ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ


Team Udayavani, Sep 27, 2021, 7:42 PM IST

ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

ಮುದ್ದೇಬಿಹಾಳ: ಮಿಣಜಗಿ, ಹೂವಿನ ಹಿಪ್ಪರಗಿ ಭಾಗದಿಂದ ತಾಳಿಕೋಟೆ ಪ್ರವೇಶಿಸುವ ಡೋಣಿ ನದಿಯ ಮೇಲಿನ ದಶಕಗಳಷ್ಟು ಹಳೇಯದಾದ ಸೇತುವೆಯ ಅಂದಾಜು 15 ಮೀಟರ್ನಷ್ಟು ಭಾಗ ಕುಸಿಯತೊಡಗಿದ್ದು, ಅದರ ಮುಂದಿನ ಭಾಗವೂ ನಿಧಾನವಾಗಿ ಕುಸಿಯತೊಡಗಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಂಭವನೀಯ ಅನಾಹುತ ತಪ್ಪಿಸಲು ಸೇತುವೆಯ ಮೇಲೆ ಸಂಚಾರವನ್ನು ಸೋಮವಾರ ಸಂಜೆಯಿಂದಲೇ ಬಂದ್ ಮಾಡಲಾಗಿದೆ. ಇದರಿಂದಾಗಿ ಮುದ್ದೇಬಿಹಾಳ, ಹೂವಿನ ಹಿಪ್ಪರಗಿ ಮತ್ತು ಮಿಣಜಗಿ ಭಾಗದಿಂದ ತಾಳಿಕೋಟೆ ಪ್ರವೇಶ ಬಂದ್ ಆಗಿದೆ.

ಸ್ಥಳಕ್ಕೆ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮತ್ತು ಪಿಡಬ್ಲೂಡಿ ಇಲಾಖೆಯ ವಿಜಯಪುರ, ಬೆಳಗಾವಿ ಕಚೇರಿಗಳ ಹಿರಿಯ ಅಧಿಕಾರಿಗಳು ಸೋಮವಾರ ಸಂಜೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಶಾಸಕರ ಮನವಿಯ ಮೇರೆಗೆ ಪಿಡಬ್ಲೂಡಿಯ ಬೆಂಗಳೂರು ಕಚೇರಿಯ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಸದ್ಯ ಸೇತುವೆ ಮೇಲೆ ಸಂಚಾರ ಬಂದ್ ಮಾಡಿದ್ದರಿಂದ ಪರದಾಟ ಕಂಡುಬರತೊಡಗಿದೆ. ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಸೇತುವೆ ಪಕ್ಕದಲ್ಲಿರುವ ನೆಲಮಟ್ಟದ ಹಳೇಯ ರಸ್ತೆಯನ್ನೇ ಸಂಚಾರಕ್ಕೆ ದುರಸ್ತಿ ಪಡಿಸಲು ಪಿಡಬ್ಲೂಡಿ ಇಲಾಖೆ ಅಧಿಕಾರಿಗಳು ಕೆಲಸ ಕಾರ್ಯದಲ್ಲಿ ತೊಡಗಿದ್ದಾರೆ.

ಮುದ್ದೇಬಿಹಾಳ ಸಿಪಿಐ ಆನಂದ ವಾಘ್ಮೋಡೆ ನೇತೃತ್ವದಲ್ಲಿ ತಾಳಿಕೋಟೆ ಪೊಲೀಸ್ ಠಾಣೆಯ ಪಿಎಸೈ ವಿನೋದ ದೊಡಮನಿ ಮತ್ತು ಪೊಲೀಸರು ಸೇತುವೆ ಬಳಿ ಪಿಡಬ್ಲೂಡಿ ಅಧಿಕಾರಿಗಳೊಂದಿಗೆ ಬೀಡು ಬಿಟ್ಟಿದ್ದು ಪ್ರಯಾಣಿಕರನ್ನು ನಿಯಂತ್ರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 504 ಮಂದಿಯಲ್ಲಿ ಪ್ರಕರಣ ಪತ್ತೆ : 893 ಸೋಂಕಿತರು ಗುಣಮುಖ

ಸೇತುವೆಯ ಮೇಲಿನ ಈ ರಸ್ತೆಯು ತಾಳಿಕೋಟೆ ಮೂಲಕ ಯಾದಗಿರಿ, ರಾಯಚೂರು, ಕಲಬುರ್ಗಿ ಜಿಲ್ಲೆಗಳನ್ನು ಸಂಪರ್ಕಿಸುವುದರಿಂದ, ಆಂಧ್ರಪ್ರದೇಶ ಮತ್ತು ತೆಲಂಗಾಣ ಭಾಗಕ್ಕೂ ಸಂಪರ್ಕಿಸುವುದರಿಂದ ಈ ರಸ್ತೆಯಲ್ಲಿ ಹೆಚ್ಚಿನ ವಾಹನಗಳ ಸಂಚಾರ ಇದ್ದು ಸೇತುವೆ ಮೇಲೆ ಸಂಚಾರ ಬಂದ್ ಆಗಿದ್ದರಿಂದ ಪರದಾಟ ಉಂಟಾಗಿದೆ.

ಶಾಸಕ ನಡಹಳ್ಳಿಯವರು ಸೇತುವೆ ಪರಿಸ್ಥಿತಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಸಾರ್ವಜನಿಕರ ಜೀವ ರಕ್ಷಣೆಯು ಮಹತ್ವದ್ದಾಗಿರುವುದರಿಂದ ಸೇತುವೆ ಮೇಲಿನ ಸಂಚಾರವನ್ನು ತಕ್ಷಣದಿಂದಲೇ ನಿರ್ಬಂಧಿಸಲು ಕ್ರಮ ಕೈಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದಷ್ಟು ಬೇಗ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮತ್ತು ಸೇತುವೆ ದುರಸ್ತಿಗೆ ಶಾಸ್ವತ ಕ್ರಮ ಕೈಕೊಳ್ಳುವಂತೆ ತಿಳಿಸಿದ್ದೇನೆ ಎಂದು ಹೇಳಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.