Vijayapura ವಿದ್ಯುತ್ ಅವಘಡಕ್ಕೆ ಲಕ್ಷಾಂತರ ಮೌಲ್ಯದ ಕಬ್ಬು ಭಸ್ಮ
Team Udayavani, Dec 12, 2023, 8:44 PM IST
ವಿಜಯಪುರ : ಜಿಲ್ಲೆಯ ಬಬಲೇಶ್ವರ ಬಳಿಯ ವಿದ್ಯುತ್ ಅವಘಡದಿಂದ ಕಬ್ಬು ಬೆಳೆ ಬೆಂಕಿಗೆ ಆಹುತಿಯಾದ ಘಟನೆ ಸಂಭವಿಸಿದೆ. ಇದರಿಂದಾಗಿ ಲಕ್ಷಾಂತರ ರೂ. ಮೌಲ್ಯದ ಕಬ್ಬು ಹಾನಿಯಾಗಿ, ರೈತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾನೆ.
ಬಬಲೇಶ್ವರ ಗ್ರಾಮದ ಮಲ್ಲಪ್ಪ ಭೀಮಪ್ಪ ಬೂದಿಹಾಳ ಅವರ ಗದ್ದೆಯಲ್ಲಿ ಕಟಾವು ಹಂತದಲ್ಲಿದ್ದ 3.20 ಎಕರೆ ಜಮೀನಿನಲ್ಲಿನ ಕಬ್ಬು ಬೆಳೆಗೆ ಏಕಾಏಕಿ ವಿದ್ಯುತ್ ಶಾಟ್ ಸರ್ಕ್ಯೂಟ್ ಸಂಭವಿಸಿದ್ದು, ಸುಮಾರು 8-10 ಅಡಿ ಎತ್ತರ ಬೆಳೆದಿದ್ದ ಕಬ್ಬಿಗೆ ತಾಗಿದೆ.
ಇದರಲ್ಲಿ ಈಗಾಗಲೇ ಸುಮಾರು1.20 ಎಕರೆ ಜಮೀನಿನ ಕಬ್ಬು ಕಟಾವು ಮಾಡಿದ್ದು, 80 ಟನ್ ಸಕ್ಕರೆ ಕಾರ್ಖಾನೆಗೆ ಸಾಗಿಸಲಾಗಿತ್ತು.
ಬಾಕಿ 2 ಎಕರೆ ಪ್ರದೇಶದ ಕಬ್ಬು ಕಟಾವು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ರಾತ್ರಿ ವೇಳೆ ವಿದ್ಯುತ್ ಕಂಬದಿಂದ ಪಂಪ್ ಸೆಡ್ ಮೋಟರ್ ರವರೆಗೆ ಎಳೆಯಲಾದ ವಿದ್ಯುತ್ ಕೇಬಲ್ ಸುಟ್ಟು ಬೆಳೆದು ನಿಂತಿದ್ದ ಕಬ್ಬಿಗೆ ಬೆಂಕಿ ತಗುಲಿದೆ. ಇದರಿಂದಾಗಿ ರಯತ ಮಲ್ಲಪ್ಪ ತಮಗೆ ಸುಮಾರು 8 ಲಕ್ಷ ರೂ. ಮೌಲ್ಯದ ಹಾನಿ ಸಂಭವಿಸಿದೆ ಎಂದು ಕಂಗಾಲಾಗಿ, ಕಣ್ಣೀರು ಹಾಕುತ್ತಿದ್ದಾರೆ.
ಭೀಕರ ಬರದ ಸಂಕಷ್ಟದ ಮಧ್ಯೆಯೂ ರೈತ ಮಲ್ಲಪ್ಪ ಕಷ್ಟಪಟ್ಟು ಕಬ್ಬು ಬೆಳೆದಿದ್ದ. ಇದೀಗ ವಿದ್ಯುತ್ ಅವಘಡದಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ.
ಕಂದಾಯ, ಪೊಲೀಸ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ