ಮಕ್ಕಳ ಹಾಜರಾತಿಗೆ ಕ್ರಮ ಕೈಗೊಳ್ಳಿ; ಜಿಪಂ ಸಿಇಒ

ಈ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಬೇಕು.

Team Udayavani, Feb 3, 2021, 5:23 PM IST

ಮಕ್ಕಳ ಹಾಜರಾತಿಗೆ ಕ್ರಮ ಕೈಗೊಳ್ಳಿ; ಜಿಪಂ ಸಿಇಒ

ವಿಜಯಪುರ: ಎಸ್ಸೆಸ್ಸೆಲ್ಸಿ ಪಠ್ಯಕ್ರಮ ಕ್ರಿಯಾಯೋಜನೆ ತಯಾರಿಸಿ, ಅನುಷ್ಠಾನಕ್ಕೆ ಮುಂದಾಗಿರುವುದು ಉತ್ತಮ ಬೆಳವಣಿಗೆ. ಇದರ ಜೊತೆಗೆ ಪರೀಕ್ಷೆ ಎದುರಿಸಲು ಮಕ್ಕಳನ್ನು ಈಗಿನಿಂದಲೇ ಸನ್ನದ್ಧಗೊಳಿಸಿ, ಮಕ್ಕಳಲ್ಲಿ ಪರೀಕ್ಷೆ ಬರೆಯುವ ಕುರಿತು ಆತ್ಮವಿಶ್ವಾಸ ವೃದ್ಧಿಸುವಂತೆ ಜಿಪಂ ಸಿಇಒ ಲಕ್ಷ್ಮೀಕಾಂತರೆಡ್ಡಿ ಸೂಚಿಸಿದರು. ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯ ಬಿಆರ್‌ಸಿ, ಸಿಆರ್‌ಪಿ ಅಧಿಕಾರಿಗಳೊಂದಿಗೆ ನಡೆದ ಎಸ್ಸೆಸ್ಸೆಲ್ಸಿ
ಪರೀಕ್ಷಾ ಸಿದ್ಧತೆ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ಶಾಲಾ ಮಕ್ಕಳು ಶಾಲೆಗೆ ಹಾಜರಾಗುವಂತೆ ಎಲ್ಲ ಕ್ರಮ ಕೈಗೊಳ್ಳಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಭಾವಿ ಸಿದ್ಧತೆ ಅಂಗವಾಗಿ ಎಲ್ಲ ವಿದ್ಯಾರ್ಥಿಗಳು ಶಾಲೆಗಳಿಗೆ ಫೆ. 12ರೊಳಗೆ ಹಾಜರಾಗುವಂತೆ ನೋಡಿಕೊಳ್ಳಲು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ವಿದ್ಯಾರ್ಥಿಗಳಲ್ಲಿ ಬರಹದ ಸಾಮರ್ಥ್ಯ ಹೆಚ್ಚಿಸಲು ಈಗಾಗಲೇ ಹಂಚಿಕೆ ಮಾಡಿದ ತಾಲೂಕುಗಳ ಸಂಪನ್ಮೂಲ ವ್ಯಕ್ತಿಗಳ ಸಹಕಾರದೊಂದಿಗೆ ಏ. 1ರಿಂದ
ಮೇ 15ರೊಳಗೆ ವಾರಕ್ಕೆ ಒಂದು ಬಾರಿಯಂತೆ 6 ವಾರಗಳ ಪ್ರಶ್ನೆ ಪತ್ರಿಕೆ-ಉತ್ತರ ಪತ್ರಿಕೆಗಳನ್ನು ವಿಷಯವಾರು ತಯಾರಿಸಿ, ಪ್ರತಿ ವಾರ ಪರೀಕ್ಷೆ
ನಡೆಸಬೇಕು. ಇದರೊಂದಿಗೆ ಮಕ್ಕಳಲ್ಲಿ ಪರೀಕ್ಷೆ ಎದುರಿಸುವಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವಾಗಲಿ ಎಂದು ನಿರ್ದೇಶನ ನೀಡಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಯಚೂರು ಜಿಲ್ಲೆಯಲ್ಲಿ ಈ ಪ್ರಯೋಗ ಯಶಸ್ವಿಯಾಗಿದ್ದು, ಶೇ. 8ರಷ್ಟು ಫಲಿತಾಂಶ ಹೆಚ್ಚಿದೆ. ವಿಜಯಪುರ ಜಿಲ್ಲೆಯಲ್ಲೂ ಶೇ. 100 ಫಲಿತಾಂಶ ತರಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಉಪನ್ಯಾಸಕ ಎಂ.ಎ. ಗುಳೇದಗುಡ್ಡ ಮಾತನಾಡಿ, ಜಿಲ್ಲೆಯ ಕಳೆದ ಶೈಕ್ಷಣಿಕ ವರ್ಷದ ಫಲಿತಾಂಶ ವಿಶ್ಲೇಷಿಸಿ ಈ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಬೇಕು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪ ನಿರ್ದೇಶಕರ ಕಾರ್ಯಾಲಯ
ವಿಜಯಪುರ ಸಹಯೋಗದೊಂದಿಗೆ 100 ದಿನಗಳ ಪಠ್ಯಕ್ರಮ ಕ್ರಿಯಾಯೋಜನೆ ತಯಾರಿಸಲಾಗಿದೆ ಎಂದರು.

ತಾಲೂಕಿಗೆ ಒಂದೊಂದು ವಿಷಯವನ್ನು ಹಂಚಿಕೆ ಮಾಡಿ ಸಂಪನ್ಮೂಲ ಶಿಕ್ಷಕರ ಸಹಾಯದೊಂದಿಗೆ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಫೆ. 1ರಿಂದ
ಮೇ 15ರೊಳಗೆ ಎಲ್ಲ ವಿಷಯಗಳ ಪಠ್ಯಕ್ರಮ ಬೋಧನೆಯನ್ನು ಪೂರ್ಣಗೊಳಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಸರಕಾರ ನಿಗದಿಪಡಿಸಿದ ರೂಪಣಾತ್ಮಕ ಮೌಲ್ಯಮಾಪನ ಪರೀಕ್ಷೆಗಳನ್ನು ಜಿಲ್ಲಾ ಹಂತದಲ್ಲಿ ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಹಾಜರಿದ್ದ ಎಲ್ಲ ಶಿಕ್ಷಣ ಅಧಿಕಾರಿಗಳಿಗೆ ಪಠ್ಯಕ್ರಮ ಕ್ರಿಯಾಯೋಜನೆ ಕನ್ನಡ, ಇಂಗ್ಲಿಷ್‌ ಹಾಗೂ ಉರ್ದು ಮಾಧ್ಯಮದ ತಲಾ ಒಂದೊಂದು ಪ್ರತಿಗಳನ್ನು ಸಿಇಒ ಅವರಿಗೆ ಹಸ್ತಾಂತರಿಸಿದರು.

ಪ್ರಾಂಶುಪಾಲರು ಆರ್‌.ವೈ. ಕೊಣ್ಣೂರ ಸೇರಿದಂತೆ ಶಿಕ್ಷಣ ಇಲಾಖೆ ಅಧಿ ಕಾರಿಗಳು ಪಾಲ್ಗೊಂಡಿದ್ದರು. ಶಿಕ್ಷಣಾಧಿಕಾರಿ ಎಸ್‌.ಎ. ಮುಜಾವರ್‌ ಸ್ವಾಗತಿಸಿದರು.
ಆರ್‌.ಎಲ್‌. ಯಲ್ಲಡಗಿ ವಂದಿಸಿದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.