ಪಂಚಮಸಾಲಿ ಮೀಸಲು ಹೋರಾಟಕ್ಕೆ ಸದಾ ಬೆಂಬಲ: ಮನಗೂಳಿ ಅಭಿನವಶ್ರೀ
Team Udayavani, May 23, 2022, 11:41 AM IST
ವಿಜಯಪುರ: ಪಂಚಮಸಾಲಿ 2-ಎ ಮೀಸಲಾತಿ ಹೋರಾಟಕ್ಕೆ ಸದಾ ನಮ್ಮ ಬೆಂಬಲವಿದ್ದು, ನಾವೇನೂ ಮೀಸಲು ಹೋರಾಟದಿಂದ ಹಿಂದೆ ಸರಿದಿಲ್ಲ. ಆದರೆ ಸರ್ಕಾರಕ್ಕೆ ಪದೇ ಪದೇ ಗಡುವು ನೀಡುವುದು ಸರಿಯಲ್ಲ ಎಂದು ಮನಗೂಳಿ ಅಭಿನವ ಸಂಗನಬಸವ ಶ್ರೀಗಳು ಹೇಳಿದರು.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲು ಕಲ್ಪಿಸಲು ಮುಖ್ಯಮಂತ್ರಿ ಆಸಕ್ತಿ ಇದ್ದರೂ ಇತರರು ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದು ಸುಳ್ಳು ಹೇಳುವುದು ಸರಿಯಲ್ಲ. ಜನಪ್ರತಿನಿಧಿ ಸ್ಥಾನದಲ್ಲಿ ಇರುವ ವ್ಯಕ್ತಿಗಳು ಮೀಸಲು ಹೋರಾಟದ ವಿಷಯದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡಬಾರದು ಎಂದು ಮನವಿ ಮಾಡಿದರು.
ಮೀಸಲು ಹೋರಾಟಕ್ಕೆ ನಾವು ಸಂಪೂರ್ಣ ಒತ್ತಾಸೆತಾಗಿ ನಿಂತಿದ್ದೇವೆ. ಈ ಹೋರಾಟದಿಂದ ನಾವೇನೂ ಹಿಂದೆ ಸರಿದಿಲ್ಲ. ಆದರೆ ಮೀಸಲು ಕಲ್ಪಿಸಲು ಸರ್ಕಾರಕ್ಕೆ ಪದೇ ಪದೇ ಗಡುವು ನೀಡದೆ ಸೌಜನ್ಯ, ಪ್ರೀತಿ, ವಿಶ್ವಾಸದಿಂದ ಮನವೊಲಿಸಿ ಮೀಸಲು ಸೌಲಭ್ಯ ಪಡೆಯಬೇಕು ಎಂದು ಅಭಿಪ್ರಾಯಪಟ್ಟರು.
ನಮ್ಮ ಹಾಗೂ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಜಗದ್ಗುರುಗಳ ಮಧ್ಯೆ ಯಾವುದೇ ಭಿನ್ನಮತವಿಲ್ಲ. ಈಚೆಗಷ್ಟೇ ಹಿಟ್ನಳ್ಳಿ ಗ್ರಾಮದಲ್ಲಿ ಜರುಗಿದ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಇಬ್ಬರೂ ಶ್ರೀಗಳು ಒಂದೇ ವೇದಿಕೆಯಲ್ಲಿದ್ದು, ಪರಸ್ಪರ ಮಾತನಾಡಿದ್ದೇವೆ. ಹೀಗಾಗಿ ಸಮಾಜದ ಶ್ರೀಗಳಲ್ಲಿ ಭಿನ್ನಾಭಿಪ್ರಾಯ ಇದೆ ಎಂಬುದು ಸುಳ್ಳು ಎಂದರು.
ಇದನ್ನೂ ಓದಿ:ರಾಮನಗರದಲ್ಲಿ ಕುಮಾರಸ್ವಾಮಿ ಆಪರೇಷನ್! ಡಿಕೆ ಬ್ರದರ್ಸ್ ಗೆ ಟಕ್ಕರ್ ಕೊಡುತ್ತಾರಾ ಎಚ್ ಡಿಕೆ?
ಮನಗೂಳಿ ಹಿರೇಮಠದ ಲಿಂಗೈಕ್ಯ ಶತಾಯುಷಿ ಸಂಗನಬಸವ ಶ್ರೀಗಳ 39 ನೇ ಪುಣ್ಯ ಸ್ಮರಣೋತ್ಸವ, ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಲಿಂಗೈಕ್ಯ ಮಹಾಂತ ಶ್ರೀಗಳ 9ನೇ ಯಾತ್ರಾ ಮಹೋತ್ಸವದ ಪ್ರಯುಕ್ತ ಮನಗೂಳಿ ಗ್ರಾಮದಲ್ಲಿ ಗುಡ್ಡಾಪುರ ದಾನಮ್ಮದೇವಿ ಪುರಾಣ ಹಮ್ಮಿಕೊಂಡಿದ್ದೇವೆ. ಮೇ 24 ರಂದು 1008 ಮುತೈದೆಯರಿಗೆ ಉಡಿ ತುಂಬುವ, 26 ರಂದು ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕ, ಮಹಾರಾಷ್ಟ್ರ ರಾಜ್ಯದ ವಿವಿಧ ಮಠಾಧೀಶರು, ಶಾಸಕರು ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ