ತಾಳಿಕೋಟೆ ಬಂದ್‌ ಸಂಪೂರ್ಣ ಯಶಸ್ವಿ

ಪಾಕ್‌ ಪರ ಪ್ರೇಮ ತೋರಿದ ಮೇರು ಬ್ಯಾಗವಾಟ್‌ ಗಡಿಪಾರಿಗೆ ಒತ್ತಾಯದೇಶದ್ರೋಹಿಗೆ ತಕ್ಕ ಶಿಕ್ಷೆಗೆ ಆಗ್ರಹ

Team Udayavani, Mar 4, 2020, 12:05 PM IST

4–March-06

ತಾಳಿಕೋಟೆ: ಲವ್‌ ಯು ಪಾಕ್‌ ಆರ್ಮಿ ಎಂದು ಫೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ಪಾಕ್‌ ಆರ್ಮಿ ಪರ ಪ್ರೇಮ ವ್ಯಕ್ತಪಡಿಸಿದ್ದ ತಾಳಿಕೋಟೆಯ ಮೇರು ಬ್ಯಾಗವಾಟ್‌ ಎಂಬ ವ್ಯಕ್ತಿಯನ್ನು ಕೂಡಲೇ ಗಡಿಪಾರು ಮಾಡಬೇಕು ಹಾಗೂ ಸರ್ಕಾರದಿಂದ ಒದಗಿಸಿರುವ ಎಲ್ಲ ಸೌಲತ್ತು ಹಿಂಪಡೆಯಲು ಒತ್ತಾಯಿಸಿ ತಾಳಿಕೋಟೆ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಮಂಗಳವಾರ ಸ್ವಯಂ ಪ್ರೇರಿತ ಬಂದ್‌ ಕರೆ ಸಂಪೂರ್ಣ ಯಶಸ್ವಿಯಾಗಿದೆ.

ಬಂದ್‌ ಕರೆ ಹಿನ್ನೆಲೆ ಮಂಗಳವಾರ ಪಟ್ಟಣದಲ್ಲಿ ಬಹುತೇಕ ಎಲ್ಲ ಅಂಗಡಿ ಮುಂಗಟ್ಟು ಮುಚ್ಚಿದ್ದವು. ರೋಗಿಗಳಿಗೆ ತೊಂದರೆಯಾಗಬಾರದೆಂಬ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಹಾಗೂ ಔಷಧ ಅಂಗಡಿಗಳು ಮಾತ್ರ ತೆರೆದಿದ್ದವು. ಬಸ್‌ ಸಂಚಾರ ಎಂದಿನಂತೆ ಇದ್ದರೂ ಕೂಡಾ ಬಂದ್‌ ಕರೆ ನೀಡಿರುವ ವಿಷಯ ಅರಿತ ಗ್ರಾಮೀಣ ಭಾಗದ ಜನರು ಪಟ್ಟಣಕ್ಕೆ ಆಗಮಿಸಲಾರದ್ದರಿಂದ ಪಟ್ಟಣದ ಬಹುತೇಕ ಎಲ್ಲ ರಸ್ತೆಗಳು ಬೀಕೋ ಎನ್ನುತ್ತಿದ್ದವು.

ಪಟ್ಟಣದ ವಿಜಯಪುರ ಸರ್ಕಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಜಮಾವಣೆಗೊಂಡ ಪಟ್ಟಣದ ನಾಗರಿಕರು ಪಾಕಿಸ್ತಾನ ವಿರುದ್ಧ ಹಾಗೂ ಪಾಕ್‌ ಆರ್ಮಿ ಪರ ಪ್ರೇಮ ತೋರಿದ ಮೇರು ಬ್ಯಾಗವಾಟ್‌ ವಿರುದ್ಧ ಘೋಷಣೆ ಕೂಗುತ್ತ ಅಂಬೇಡ್ಕರ್‌ ಸರ್ಕಲ್‌, ಕತ್ರಿ ಬಜಾರ್‌, ವಿಠ್ಠಲ ಮಂದಿರ ರಸ್ತೆ, ಶಿವಾಜಿ ಸರ್ಕಲ್‌, ಮೂಲಕ ತಹಶೀಲ್ದಾರ್‌ ಕಚೇರಿ ಆವರಣಕ್ಕೆ ಆಗಮಿಸಿ ಸಭೆಯಾಗಿ ಮಾರ್ಪಟ್ಟಿತು.

ಪ್ರತಿಭಟನಾ ನೇತೃತ್ವ ವಹಿಸಿದ್ದ ವೇದಿಕೆಯ ಹಿರಿಯ ಸದಸ್ಯ ದೀನಕರ ಜೋಶಿ ಮಾತನಾಡಿ, ನಮ್ಮ ವೈರಿ ರಾಷ್ಟ್ರವಾಗಿರುವ ಪಾಕಿಸ್ತಾನದ ಪರ ಪ್ರೇಮ ತೋರುವ ಪ್ರಕರಣಗಳು ರಾಜ್ಯದಲ್ಲಿ ಇತ್ತೀಚೆಗೆ ಕಾಣಿಸಿಕೊಳ್ಳುತ್ತಿರುವುದು ಕೆಟ್ಟ ಸಂಪ್ರದಾಯ. ನಮ್ಮ ಪುಣ್ಯ ಭರತಭೂಮಿ ಭಾರತದಲ್ಲಿ ಹುಟ್ಟಿ ಬೆಳೆದು ಇಲ್ಲಿಯ ಅನ್ನ, ನೀರು, ಗಾಳಿ ಸೇವಿಸಿರುವ ಕೆಲವು ಕುಚೇಷ್ಠಿಗಳು ಪಾಪಿ ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಲಾರಂಬಿಸಿದ್ದಾರೆ. ಅಂತಹದ್ದೇ ಪ್ರಕರಣ ತಾಳಿಕೋಟೆ ಪಟ್ಟಣದಲ್ಲಿ ಕಾಲಿಟ್ಟಿರುವದು ಖೇದಕರ ಸಂಗತಿಯಾಗಿದೆ ಎಂದರು.

ನಮ್ಮ ಜೊತೆಯಲ್ಲಿಯೇ ಇದ್ದುಕೊಂಡು ಸಾದಾ ಮನುಷ್ಯನಂತೆ ವರ್ತಿಸುತ್ತಿದ್ದ ಮೇರು ಬ್ಯಾಗವಾಟ್‌ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಪಾಕ್‌ ಪರ ಪ್ರೇಮ ತೋರಿದ್ದಾನೆ. ಈ ವಿಷಯ ಹೊರಬೀಳುವ ಮುಂಚೆಯೇ ಪೊಲೀಸ್‌ ಇಲಾಖೆ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದ ಶ್ಲಾಘನೀಯ. ಇಂತಹ ಘಟನೆ ಪಟ್ಟಣದಲ್ಲಿ ಮರುಕಳಿಸಬಾರದೆಂಬ ಉದ್ದೇಶದೊಂದಿಗೆ ತಾಳಿಕೋಟೆ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಪಟ್ಟಣದಲ್ಲಿ ಬಂದ್‌ ಕರೆ ಜೊತೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.

ಈ ಪ್ರತಿಭಟನೆ ಯಾವುದೇ ಕೋಮಿನ ವಿರುದ್ಧ ಪ್ರತಿಭಟನೆಯಲ್ಲ, ಸೌಹಾರ್ದತೆಯಿಂದ ಕೂಡಿರುವ ತಾಳಿಕೋಟೆ ಪಟ್ಟಣದಲ್ಲಿ ಅಶಾಂತಿಗೆ ಕಾರಣನಾಗುತ್ತಿದ್ದ ಮೇರು ಬ್ಯಾಗವಾಟ್‌ ವಿರುದ್ಧವಾಗಿದೆ. ಈ ಬಂದ್‌ ಕರೆಗೆ ಎಲ್ಲ ಕೋಮಿನ ಜನರು ಸಹಕರಿಸಿ ಅಂಗಡಿ ಮುಂಗಟ್ಟು ಮುಚ್ಚಿ ಭಾಗವಹಿಸಿರುವುದು ಸೌಹಾರ್ದತೆ ಸಂಕೇತವಾಗಿದೆ. ದೇಶ ವಿರೋಧಿ ಚಟುವಟಿಕೆಯಲ್ಲಿ ಯಾರೇ ಭಾಗಿಯಾದರೂ ಅಂತವರಿಗೆ ನಮ್ಮ ನೆಲದಲ್ಲಿ ಒಂದೂ ಕ್ಷಣವೂ ಇರಲು ಅವಕಾಶ ನೀಡಬಾರದೆಂಬುದು ನಮ್ಮೆಲ್ಲರ ಹಕ್ಕೋತ್ತಾಯವಾಗಿದೆ ಎಂದರು.

ನ್ಯಾಯವಾದಿ ಗಂಗಾಧರ ಕಸ್ತೂರಿ ಮಾತನಾಡಿ, ಸಿಎಎ, ಎನ್‌ಆರ್‌ಸಿ ಜಾರಿಗೆ ಬಂದಾಗಿನಿಂದಲೂ ಇಂತಹ ದೇಶ ವಿರೋಧಿ  ಘೋಷಣೆ ಮತ್ತು ಪಾಕ್‌ ಪರ ಪ್ರೇಮ ತೋರಿಸುವಂತಹ ಪ್ರಕರಣಗಳು ನಡೆಯುತ್ತಿವೆ. ಸಿಎಎ, ಎನ್‌ಆರ್‌ಸಿ ಎಂಬುದು ಮೊತ್ತೂಂದು ದೇಶದಲ್ಲಿ ಹಿಂಸೆಗೆ ಒಳಪಟ್ಟು ನಮ್ಮ ದೇಶಕ್ಕೆ ಬಂದಂತಹ ವ್ಯಕ್ತಿಗಳಿಗೆ ಪೌರತ್ವ ನೀಡುವದ್ದಾಗಿದೆ ಹೊರತು ಇದು ಯಾವ ಮುಸಲ್ಮಾನರಿಗೂ ಧಕ್ಕೆ ತರುವಂತಹದ್ದಲ್ಲ ಎಂದರು.

ಇಂತಹ ಪ್ರತಿಭಟನೆ ಲಾಭ ಪಡೆಯುಲು ಕೆಲವರು ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದಾರೆ. ದೇಶ ದ್ರೋಹಿ ಮೇರು ಬ್ಯಾಗವಾಟ್‌ನನ್ನು ದೇಶದಿಂದಲೇ ಗಡಿಪಾರು ಮಾಡಬೇಕು. ಇಂತಹ ವ್ಯಕ್ತಿಗಳು ನಮ್ಮ ದೇಶದಲ್ಲಿ ಉಳಿದುಕೊಂಡರೇ ಮತ್ತೇ ಇಂತಹ ಘಟನೆಗಳು ಮರುಕಳಿಸುವುದರಲ್ಲಿ ಸಂದೇಹವಿಲ್ಲ ಎಂದರು. ರಾಘವೇಂದ್ರ ವಿಜಾಪುರ ಮನವಿ ಪತ್ರದ ಸಾರಾಂಶವನ್ನು ಓದಿದರು. ಮನವಿಯನ್ನು ತಹಶೀಲ್ದಾರ್‌ ಅನಿಲಕುಮಾರ ಢವಳಗಿ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

ವೇದಿಕೆ ಮುಖಂಡರುಗಳಾದ ಕಾಶೀನಾಥ ಮುರಾಳ, ಕಾಶೀನಾಥ ಸಜ್ಜನ, ಪ್ರಕಾಶ ಹಜೇರಿ, ಮಾನಸಿಂಗ್‌ ಕೊಕಟನೂರ, ದ್ಯಾಮನಗೌಡ ಪಾಟೀಲ, ಕಾಶೀನಾಥ ಅರಳಿಚಂಡಿ, ಸಂಗಮೇಶ ಬಬಲೇಶ್ವರ, ಮಂಜು ಶೆಟ್ಟಿ, ಕಾಶೀನಾಥ ಮಂಬ್ರುಮಕರ, ಪ್ರಮೋದ ಅಗರವಾಲ, ವಿಜಯ ಕಲಾಲ್‌, ಪ್ರಭು ಬಿಳೇಭಾವಿ, ರವಿ ಕಟ್ಟಿಮನಿ, ರಾಘವೇಂದ್ರ ಚವ್ಹಾಣ, ಸುರೇಶ ಹಜೇರಿ, ಜಯಸಿಂಗ್‌ ಮೂಲಿಮನಿ, ಕಕ್ಕು ಸಾವಜಿ, ಸತ್ಯನಾರಾಯಣ ತಾಳಪಲ್ಲೆ ನೇತೃತ್ವ ವಹಿಸಿದ್ದರು. ತಾಳಿಕೋಟೆ ಬಂದ್‌ ಕರೆ ಹಿನ್ನೆಲೆ ಸಿಪಿಐ ಆನಂದ ವಾಘ್ಮೋಡೆ, ಪಿಎಸೈ ವಸಂತ ಬಂಡಗಾರ, ಮಡ್ಡಿ ಬಂದೋಬಸ್ತ್  ಕೈಗೊಂಡಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.