ಸಕಾಲಕ್ಕೆ ವಿದ್ಯುತ್‌ ಪೂರೈಸಿ


Team Udayavani, Jan 16, 2022, 2:35 PM IST

14electricity

ಇಂಡಿ: ತಾಲೂಕಿನಲ್ಲಿ ವಿದ್ಯುತ್‌ ಸಮಸ್ಯೆ ಉಂಟಾಗಿ ರೈತರಿಗೆ ತೊಂದರೆಯಾಗುತ್ತಿದೆ. ಪ್ರತಿ ದಿನ ಸರಿ ಸುಮಾರು 7 ಗಂಟೆ ವಿದ್ಯುತ್‌ ಪೂರೈಸಬೇಕಾದ ಇಲಾಖೆ 4-5 ಗಂಟೆ ಮಾತ್ರ ವಿದ್ಯುತ್‌ ಪೂರೈಸುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ಹಿಂಗಾರು ಬೆಳೆಗಳಾದ ಜೋಳ, ಗೋಧಿ, ಕಡಲೆ, ತೊಗರಿ ತೋಟಗಾರಿಕೆ ಬೆಳೆಗಳಾದ ಬಾಳೆ, ನಿಂಬೆ, ದ್ರಾಕ್ಷಿ, ದಾಳಿಂಬೆ, ಕಬ್ಬು ಸೇರಿದಂತೆ ಎಲ್ಲ ಫಸಲು ಬಂದಿದ್ದು ರೈತರು ಫಸಲಿಗೆ ನೀರು ಬಿಡಬೇಕಾಗುತ್ತದೆ. ಕೊಳವೆ ಬಾವಿ, ತೆರೆದ ಬಾವಿ, ಕೃಷ್ಣಾ ಕಾಲುವೆ ಮೂಲಕ ಇಲ್ಲವೆ ಭೀಮಾ ನದಿ ತೀರದಲ್ಲಿ ಹೊಲಗಳಿಗೆ ನೀರು ಬಿಡಬೇಕು. ಆದರೆ ಅಸಮರ್ಪಕ ಸಮಯದಲ್ಲಿ ವಿದ್ಯುತ್‌ ವಿತರಣೆ ಮಾಡುತ್ತಿರುವುದರಿಂದ ರೈತರಿಗೆ ತೊಂದರೆಯಾಗುತ್ತಿವೆ. ಈಗ ಚಳಿಗಾಲ ಆರಂಭವಾಗಿದ್ದು ಹೀಗಾಗಿ ಹಗಲು ಹೊತ್ತಿನಲ್ಲೇ 7 ಘಂಟೆ ವಿದ್ಯುತ್‌ ಪೂರೈಸಬೇಕೆಂಬುದು ರೈತರ ಆಶಯವಾಗಿದೆ.

ಸದ್ಯ ವಿದ್ಯುತ ವಿತರಣೆ ಹಗಲು ವೇಳೆ 3 ಗಂಟೆ ಮತ್ತು ರಾತ್ರಿ ವೇಳೆ 4 ಗಂಟೆ ಮಾಡುತ್ತಾರೆ. ಹಗಲು ವೇಳೆ ಒಂದು ವಾರ ಬೆಳಗ್ಗೆ 6ರಿಂದ 9 ಗಂಟೆಗೆ, ಮತ್ತೊಂದು ವಾರ 9ರಿಂದ 12 ಗಂಟೆಗೆ, ಮತ್ತೊಂದು ವಾರ 12ರಿಂದ 3 ಗಂಟೆವರೆಗೆ ವಿತರಣೆ ಮಾಡುತ್ತಿದ್ದಾರೆ. ಆದರೆ ರಾತ್ರಿ ವೇಳೆ ಮಾತ್ರ 10ರಿಂದ 2 ಗಂಟೆಯವರೆಗೆ ಬಿಡುತ್ತಾರೆ. ಹೀಗಾಗಿ ರೈತರು ಹಗಲು ಮತ್ತು ರಾತ್ರಿ ಎನ್ನದೆ ಬೆಳಗ್ಗೆ ನೀರು ಬಿಡುವ ಪರಿಸ್ಥಿತಿ ಬಂದೊದಗಿದೆ. ಕಾರಣ ರಾತ್ರಿ 4 ಗಂಟೆ ಕೊಡುವ ವಿದ್ಯುತ್‌ ವಿತರಣೆ ಹಗಲಿನಲ್ಲಿಯೇ 3 ತಾಸಿಗಿಂತಲೂ ಹೆಚ್ಚು ನೀಡಿ ರಾತ್ರಿ 10ರಿಂದ ನೀಡುವ ವೇಳೆ ಕಡಿಮೆ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ.

ರೈತರು ಇಲಾಖೆಯವರಿಗೆ ಕೇಳಿದರೆ ಇದು ನಮಗೆ ಮೇಲಿನಿಂದ ಬಂದ ಆದೇಶವಾಗಿರುತ್ತದೆ. ಇಲಾಖೆ ಪಾಲನೆ ಮಾಡಲೇಬೇಕು. ಸಮಯ ಬದಲಾವಣೆ ಮಾಡಲು ಸಾಧ್ಯವಾಗಲ್ಲ ಎನ್ನುತ್ತಾರೆ. ಒಂದು ಕಡೆ ರೈತರಿಗೆ ಮಳೆಯಾಗದೇ ತೊಂದರೆಯಾಗುತ್ತಿದ್ದರೆ ಇನ್ನೊಂದೆಡೆ ಸರಿಯಾದ ಸಮಯದಲ್ಲಿ ವಿದ್ಯುತ್‌ ವಿತರಣೆ ಮಾಡದೇ ಇರುವುದರಿಂದ ಅನ್ನದಾತ ಅಳಲು ಹೇಳತೀರದಾಗಿದೆ.

ನಾವು ಹಗಲಿನಲ್ಲಿಯೂ ನೀರು ಬೀಡಬೇಕು. ಮತ್ತೆ ರಾತ್ರಿಯೂ 10ರಿಂದ 2ರವರೆಗೆ ನೀರು ಬಿಡಬೇಕು. ಛಳಿಗಾಲ ಆರಂಭವಾಗಿದ್ದು ರಾತ್ರಿ ಹೊತ್ತು ಛಳಿ ಇರುತ್ತದೆ. ರಾತ್ರಿ ನಿದ್ರೆಯಾಗದೆ ಮತ್ತೆ ಹಗಲಿನಲ್ಲಿ ಕೆಲಸ ಮಾಡುವದು ತೊಂದರೆಯಾಗುತ್ತಿದೆ. -ಶ್ರೀಶೈಲ ಕುಂಬಾರ, ರೈತ ಇಂಗಳಗಿ

-ಯಲಗೊಂಡ ಬೇವನೂರ

ಟಾಪ್ ನ್ಯೂಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

1——dsad

Women’s Reservation Bill ಮೂಲಕ ‘ಶಕ್ತಿ’ಯನ್ನು ಪೂಜಿಸುವ ಭಾವನೆ: ಪ್ರಧಾನಿ ಮೋದಿ

Asian Games: Gold for India in Shooting Trap Men’s Team Event

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

8-social-anxiety-disorder

Health: ಸೋಶಿಯಲ್‌ ಆ್ಯಂಕ್ಸೈಟಿ ಡಿಸಾರ್ಡರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆಗೆ ನಿರಾಕರಣೆ, ಯುವತಿ ಹಂತಕನಿಗೆ ಜೀವಾವಧಿ ಶಿಕ್ಷೆ

Vijayapura; ಮದುವೆಗೆ ನಿರಾಕರಣೆ, ಯುವತಿ ಹಂತಕನಿಗೆ ಜೀವಾವಧಿ ಶಿಕ್ಷೆ

Top leaders are silent means that something big is about to happen: Yatnal

BJP ವರಿಷ್ಠರು ಮೌನವಾಗಿದ್ದಾರೆಂದರೆ ಏನೋ ದೊಡ್ಡದೇ ನಡೆಯಲಿದೆ: ಯತ್ನಾಳ

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

1-asddasd

Vijayapura: ನಾಳೆ ಶಾಲಾ-ಕಾಲೇಜಿಗೆ ರಜೆ ಇಲ್ಲ; ಬಂದ್ ಗೆ ಬೆಂಬಲ ಘೋಷಣೆಯಾಗಿಲ್ಲ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ

arrested

Multan ; ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ 16 ಮಂದಿಯ ಬಂಧನ

13-bhatkal

Bhatkal: ಸ್ವಚ್ಛತಾ ಕಾರ್ಯಕ್ರಮಕ್ಕೆ ಭಟ್ಕಳ ಉಪವಿಭಾಗಾಧಿಕಾರಿ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.