ಹಾಸ್ಟೆಲ್ ಬಳಿ ವಿದ್ಯಾರ್ಥಿಯ ಅನುಮಾನಾಸ್ಪದ ಸಾವು: ಪ್ರತಿಭಟನೆ
Team Udayavani, Aug 9, 2019, 12:50 PM IST
ವಿಜಯಪುರ: ನಗರದಲ್ಲಿರುವ ಪದವಿ ಪೂರ್ವ ಕಾಲೇಜು ಹಾಸ್ಟೆಲ್ ಹಿಂಬದಿಯ ಬಾವಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಸಾವಿನ ಕುರಿತು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ವಿಜಯಪುರ ನಗರದ ಹೊರ ಭಾಗದ ಲೊಯೋಲಾ ಪಿಯು ಕಾಲೇಜಿನ ವಿದ್ಯಾರ್ಥಿ ಶ್ರೀಕಾಂತ ದಯಾನಂದ ನಾಲವಾರ ಮೃತ ವಿದ್ಯಾರ್ಥಿ.
ಬಾವಿಯಲ್ಲಿ ಕಡಿಮೆ ನೀರು ಇರುವ ಕಾರಣ ಹಾಗೂ ಕತ್ತಿನ ಭಾಗದಲ್ಲಿ ಗಾಯಗಳು ಇರುವುದರಿಂದ ವಿದ್ಯಾರ್ಥಿ ಸಾವಿನ ಕುರಿತು ಪಾಲಕರು ಸಂಶಯ ವ್ಯಕ್ತಪಡಿಸಿದ್ದಾರೆ. ತಮ್ಮಮಗನನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಪೋಷಕರು ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
ಲೊಯೋಲಾ ಕಾಲೇಜು ಪ್ರಾಂಶುಪಾಲ, ಹಾಸ್ಟೇಲ್ ವಾರ್ಡನ್ ಬಂಧಿಸಲು ಆಗ್ರಹಿಸಿ ಬಾಲಕನ ಶವದ ಮರಣೋತ್ತರ ಪರೀಕ್ಷೆ ನಡೆಸಲು ಅಡ್ಡಿಪಡಿಸಿ ಪ್ರತಿಭಟಿಸುತ್ತಿದ್ದಾರೆ.
ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿದ್ದ ಬಾಲಕನ ಶವ ಹೊರ ತಂದು ಅಥಣಿ ರಸ್ತೆಯಲ್ಲಿ ಶವವಿಟ್ಟು ಹೋರಾಟ ನಡೆಸುತ್ತಿದ್ದಾರೆ. ಜಿಲ್ಲಾಸ್ಪತ್ರೆ ಆವರಣದಲ್ಲಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಬಾಲಕನ ಶವದ ಮೆರವಣಿಗೆಗೆ ಪೊಲೀಸರು ತಡೆಯೊಡ್ಡಿದ್ದರಿಂದ ತಳ್ಳಾಟ ನೂಕಾಟ ನಡೆದ ಪ್ರಕರಣ ಕೂಡ ನಡೆಯಿತು.
ನಗರದ ಗೋಲಗುಂಬಜ್ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ