ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಸ್‌ಯುಸಿಐ ಪ್ರತಿಭಟನೆ


Team Udayavani, Nov 24, 2021, 3:08 PM IST

Untitled-1

ವಿಜಯಪುರ: ಕಾರ್ಪೋರೇಟ್‌ ಪರವಾಗಿ ವಿದ್ಯುತ್‌ ತಿದ್ದುಪಡಿ ಕಾಯ್ದೆ ರದ್ದು ಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಸ್‌ಯುಸಿಐ ಕಮ್ಯೂನಿಷ್ಟ್ ಪಕ್ಷದ ವಿಜಯಪುರ ಜಿಲ್ಲಾ ಘಟಕದಿಂದ ಜಿಲ್ಲಾ ಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಬಂಡವಾಳಶಾಹಿ ಸೇವೆ ಮಾಡುವ ಸರ್ಕಾರಕ್ಕೆ ಧಿಕ್ಕಾರ, ವಿದ್ಯುತ್‌ ಖಾಸಗೀಕರಣಕ್ಕೆ ಧಿಕ್ಕಾರ, ವಿದ್ಯುತ್‌ ತಿದ್ದುಪಡಿ ಕಾಯ್ದೆ ಹಿಂದಕ್ಕೆ ಪಡೆಯಿರಿ ಎಂಬಿತ್ಯಾದಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆ ಕಾರ್ಯದರ್ಶಿ ಬಿ.ಭಗವಾನರೆಡ್ಡಿ, ಹೊಸ ಕೈಗಾರಿಕೆ ಮತ್ತು ಆರ್ಥಿಕ ನೀತಿ ಅಳವಡಿಸಿಕೊಂಡ ನಂತರ, ಅಂದರೆ 1990ರ ದಶಕದಲ್ಲಿ ಬಿಕ್ಕಟ್ಟಿನಿಂದ ಬಸವಳಿದಿದ್ದ ಬಂಡವಾಳಶಾಹಿ ವರ್ಗ ವಿದ್ಯುತ್‌ ವಲಯದಲ್ಲಿ ಬಂಡವಾಳ ಹೂಡಲು ಮುಂದಾಯಿತು. ಏಕೆಂದರೆ ಅಷ್ಟು ಹೊತ್ತಿಗಾಗಲೇ ಸಾರ್ವಜನಿಕರ ಹಣ ಬಳಸಿಕೊಂಡು ದೇಶವ್ಯಾಪಿ ಗ್ರಿಡ್‌ ಜಾಲ ನಿರ್ಮಿಸುವ ಕೆಲಸ ಬಹುತೇಕ ಪೂರ್ಣಗೊಂಡಿತ್ತು ಎಂದು ಹರಿಹಾಯ್ದರು.

ಅದರ ಪರಿಣಾಮವಾಗಿ ಪ್ರಸ್ತುತ ಸಂದರ್ಭ ಭಾರತದಲ್ಲಿ ಶೇ. 47 ವಿದ್ಯುತ್‌ ಉತ್ಪಾದನೆ ಖಾಸಗಿಯವರ ಕಪಿಮುಷ್ಟಿಯಲ್ಲಿದೆ. ಆಮದು ಮಾಡಿಕೊಂಡ ಕಲ್ಲಿದ್ದಲಿಗೆ ನೈಜ ದರಕ್ಕಿಂತ ಹೆಚ್ಚಿನ ದರ ಕೊಟ್ಟಿರುವಂತೆ ತೋರಿಸುವುದು. ಪೂರೈಕೆ ಕಂಪನಿಗಳು ತಮ್ಮ ಬಳಿ ಮಾತ್ರವೇ ವಿದ್ಯುತ್‌ ಖರೀದಿಸುವಂತೆ ಒತ್ತಡ ಹಾಕುವುದು. ಇಂತಹ ಹಲವಾರು ಕುತಂತ್ರಗಳ ಫಲವಾಗಿಯೇ ಇಂದು ವಿದ್ಯುತ್‌ ದರ ಎಗ್ಗಿಲ್ಲದೇ ಏರುತ್ತಿದೆ. ಈ ಖಾಸಗೀಕರಣದಿಂದ ಸಾಮಾನ್ಯ ಬಳಕೆದಾರನಿಗೆ ಪ್ರಯೋಜನ ಇದೆಯೇ? ಇಲ್ಲ. ರೈತರಿಗೆ ಏನಾದರೂ ಪ್ರಯೋಜನ ಇದೆಯೇ ಎಂದು ಪ್ರಶ್ನಿಸಿದರು. ಎಸ್‌ಯುಸಿಐ ಜಿಲ್ಲಾ ಸಮಿತಿ ಸದಸ್ಯ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ವಿದ್ಯುತ್‌ (ತಿದ್ದುಪಡಿ) ಮಸೂದೆ- 2021ರಂತೆ ವಿದ್ಯುತ್‌ ಉತ್ಪಾದನೆ ಮೇಲೆ ಖಾಸಗಿಯವರು ನಿಯಂತ್ರಣ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ.

ಇಡೀ ದೇಶದ ವಿತರಣಾ ವ್ಯವಸ್ಥೆಯನ್ನು ಖಾಸಗಿಯವರಿಗೆ ಒಪ್ಪಿಸುವ ನಿಟ್ಟಿನಲ್ಲಿ, ಸುಧಾರಣೆಯ ನೆಪವೊಡ್ಡಿ ಹೊಸ ವಿದ್ಯುತ್‌ ಮಸೂದೆ ರೂಪಿಸಿದ್ದಾರೆ ಎಂದು ಆರೋಪಿಸಿದರು. ಬಾಳು ಜೇವೂರ, ಎಚ್‌.ಟಿ. ಮಲ್ಲಿಕಾರ್ಜುನ, ಭರತಕುಮಾರ, ಸುರೇಖಾ ಕಡಪಟ್ಟಿ, ಗೀತಾ ಎಚ್‌., ದೀಪಾ ವಡ್ಡರ, ಶಿವರಂಜನಿ, ಪೀರಾ ಜಮಾದಾರ್‌ ಇದ್ದರು.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.