ತೋಟಗಾರಿಕೆ ಬೆಳೆಗೂ ಟ್ಯಾಂಕರ್‌ ನೀರು!


Team Udayavani, Jan 26, 2019, 9:25 AM IST

26-january-14.jpg

ವಿಜಯಪುರ: ಭೀಕರ ಬರ ಒಂದೆಡೆ ಕೃಷಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರೆ ಮತ್ತೂಂದೆಡೆ ತೋಟಗಾರಿಕೆ ಬೆಳೆಗಾರರನ್ನು ಕಂಗಾಲು ಮಾಡಿದೆ. ನೀರಿಲ್ಲದೇ ಒಣಗುತ್ತಿರುವ ದೀರ್ಘಾವಧಿ ತೋಟಗಾರಿಕೆ ಬೆಳೆಗಳ ಸಂರಕ್ಷಣೆಗೆ ಸಾವಿರಾರು ರೂ. ಖರ್ಚು ಮಾಡಿ ಟ್ಯಾಂಕರ್‌ ನೀರು ಪೂರೈಕೆ ಮಾಡುತ್ತಿದ್ದಾರೆ. ಇತ್ತ ಮಹಾರಾಷ್ಟ್ರ ಮಾದರಿ ಪ್ಯಾಕೇಜ್‌ ಘೋಷಿಸಿ ಎಂಬ ಬೇಡಿಕೆ ಮಾತ್ರ ಈಡೇರಿಲ್ಲ. ನೆರೆ ರಾಜ್ಯಕ್ಕೆ ಅಧ್ಯಯನಕ್ಕೆ ಹೋಗಿದ್ದ ಅಧಿಕಾರಿಗಳ ತಂಡ ಬರಿಗೈಲಿ ಬಂದಿದೆ.

ವಿಜಯಪುರ ಜಿಲ್ಲೆಯಲ್ಲಿ ರಫ್ತು ಗುಣಮಟ್ಟದ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಅದರಲ್ಲೂ ಸುಮಾರು 12 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ದ್ರಾಕ್ಷಿ, 11,900 ಹೆಕ್ಟೇರ್‌ ಪ್ರದೇಶದಲ್ಲಿ ಲಿಂಬೆ, ಸುಮಾರು 3,500 ಹೆಕ್ಟೇರ್‌ ದಾಳಿಂಬೆ ಬೆಳೆಯುವ ಜೊತೆಗೆ ಮಾವು, ಪೇರಲ, ಸಪೋಟ, ಎಲೆಬಳ್ಳಿ ನೀರಿಲ್ಲದೇ ಒಣಗುತ್ತಿದ್ದು, ರೈತರು ನಷ್ಟದ ದುಸ್ಥಿತಿ ತಲುಪಿದ್ದಾರೆ.

ಮಳೆ ಇಲ್ಲದೇ ಭೀಕರ ಬರದಿಂದ ನೀರಿನ ಕೊರತೆ ಎದುರಿಸುತ್ತಿರುವ ತೋಟಗಾರಿಕೆ ಬೆಳಗಾರರು ಅದರಲ್ಲೂ ಇಂಡಿ, ಚಡಚಣ, ವಿಜಯಪುರ, ತಿಕೋಟಾ, ಸಿಂದಗಿ ತಾಲೂಕಿನ ದ್ರಾಕ್ಷಿ, ಲಿಂಬೆ, ದಾಳಿಂಬೆ ಬೆಳೆಗಾರರು ತಮ್ಮ ಬೆಳೆಗಳ ಸಂರಕ್ಷಣೆಗೆ ಟ್ಯಾಂಕರ್‌ ನೀರು ಖರೀದಿಸಿ ಬೆಳೆ ರಕ್ಷಣೆಗೆ ನಿಂತಿದ್ದಾರೆ. ನೀರು ದೊರೆಯುವ ಅಂತರದ ಮೇಲೆ ಟ್ಯಾಂಕರ್‌ ನೀರಿನ ಬೆಲೆ ಇದ್ದು, ಪ್ರತಿ ಟ್ಯಾಂಕರ್‌ ನೀರಿಗೆ 250-500 ರೂ. ಖರ್ಚು ಮಾಡುತ್ತಿದ್ದಾರೆ. ಕಳೆದ ಒಂದು ದಶಕದಿಂದ ಬಹುತೇಕ ತೋಟಗಾರಿಕೆ ಬೆಳೆಗಾರರು ಭೀಕರ ಬರದಲ್ಲಿ ಟ್ಯಾಂಕರ್‌ ನೀರು ಕೊಳ್ಳಲು ಲಕ್ಷಾಂತರ ರೂ. ವೆಚ್ಚ ಮಾಡುವುದು ಸಾಮಾನ್ಯ ಎಂಬಂತಾಗಿದೆ. ಟ್ಯಾಂಕರ್‌ ನೀರು ಕೊಳ್ಳಲಾಗದ ರೈತರು ಒಣಗಿನಿಂತ ತಮ್ಮ ಬೆಳೆ ಕಳೆದುಕೊಂಡಿದ್ದು, ರಕ್ಷಣೆಗೆ ಬರುವಂತೆ ಸರ್ಕಾರಕ್ಕೆ ಮಾಡಿಕೊಂಡ ಮನವಿಗೆ ಸ್ಪಂದನೆ ಸಿಕ್ಕಿಲ್ಲ.

ಪ್ಯಾಕೇಜ್‌ ಕೇಳದರೆ ಮಾತೇ ಇಲ್ಲ:
ನೆರೆಯ ಮಹಾರಾಷ್ಟ್ರದಲ್ಲಿ ವಿಜಯಪುರ ಜಿಲ್ಲೆಯ ಪರಿಸ್ಥಿತಿಯೇ ಇದ್ದು, ಅಲ್ಲಿನ ಸರ್ಕಾರ ತೋಟಗಾರಿಕೆ ಬೆಳೆಗಾರರ ಬೆಳೆ ಸಂರಕ್ಷಣೆಗೆ ಪ್ಯಾಕೇಜ್‌ ನೀಡುತ್ತಿದೆ. ಇದೇ ಮಾದರಿ ಸೌಲಭ್ಯ ಕಲ್ಪಿಸಿ ಎಂದು ಕಳೆದ ಒಂದು ದಶಕದಿಂದ ಕೇಳಿ ಬರುತ್ತಿರುವ ರೈತರ ಕೂಗಿಗೆ ಸರ್ಕಾರ ಸ್ಪಂದಿಸಿಲ್ಲ. ಈ ಪ್ಯಾಕೇಜ್‌ ವಿಷಯದಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಸರ್ಕಾರದ ಧೋರಣೆ ವಿರುದ್ಧ ಬರ ಪರಿಶೀಲನೆ ಸಭೆಯಲ್ಲಿ ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ವಿರುದ್ಧವೇ ಹರಿಹಾಯ್ದಿದ್ದರು. ಆಗ ಸಚಿವ ದೇಶಪಾಂಡೆ ಅವರ ಸೂಚನೆ ಮೇರೆಗೆ ವಿಜಯಪುರ ತೋಟಗಾರಿಕೆ ಅಧಿಕಾರಿಗಳ ತಂಡ ಸದರಿ ಯೋಜನೆ ಅಧ್ಯಯನಕ್ಕೆ ಸೊಲ್ಲಾಪುರಕ್ಕೆ ತೆರಳಿತ್ತು. ಜೊತೆಗೆ ಅಲ್ಲಿನ ಸರ್ಕಾರದ ಆದೇಶದ ಪತ್ರ ತರುವುದಕ್ಕಾಗಿ ಸೂಚಿಸಲಾಗಿತ್ತು.

ಆದರೆ ಅಧ್ಯಯನಕ್ಕೆ ಹೋಗಿದ್ದ ಅಧಿಕಾರಿಗಳು ಮಹಾರಾಷ್ಟ್ರ ಸರ್ಕಾರದ ಮೂಲ ಆದೇಶದ ಪ್ರತಿ ದೊರೆಯದೇ ಬರಿಗೈಲಿ ಬಂದಿದ್ದಾರೆ. ಅಲ್ಲಿನ ಅಧಿಕಾರಿಗಳು ಸದರಿ ಸೌಲಭ್ಯವನ್ನು ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಸಂವಿಧಾನದ ಕಲಂ 371 (2) ಅನ್ವಯ ವಿಶೇಷ ಸ್ಥಾನಮಾನದ ಆಧಾರದಲ್ಲಿ ಜಾರಿಗೆ ತರಲಾಗಿದೆ ಎಂದು ಮೌಖೀಕವಾಗಿ ಹೇಳಿದ್ದನ್ನು ಕೇಳಿಸಿಕೊಂಡು ಬಂದಿದೆ ಅಷ್ಟೇ. ಮೌಖೀಕ ಮಾಹಿತಿಯನ್ನೇ ಆಧರಿಸಿ ಸರ್ಕಾರಕ್ಕೆ ತೋಟಗಾರಿಕೆ ಬೆಳೆ ಸಂರಕ್ಷಣೆಗೆ ಟ್ಯಾಂಕರ್‌ ನೀರು ಪೂರೈಕೆಗೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಸರ್ಕಾರ ಯಾವ ರೀತಿ ಸ್ಪಂದಿಸುತ್ತದೆ ಎಂಬುದು ಕುತುಹೂಲ ಮೂಡಿಸಿದೆ.

ಇದೇ ವೇಳೆ ಕಳೆದ ಎರಡು ದಿನಗಳ ಹಿಂದೆ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಲಿಂಬೆ ಬೆಳೆ ಹಾನಿಗೆ ಪರಿಹಾರ ನೀಡಲು ಯೋಚಿಸಲಾಗಿದೆ. ಸರ್ಕಾರ ಮಂಡಳಿಗೆ ನೀಡಿರುವ 2 ಕೋಟಿ ರೂ. ಹಣದಲ್ಲಿ 1.50 ಕೋಟಿ ರೂ. ಹಣವನ್ನು ಲಿಂಬೆ ಬೆಳೆ ಹಾನಿ ಪರಿಹಾರಕ್ಕೆ ಮೀಸಲಿಡಲು ಚಿಂತಿಸಲಾಗಿದೆ. ಶೀಘ್ರವೇ ಸ್ಪಷ್ಟ ನಿರ್ಧಾರ ಹೊರ ಬೀಳಲಿದೆ ಎಂಬ ಮಾತುಗಳೇ ಲಿಂಬೆ ಬೆಳೆಗಾರರಿಗೆ ಕೊಂಚ ಸಮಾಧಾನ ತರಿಸಿದೆ.

ಬರದ ಹಿನ್ನೆಲೆಯಲ್ಲಿ ಆರಂಭಿಸಿರುವ ತೋಟಗಾರಿಕೆ ಬೆಳೆ ಹಾನಿ ಸಮೀಕ್ಷೆ 3-4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, ಮಾಸಾಂತ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. ತೋಟಗಾರಿಕೆ ಬೆಳೆಗಳಿಗೆ ಟ್ಯಾಂಕರ್‌ ನೀರು ಪೂರೈಕೆ ಯೋಜನೆ ಅಧ್ಯಯನಕ್ಕಾಗಿ ನಮ್ಮ ಅಧಿಕಾರಿಗಳು ಮಹಾರಾಷ್ಟ್ರಕ್ಕೆ ತೆರಳಿದ್ದರು. ಆದರೆ ಅಲ್ಲಿನ ಸರ್ಕಾರದ ಮೂಲ ಆದೇಶ ದೊರೆಯದೇ ಮೌಖೀಕ ಮಾಹಿತಿ ಸಂಗ್ರಹಿಸಿ ಮರಳಿದ್ದಾರೆ. ಇದನ್ನೇ ಆಧರಿಸಿ ರೈತರಿಗೆ ಟ್ಯಾಂಕರ್‌ ನೀರು ಪೂರೈಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ.
•ಸಂತೋಷ ಇನಾಮದಾರ,
ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ವಿಜಯಪುರ

ತೆಂಗು ಅಭಿವೃದ್ಧಿ ಮಂಡಳಿಯಲ್ಲಿ ತೆಂಗು ಬೆಳೆ ಹಾನಿಯಾದರೆ ಪ್ರತಿ ಗಿಡದ ನಷ್ಟಕ್ಕೆ ಪರಿಹಾರ ನೀಡುವ ಮಾದರಿಯಲ್ಲೇ ಲಿಂಬೆ ಬೆಳಗಾರರಿಗೆ ಪರಿಹಾರ ನೀಡಲು ಚಿಂತಿಸಲಾಗಿದೆ. ದೀರ್ಘಾವಧಿ ಬೆಳೆಯಾಗಿರುವ ಲಿಂಬೆ ಗಿಡ ಹಾಳಾದರೆ ಒಂದು ತಲೆ ಮಾರಿನ ಜೀವನ ನಿರ್ವಹಣೆ ಆಧಾರವೇ ಕಳಚಲಿದೆ. ಹೀಗಾಗಿ ಪರಿಹಾರ ನೀಡಲು ಯೋಚಿಸುತ್ತಿದ್ದು, ಶೀಘ್ರವೇ ಮಂಡಳಿ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ.
ಯಶವಂತರಾಯಗೌಡ ಪಾಟೀಲ,
ಇಂಡಿ ಕ್ಷೇತ್ರದ ಶಾಸಕ

•ಜಿ.ಎಸ್‌. ಕಮತರ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.