ಎಂಬಿ.ಪಾಟೀಲಗೆ ಸಿದ್ಧೇಶ್ವರ ಶ್ರೀಗಳೇ ‘ಆಧುನಿಕ ಭಗೀರಥ’ ಸರ್ಟಿಫಿಕೇಟ್ ನೀಡಿದ್ದಾರೆ: ಸುನೀಲಗೌಡ
Team Udayavani, Aug 30, 2020, 4:53 PM IST
ವಿಜಯಪುರ: ಮಾಜಿ ಸಚಿವ ಎಂ.ಬಿ.ಪಾಟೀಲ ಅವರನ್ನು ಆಧುನಿಕ ಭಗೀರಥ ಎಂದು ನಡೆದಾಡುವ ದೇವರೆಂದು ಖ್ಯಾತರಾದ ಸಿದ್ಧೇಶ್ವರ ಶ್ರೀಗಳೇ ಸರ್ಟಿಫಿಕೇಟ್ ನೀಡಿದ್ದಾರೆ. ಹೀಗಿರುವಾಗ ಅನ್ಯರ ಮಾತಿಗೆ ಪ್ರತಿಕ್ರಿಯೆ ನೀಡುವ ಅಗತ್ಯವೇ ಇಲ್ಲ ಎಂದು ಮೇಲ್ಮನೆ ಕಾಂಗ್ರಸ್ ಸದಸ್ಯ ಸುನಿಲ ಗೌಡ ಪಾಟೀಲ ಬಿಜೆಪಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರಿಗೆ ತಿರುಗೇಟು ನೀಡಿದ್ದಾರೆ.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ನೀರ, ನೀರಾವರಿ ಎಂದರೆ ಎಂ.ಬಿ.ಪಾಟೀಲ, ಎಂ.ಬಿ.ಪಾಟೀಲ ಎಂದರೆ ನೀರು, ನೀರಾವರಿ ಎಂದು ಸಾರ್ವಜನಿಕ ಸಮಾರಂಭಗಳಲ್ಲಿ ಹಲವು ಬಾರಿ ಸರ್ಟಿಫಿಕೇಟ್ ನೀಡಿದ್ದಾರೆ. ಹೀಗಾಗಿ ಅವರಿವರ ಮಾತು ಕೇಳೋದು, ಅವರ ಮಾತಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಶಾಸಕ ನಡಹಳ್ಳಿ ಅವರನ್ನು ಕುಟುಕಿದ್ದಾರೆ.
ಎರಡು ದಿನಗಳ ಹಿಂದಷ್ಟೆ ಬಿಜೆಪಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ವಿಜಯಪುರ ಜಿಲ್ಲೆಯಲ್ಲಿ ನಿಜವಾದ ಭಗೀರಥ ಯಾರೆಂದು ಬಹಿರಂಗ ಚರ್ಚೆಯಾಗಲಿ, ದಾಖಲೆ ಸಮೇತ ನಾನು ಚರ್ಚೆಗೆ ಬರಲು ಸಿದ್ದ ಎಂದು ಎಂ.ಬಿ.ಪಾಟೀಲ ಅವರಿಗೆ ಬಹಿರಂಗ ಸವಾಲು ಎಸೆದಿದ್ದರು.
ಹೀಗಾಗಿ ಮಾಜಿ ಜಲಸಂಪನ್ಮೂಲ ಸಚಿವರಾದ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಅವರ ಕಿರಿಯ ಸಹೋದರ, ಮೇಲ್ಮನೆ ಸದಸ್ಯ ಸುನಿಲಗೌಡ ಮಾಧ್ಯಮಗಳ ಮೂಲಕವೇ ನಡಹಳ್ಳಿ ಅವರಿಗೆ ಎದಿರೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್