ನಡುಗಡ್ಡೆಯಾದ ತಾರಾಪುರ ಗ್ರಾಮ


Team Udayavani, Aug 26, 2018, 3:42 PM IST

vij-2.jpg

ಆಲಮೇಲ: ಭೀಮಾನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದು ತಾರಾಪುರ ಗ್ರಾಮ ಇದೀಗ ಎಲ್ಲ ಸಂಪರ್ಕ ಕಳೆದುಕೊಂಡು ದ್ವೀಪದಂತಾಗಿದೆ. ಮೊನ್ನೆಯಿಂದ ಮಹಾರಾಷ್ಟ್ರದ ಉಜನಿ ಡ್ಯಾಂನಿಂದ ನೀರು ಹೊರ ಬಿಡುತ್ತಿದ್ದು ಭೀಮೆಗೆ ಅಪಾರ ಪ್ರಮಾಣದಲ್ಲಿ ನೀರು ಬರುತ್ತಿದೆ. ಇದರಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಪರಿಸ್ಥಿತಿ ಅರಿತು ತಾರಾಪುರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ ಗ್ರಾಮದ ಇಚೆ ರಸ್ತೆ ಮೇಲೆ ನಿಂತು ಸಮಸ್ಯೆ ಆಲಿಸಿದರು. ಈ ಸಂದರ್ಭದಲ್ಲಿ ತಾವು ಭಯದ ವಾತವಾರಣದಲ್ಲಿ ನೆಲೆಸಿದ್ದೇವೆ ಎಂದು ಗ್ರಾಮದ ದೇವಪ್ಪಗೌಡ ಪಾಟೀಲ ತಮ್ಮ ಸಮಸ್ಯೆ ಹೇಳಿಕೊಂಡರು.
 
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ಅವಶಕ್ಯತೆ ಇದ್ದರೆ ಸೋಮವಾರ ಗಂಜಿಕೇಂದ್ರ ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿ ಕಾಲುವೆ ನೀರು ಮತ್ತು ಭೀಮಾನದಿ ಪಾತ್ರದ ನೀರು ಇನ್ನೂ ಹೆಚ್ಚಾಗುವ ಲಕ್ಷಣವಿದ್ದು ಜನರು ಎಚ್ಚರ ವಹಿಸಬೇಕೆಂದು ಹೇಳಿದರು. ಈ ಗ್ರಾಮ ಶಾಶ್ವತ ಪರಿಹಾರಕ್ಕಾಗಿ ಹೊಸೂರಲ್ಲಿ ಈಗಾಗಲೇ ನಿವೇಶನ ನೀಡಲಾಗಿದೆ ಮತ್ತು ಅವರ ಮನೆಗಳಿಗೆ ಯೋಗ್ಯಬೆಲೆಯನ್ನು ನೀಡಿದ್ದು ಅವರು ಈ ಹಳೆ ಊರಲ್ಲಿ ಇದ್ದರೆ ಸರಕಾರದಿಂದ ಯಾವುದೇ ಸೌಕರ್ಯಗಳು ಕೊಡಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಸ್ಥಳಾಂತರಗೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಮಗೆ ನೀಡಿದ ನಿವೇಶನದಲ್ಲಿ ತಕ್ಷಣ ಬರಬೇಕು ಎಂದು ಎಚ್ಚರಿಸಿದರು. 

ಗ್ರಾಮಸ್ಥರಲ್ಲಿ ನಿವೇಶನ ನೀಡುವುದಕ್ಕೆ ತಕಾರಾರು ತೆಗೆದಿದ್ದು, ಇದಕ್ಕೆ ಗ್ರಾಮದ ಹಿರಿಯರನ್ನೊಳಗೊಂಡ ಸಮಿತಿ ರಚಿಸಿ ಒಮ್ಮತ ನಿರ್ಧಾರಕ್ಕೆ ಬಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಗ್ರಾಮದ ಮಹಿಳೆ ಚಂದ್ರಭಾಗಾ ಮಾಶ್ಯಾಳ ಜಿಲ್ಲಾಧಿರಿಯೊಂದಿಗೆ ಮಾತಿಗಿಳಿದು ಕೇವಲ ತಾವು ಹೇಳಿ ಹೋದರೆ ನಡೆಯುವದಿಲ್ಲ, ನಮಗೆ ನ್ಯಾಯ ಕೊಡುವವರೆಗೆ ಊರು ಬಿಡಲು ಒಪ್ಪುವುದಿಲ್ಲ ಎಂದು ಹಠ ಹಿಡಿದರು. ನವಗ್ರಾಮ ನಿರ್ಮಾಣ ಮಾಡಲು 18 ಎಕರೆ ಭೂಮಿ ನೀಡಿದ್ದು ತಮಗೆ ಇಲ್ಲಿ ಒಂದೂ ನಿವೇಶನ ನೀಡಿಲ್ಲ, ನಮಗೆ ನ್ಯಾಯ ನೀಡಬೇಕು ಎಂದು ಭೂಮಿ ಕಳೆದುಕೊಂಡ ಅಂಬಾರಾಯ ಕಿಣಗಿ ಅಲವತ್ತುಕೊಂಡರು.

ನಾವು ಗ್ರಾಮ ಬಿಡಲು ಸಿದ್ಧರಾಗಿದ್ದೇವೆ. ಆದರೆ ಭೀಮಾ ಏತ ನೀರಾವರಿ ಅಧಿಕಾರಿಗಳು ನಿವೇಶನ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ. ಅದನ್ನು ಸರಿಪಡಿಸಿದರೆ ನಾವು ಕೂಡಲೇ ಹೊಸ ನಿವೇಶನಕ್ಕೆ ಹೋಗಲು ಸಿದ್ಧರಾಗಿದ್ದೇವೆ. 
 ಮೀರಾಸಾಬ ಮುಲ್ಲಾ, ನಿರಾಶ್ರಿತ

ತಾರಾಪುರದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಇಂಡಿ ಉಪವಿಭಾಗಾಧಿಕಾರಿ ಮತ್ತು ಸಿಂದಗಿ ತಹಶೀಲ್ದಾರ್‌ಗೆ ಸೂಚಿಸಿದ್ದೇನೆ. ಗ್ರಾಮದಲ್ಲಿ ಎಲ್ಲ ಜನಾಂಗದ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಿ ಅವರಿಗೆ ಸರಿ ಹೋಗುವ ರೀತಿಯಲ್ಲಿ ನಿವೇಶನ ಹಂಚಿಕೆ ಮಾಡಲು ಹೇಳಿದ್ದೇನೆ. ಅದು
ಬಗೆಹರಿಯದಿದ್ದರೆ ಸ್ವತಃ ನಾನೆ ಸಭೆ ಕರೆದು ಸಮಸ್ಯೆ ಬಗೆಹರಿಸುತ್ತೇನೆ.
 ಎಸ್‌.ಬಿ. ಶೆಟ್ಟೆಣ್ಣವರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.