ನೀರಸವಾಯ್ತು ಜಾನವಾರು ಜಾತ್ರೆ


Team Udayavani, Jan 19, 2019, 11:38 AM IST

vij-1.jpg

ವಿಜಯಪುರ: ಉತ್ತರ ಕರ್ನಾಟಕದಲ್ಲಿ ಅತಿ ದೊಡ್ಡ ಜಾನುವಾರು ಜಾತ್ರೆ ಎಂದೇ ಹೆಸರಾಗಿರುವ ವಿಜಯಪುರದ ಸಿದ್ದೇಶ್ವರ ಜಾನುವಾರು ಜಾತ್ರೆ ಈ ಬಾರಿ ನೀರಸವಾಗಿ ಮುಕ್ತಾಯ ಕಂಡಿದೆ. ಭೀಕರ ಬರದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅನ್ನದಾತರು ಜಾನುವಾರು ಮಾರಾಟಕ್ಕೆ ಮುಂದಾಗಿದ್ದರೂ ಕೊಳ್ಳುವವರು ಮಾತ್ರ ವಿರಳವಾಗಿದ್ದರಿಂದ ಎರಡು ದಿನಗಳ ಹಿಂದೆಯೇ ಜಾನುವಾರು ಜಾತ್ರೆ ಖಾಲಿಯಾಗಿದೆ.

ತಮ್ಮ ಮಕ್ಕಳಿಗಿಂತ ಹೆಚ್ಚಿನ ಪ್ರೀತಿಯಿಂದ ಸಾಕಿದ್ದ ಜಾನುವಾರುಗಳನ್ನು ರೈತರು ಕಣ್ಣೀರು ಹಾಕುತ್ತ ಮಾರಾಟಕ್ಕೆ ತಂದಿದ್ದರು. ಭೀಕರ ಬರದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಅಗತ್ಯ ಪ್ರಮಾಣದ ಮೇವು ಹಾಗೂ ಸಮರ್ಪಕ ನೀರು ಒದಗಿಸಲಾಗದೇ ಆನ್ನದಾತ ಕಂಗಾಲಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಾರಾಟಕ್ಕೆ ಅನ್ನದಾತರು ತಂದಿದ್ದ ಜಾನುವಾರುಗಳ ಸಂಖ್ಯೆಯೂ ವಿರಳ, ಮಾರಾಟವಾಗಿರುವ ಜಾನುವಾರುಗಳು ಕೂಡ ವಿರಳವೇ. ಕಳೆದ ವರ್ಷ ಬರ ಇದ್ದರೂ ಜಾನುವಾರು ಜಾತ್ರೆಗೆ 13 ಸಾವಿರ ಜಾನುವಾರುಗಳು ಬಂದಿದ್ದವು. ಆದರೆ ಈ ಬಾರಿ 10 ಸಾವಿರ ಜನಾನುವಾರು ಮಾರಾಟಕ್ಕೆ ಬಂದಿದ್ದರೂ ಖರೀದಿ ಆಗಿದ್ದು ಕೇವಲ 1,800 ಮಾತ್ರ.

ಅಲ್ಲದೇ ಸದರಿ ಜಾತ್ರೆಯಲ್ಲಿ ವಿವಿಧ ತಳಿಗಳ ದೇಶಿ ಉತ್ತಮ ರಾಸುಗಳಿಗೆ ನೀಡುವ ಬಹುಮಾನವನ್ನು ಜ. 15ರಂದೇ ನೀಡಲಾಗಿದೆ. ಆದ್ದರಿಂದ ಬಹುತೇಕ ಜಾನುವಾರುಗಳ ಮಾಲೀಕರು ಅಂದೇ ಮನೆಗೆ ತೆರಳಿದ್ದು, ಮರುದಿನ ಬಹುತೇಕ ಜಾನುವಾರು ಪರಿಸೆ ಖಾಲಿ ಆಗಲು ಆರಂಭಿಸಿತ್ತು. ಜ. 17ರಂದು ಸಂಪೂರ್ಣ ತೆರವಾಗಿತ್ತು. ಮಾರುವರು ಹೆಚ್ಚಿನ ಪ್ರಮಾಣದಲ್ಲಿದ್ದರೂ ಕೊಳ್ಳುವವರು ನಿರೀಕ್ಷಿತ ಪ್ರಮಾಣದಲ್ಲಿ ಆಗಮಿಸದ ಕಾರಣ ಈ ಬಾರಿಯ ಜಾನುವಾರು ಜಾತ್ರೆ ಖಾಲಿಯಾಗಿದೆ.

ಕಳೆದ ಸಲ ನೀರಿನ ಮಾಲಿನ್ಯದಿಂದ ನಾಲ್ಕು ಜಾನುವಾರುಗಳು ಮೃತಪಟ್ಟಿದ್ದವು. ಇದರಿಂದ ಈ ಬಾರಿಯ ಜಾನುವಾರು ಜಾತ್ರೆಯಲ್ಲಿ ಜಾನುವಾರು ಜಾತ್ರೆಗೆ ಸರಬರಾಜು ಮಾಡುವ ನೀರಿನ ಟ್ಯಾಂಕರ್‌ ಸ್ವಚ್ಛಗೊಳಿಸಿ, ಶುದ್ದಗೊಳಿಸಿ ನೀರು ಪೂರೈಕೆ ಮಾಡಲಾಗಿತ್ತು. ಆಲ್ಲದೇ ಈ ಬಾರಿಯ ಜಾತ್ರೆಯಲ್ಲಿ ಜನ-ಜಾನುವಾರಿಗಳಿಗೆ ದಿನದ 24 ಗಂಟೆಗಳ ಕಾಲ ಉತ್ತಮ ನೀರು ಪೂರೈಸಲಾಗಿತ್ತು. ಜಾತ್ರೆಯಲ್ಲಿ ನಿರಂತರ ವಿದ್ಯುತ್‌ ಪೂರೈಕೆ ಮಾಡಿದ್ದು ರೈತರು ಕತ್ತಲಲ್ಲಿ ಸಂಕಷ್ಟ ಎದುರಿಸುವುದು ತಪ್ಪಿದೆ.

ಇನ್ನು ಈ ಬಾರಿಯ ಜಾನುವಾರು ಜಾತ್ರೆಯಲ್ಲಿ ಪಶು ವೈದ್ಯಕೀಯ ಚಿಕಿತ್ಸೆ ಕೂಡ ಉತ್ತಮವಾಗಿತ್ತು. ಹಿಂದಿನ ವರ್ಷಗಳ ಜಾತ್ರೆಯಲ್ಲಿ ಪಶು ವೈದ್ಯಕೀಯ ಸೇವೆ ಕುರಿತು ದೂರುಗಳಿದ್ದವು. ಪರಿಣಾಮವೇ ಕಳೆದ ವರ್ಷದ ಜಾನುವಾರು ಜಾತ್ರೆಯಲ್ಲಿ 4 ಜಾನುವಾರು ಸಾವಿಗೀಡಾಗಿ ರೈತರು ಕಣ್ಣೀರು ಹಾಕುವಂತಾಗಿತ್ತು. ಆದರೆ ಈ ಬಾರಿ ಬೆಳಗ್ಗೆ 9ರಿಂದ ರಾತ್ರಿ 10ರವರೆಗೆ ಪಶು ವೈದ್ಯರು ಉತ್ತಮ ಚಿಕಿತ್ಸೆ ನೀಡುವ ಮೂಲಕ ಆನ್ನದಾತರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಇದರ ಹೊರತಾಗಿಯೂ ಒಂದು ಎತ್ತು ಮೃತಪಟ್ಟಿದೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಜಾನುವಾರು ಜಾತ್ರೆ ಎರಡು-ಮೂರು ದಿನ ಮೊದಲೆ ಖಾಲಿಯಾಗಿದ್ದು ಗುರುವಾರ ಸಂಜೆಯಿಂದಲೇ ಜಾನುವಾರು ಜಾತ್ರೆಯ ಸ್ಥಳವನ್ನು ಸ್ವಚ್ಛಗೊಳಿಸುವ ಕೆಲಸ ಆರಂಭಗೊಂಡಿದೆ. ಜಾನುವಾರುಗಳ ಸೆಗಣಿ, ಅರೆ ತಿಂದ ಮೇವು, ಇತರತೆ ತ್ಯಾಜ್ಯಗಳನ್ನು ಸಾವಿಸುವಲ್ಲಿ ಸ್ವಚ್ಛತಾ ಸಿಬ್ಬಂದಿ ಕಾರ್ಯೋನ್ಮುಖವಾಗಿದೆ.

ಪ್ರತಿ ವರ್ಷ ಸಿದ್ದೇಶ್ವರ ಜಾತ್ರೆಗೆ ಬರುವ ವಿವಿಧ ತಳಿಯ ಉತ್ತಮ ಜಾನುವಾರುಗಳಿಗೆ 15 ಬಹುಮಾನ ನೀಡಲಾಗುತ್ತಿದ್ದು, ಈ ಬಾರಿ ಎರಡು ಪ್ರಶಸ್ತಿ ನೀಡಿಕೆಯನ್ನು ಪ್ರಾಯೋಜಕರು ನಿರಾಕರಿಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಭೀಕರ ಬರದಂತೆ ಪ್ರಶಸ್ತಿ ನೀಡಿಕೆಯಲ್ಲೂ ಬರ ಆವರಿಸಿದೆ. ಕೆಎಂಎಫ್ ನೀಡುತ್ತಿದ್ದ 10 ಸಾವಿರ ರೂ. ಮೌಲ್ಯದ ಪ್ರಶಸ್ತಿ ಹಾಗೂ ಜಿಪಂ ನೀಡುತ್ತಿದ್ದ 25 ಸಾವಿರ ರೂ. ಮೌಲ್ಯದ ಪ್ರಶಸ್ತಿಗಳನ್ನು ನೀಡಲು ಈ ಎರಡೂ ಸಂಸ್ಥೆಗಳು ನಿರಾಕರಿಸಿವೆ.

ಈ ಬಾರಿಯ ಜಾತ್ರೆಯಲ್ಲಿ ನಿರಂತರ ನೀರು, ವಿದ್ಯುತ್‌, ಪಶು ವೈದ್ಯಕೀಯ ಸೇವೆ ಸೇರಿದಂತೆ ಎಲ್ಲವೂ ಅತ್ಯಂತ ವ್ಯವಸ್ಥಿತವಾಗಿತ್ತು. ಭೀಕರ ಬರದ ಹಿನ್ನೆಲೆಯಲ್ಲಿ ಜಾನುವಾರುಗಳ ಸಂಖ್ಯೆಯೂ ಕಡಿಮೆ ಇದ್ದು, ಮಾರಾಟಕ್ಕೆ ಬಂದಿರುವ ಜಾನುವಾರುಗಳ ಸಂಖ್ಯೆಯೂ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆಯೇ ಇದೆ. ಇತ್ತೀಚಿನ ವರ್ಷಗಳಲ್ಲಿ ಪ್ರಶಸ್ತಿ ವಿತರಣೆ ಆದನಂತರ ಜಾನುವಾರುಗಳ ಮಾಲೀಕರು ಹೊರಟು ಹೋಗುತ್ತಾರೆ. ಈ ಬಾರಿ ಸ್ವಲ್ಪ ಬೇಗ ಜಾತ್ರೆ ಮುಗಿದಿದೆ ಅಷ್ಟೇ.
•ರಮೇಶ, ಕಾರ್ಯದರ್ಶಿ,ಎಪಿಎಂಸಿ, ವಿಜಯಪುರ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.