ಸೂಫಿ-ಶರಣರ ಸಂದೇಶಗಳು ಸೌಹಾರ್ದತೆಗೆ ಸಾಕ್ಷಿ


Team Udayavani, Dec 22, 2021, 5:57 PM IST

31saranas

ವಿಜಯಪುರ: ಸೂಫಿ ಸಂತರ ಭಾವೈಕ್ಯದ ನೆಲೆಯಾಗಿರುವ ಭಾರತದ ಶರಣರ ಬಸವಾದಿ ಶರಣರ ಜನ್ಮಭೂಮಿಯೂ ಹೌದು. ಈ ದೇಶದಲ್ಲಿ ಶಾಂತಿ ಸೌಹಾರ್ದ ಸ್ಥಾಪಿಸಲು ಸೂಫಿ ಸಂತರ- ಬಸವವಾದಿಗಳ ಶರಣರ ತತ್ವಗಳು ಮಹತ್ವದ ಪಾತ್ರ ವಹಿಸಿದೆ ಎಂದು ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ಪುನಾರಾಯ್ಕೆ ಆಗಿರುವ ಸುನೀಲಗೌಡ ಪಾಟೀಲ ಅಭಿಪ್ರಾಯಪಟ್ಟರು.

ನಗರದ ಹಜರತ್‌ ಹಾಶೀಂಪೀರ್‌ ಸೂಫಿ ದರ್ಗಾದಲ್ಲಿ ಮಹಿಬೂಬ ಏ ಸುಭಹಾನಿ ಹಜರತ ಸೈಯದನಾ ಗೌಸ ಪಾಕ ಇವರ ಸ್ಮರಣಾರ್ಥ (ಗ್ಯಾರವಿ ಶರೀಫ್‌) ದೊಡ್ಡ ಪ್ರಮಾಣದಲ್ಲಿ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಶ್ವ ಮಟ್ಟದಲ್ಲಿ ಭಾರತ ದೇಶ ಉನ್ನತಿ ಸಾಧಿಸಲು ಸೂಫಿ ಸಂತರ ಶರಣರ ಆಶೀರ್ವಾದ ಅಗತ್ಯ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸ್ವಾತಂತ್ರ್ಯ ಸುವರ್ಣ ಸಂಭ್ರಮ ಪ್ರಶಸ್ತಿ ಪಡೆದ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ| ಪ್ರಭುಗೌಡ ಪಾಟೀಲ ಮಾತನಾಡಿ, ಪೀರ ಸೈಯದ ಮೊಹಮ್ಮದ ತನವೀರ ಹಾಶ್ಮಿ ಅವರು ಜಾತಿ-ಬೇಧವಿಲ್ಲದೇ ಮಾನವ ಕಲ್ಯಾಣಕ್ಕಾಗಿ ಸೇವೆ ಮಾಡುತ್ತಿದ್ದಾರೆ. ಇವರ ನೇತೃತ್ವದಲ್ಲಿ ನಡೆಸಿದ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನೆರವೇರಿಸುವಲ್ಲಿ ಅತ್ಯಂತ ಹೆಚ್ಚಿನ ಕಾಳಜಿ ನೀಡಿದ್ದನ್ನು ಸ್ಮರಿಸಿದರು.

ಆಶೀರ್ವಚನ ನೀಡಿದ ಪೀರ ಸೈಯದ ಮೊಹಮ್ಮದ ತನವೀರ ಹಾಶ್ಮಿ, 9 ಶತಮಾನಗಳ ಹಿಂದೆ ಮಹಿಬೂಬ ಏ ಸುಭಹಾನಿ ಹಜರತ ಗೌಸ ಪಾಕ (ಮಹಾನ ಸೂಫಿ) ಇವರು ತಮ್ಮ ಖಾನಕಾ (ಆಶ್ರಮ)ದಲ್ಲಿ ಹಸಿದವರಿಗೆ ಊಟದ ವ್ಯವಸ್ಥೆ ಮಾಡುತ್ತಿದ್ದರು. ಗ್ಯಾರವಿ ಶರೀಫ್‌ ಹೆಸರಿನ ಈ ಅನ್ನದಾಸೋಹ ಪರಂಪರೆಯನ್ನು ನಾವು ಕೂಡ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದರು.

ಎಲ್ಲ ಸೂಫಿ ಸಂತರು ತಮ್ಮ ತಮ್ಮ ಆಶ್ರಮಗಳಲ್ಲಿ ಜಾತೀಯತೆ ಮಾಡದೇ, ಧರ್ಮ ಸಮನ್ವಯದಿಂದ ನಡೆದುಕೊಂಡಿದ್ದಾರೆ. ಹಸಿದವರಿಗೆ ಅನ್ನ ದಾಸೋಹ ಮಾಡುವ ಮಹೋನ್ನತ ಪರಂಪರೆಯನ್ನು ಹಾಕಿಕೊಟ್ಟಿದ್ದಾರೆ. ಹಸಿವು ಹಾಗೂ ಅನ್ನಕ್ಕೆ ಯಾವ ಧರ್ಮ-ಜಾತಿಯ ಹಂಗಿಲ್ಲ ಎಂಬುದನ್ನು ಸಮಾಜಕ್ಕೆ ಸರ್ವ ಕಾಲಕ್ಕೂ ಮನವರಿಕೆ ಮಾಡಿಕೊಡುತ್ತಲೇ ಬಂದಿದ್ದಾರೆ ಎಂದು ಬಣ್ಣಿಸಿದರು.

ನಮ್ಮ ಪ್ರವಾದಿ ಹಜರತ ಸೈಯಿದನಾ ಮೊಹಮ್ಮದ ಸಲ್ಲಲಾಹು ಅಲೈ ಹಿ ವ ಸಲ್ಲಮ್‌ ರವರ ದಿವ್ಯ ವಾಣಿಯ ( ಹದೀಸ ಶರೀಫ್‌) ಪ್ರಕಾರ ಪುಣ್ಯದ ಕೆಲಸಗಳಲ್ಲಿ ಅತ್ಯಂತ ಶ್ರೇಷ್ಠ ಮತ್ತು ಪುಣ್ಯದ ಕೆಲಸ ಹಸಿದವನಿಗೆ ಅನ್ನ ಕೊಡುವದು. ಸೂಫಿ ಸಂದೇಶದಲ್ಲಿ ಮೊದಲು ನೀನು ಮಾನವನಾಗು. ನಂತರ ನೀನು ಹಿಂದೂ, ಮುಸ್ಲಿಂ, ಸಿಖ್‌, ಕ್ರೈಸ್ತ ಇತ್ಯಾದಿಯಾಗು ಎಂದು ಸಂದೇಶ ನೀಡಿದ್ದಾರೆ ಎಂದರು.

ದರ್ಗಾದ ಪೀಠಾಧಿಪತಿಗಳು, ಧಾರ್ಮಿಕ ವಿದ್ವಾಂಸರು, ರಾಜಕೀಯ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.