ತಾಂಡಾ ಜನರ ಅಭಿವೃದ್ದಿಗೆ ಬದ್ದ: ಭೂಸನೂರ


Team Udayavani, Nov 7, 2021, 3:15 PM IST

19development

ಸಿಂದಗಿ: ಉಪಚುನಾವಣೆಯಲ್ಲಿನ ನನ್ನ ಗೆಲುವು ಪಕ್ಷದ ಕಾರ್ಯಕರ್ತರಿಗೆ ಹಾಗೂ ಕ್ಷೇತ್ರದ ಮತದಾರರಿಗೆ ಅರ್ಪಿಸುತ್ತೇನೆ ಎಂದು ನೂತನ ಶಾಸಕ ರಮೇಶ ಭೂಸನೂರ ಹೇಳಿದರು.

ಪಟ್ಟಣದ ಸೇವಾಲಾಲ್‌ ದೇವಸ್ಥಾನದ ಆವರಣದಲ್ಲಿ ಕರ್ನಾಟಕದ ತಾಂಡಾ ಅಭಿವೃದ್ಧಿ ನಿಗಮದ 11 ಲಕ್ಷ ರೂ. ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಉಪಚುನಾವಣೆಯಲ್ಲಿ ತಾಂಡಾದ ಜನತೆ ಬಿಜೆಪಿಗೆ ಮತ ನೀಡುವ ಮೂಲಕ ನನ್ನನ್ನು ಗೆಲ್ಲಿಸಿದ್ದಿರಿ. ನಿಮ್ಮ ಋಣ ಎಂದಿಗೂ ಮರೆಯುವುದಿಲ್ಲ. ಕ್ಷೇತ್ರದಲ್ಲಿನ ತಾಂಡಾಗಳ ಅಭಿವೃದ್ಧಿಗಾಗಿ ಕರ್ನಾಟಕದ ತಾಂಡಾ ಅಭಿವೃದ್ಧಿ ನಿಗಮ ವತಿಯಿಂದ ಅಭಿವೃದ್ಧಿ ಕೆಲಸಗಳನ್ನು ಮಾಡುವ ಜೊತೆಗೆ ತಾಂಡಾ ಜನರ ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿ ಫಲಾನುಭವಿಗಳಿಗೆ ಮುಟ್ಟಿಸುವಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.

ಬಿಜೆಪಿ ಸಿಂದಗಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಬಯಸಿ ಎಲ್ಲ ಸಮುದಾಯದ ಜನ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರಿಗೆ ಮತ ನೀಡಿದ್ದರಿಂದ 31 ಸಾವಿರ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅವರು ಸಿಂದಗಿ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಇತಿಹಾಸ ದಾಖಲಿಸಿದ್ದಾರೆ. ಅವರ ಗೆಲುವಿನಲ್ಲಿ ತಾಂಡಾಗಳ ಜನರ ಶಕ್ತಿ ಅಡಗಿದೆ. ನಿಮ್ಮ ಸಹಕಾರ ಯಾವಾಗಲು ಬಿಜೆಪಿ ಮೇಲಿರಲಿ ಎಂದು ಮನವಿ ಮಾಡಿಕೊಂಡರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಯುವ ಮುಖಂಡ ಡಾ| ಅನಿಲ ನಾಯಕ ಮಾತನಾಡಿ, ನೂತನ ಶಾಸಕ ರಮೇಶ ಭೂಸನೂರ ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ. ಎಲ್ಲ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ. ಈ ನಿಟ್ಟಿನಲ್ಲಿ ಅವರ ಮೇಲೆ ವಿಶ್ವಾಸವಿಟ್ಟ ನಮ್ಮ ತಾಂಡಾದ ಜನರು ಅವರ ಗೆಲುವಿನಲ್ಲಿ ಹೆಚ್ಚಿನ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಿದರು.

ರಮೇಶ ಭೂಸನೂರ ಹಿಂದಿನ ತಮ್ಮ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಕ್ಷೇತ್ರದ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕೊರೊನಾ ಪಿಡಿತ ಕುಟುಂಬಗಳಿಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದ್ದಾರೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್‌ ವಿತರಿಸುವ ಜೊತೆಗೆ ಉಚಿತವಾಗಿ ಆಂಬ್ಯುಲೆನ್ಸ್‌ ಸೌಲಭ್ಯ ಮಾಡಿ ಜನತೆ ಸೇವೆ ಮಾಡಿದ್ದಾರೆ. ಅದರ ಪುಣ್ಯದ ಫಲವಾಗಿ ಈ ಉಪಚುನಾವಣೆಯಲ್ಲಿ ರಮೇಶ ಭೂಸನೂರ ಅವರನ್ನು ಜನತೆ ಆಶೀರ್ವದಿಸಿ ಕ್ಷೇತ್ರದ ಅಭಿವೃದ್ಧಿಗೆ ಅವರನ್ನು ಪುನಃ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದರು.

ಈ ವೇಳೆ ನೂತನ ಶಾಸಕ ರಮೇಶ ಭೂಸನೂರ ಅವರನ್ನು ಸೇವಾಲಾಲ್‌ ಸಮಾಜದವರು, ವಿವಿಧ ಗ್ರಾಮಗಳಿಂದ ಆಗಮಿಸಿದ ಯುವಕರು ಸನ್ಮಾನಿಸಿದರು. ಸೇವಾಲಾಲ್‌ ದೇಸ್ಥಾನದ ಅರ್ಚಕ ವಸಂತ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು. ಸೀತಾರಾಮ ನಾಯಕ, ಮಹಾದೇವ ರಾಠೊಡ, ಕೆ.ಎನ್‌. ನಾಯಕ್‌, ಹೆಮಂತ ರಾಠೊಡ, ಪಿ.ಕೆ. ನಾಯಕ, ಅಶೋಕ ನಾಯಕ, ಕೆಂಭಾವಿ ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ, ಅಶೋಕ ಜಾಧವ, ಪುಂಡಲೀಕ ರಾಠೊಡ ಸೇರಿದಂತೆ ತಳವಾರ ಸಮಾಜದ ಯುವ ಮುಖಂಡ ಭೀಮಾಶಂಕರ ಮೋರಟಗಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.