ, ಅಕ್ರಮ ಪ್ರಕರಣ ಕಂಡು ಬಂದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಹೊಸ ಸೇರ್ಪಡೆ
ನಿಮ್ಮ ಗ್ರಹಬಲ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು
75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ
5 ಕೋ. ರೂ.ಡೀಲ್ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್ ಕಲ್ಲಹಳ್ಳಿ ಪ್ರಶ್ನೆ
ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ
ಪ್ರತಿಭಟನೆಗೆ 100 ದಿನ : ರೈತರಿಂದ 5 ಗಂಟೆ ಕಾಲ ಹೆದ್ದಾರಿ ತಡೆ