![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಅನುದಾನ ರಹಿತ ಶಿಕ್ಷಕರ ಪ್ರತಿಭಟನೆ
Team Udayavani, Sep 21, 2020, 6:18 PM IST
![ಅನುದಾನ ರಹಿತ ಶಿಕ್ಷಕರ ಪ್ರತಿಭಟನೆ](https://www.udayavani.com/wp-content/uploads/2020/09/vp-tdy-1-16-620x372.jpg)
ಸಾಂದರ್ಭಿಕ ಚಿತ್ರ
ವಿಜಯಪುರ: ಅನುದಾನ ರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಸಹಾಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಖಾಸಗಿ ಆಡಳಿತ ಮಂಡಳಿಗಳ ಹಾಗೂನೌಕರರ ಒಕ್ಕೂಟ ಜಿಲ್ಲಾ ಘಟಕ ಪದಾಧಿಕಾರಿಗಳು ಜಿಲ್ಲಾ ಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಎಸ್.ಡಿ. ಕುಮಾನಿ ಮಾತನಾಡಿ, ಕೋವಿಡ್-19 ಕಾರಣದಿಂದಾಗಿ ಶಾಲೆಗಳು ಸಂಪೂರ್ಣ ಬಂದಾಗಿದ್ದು, ಅನುದಾನ ರಹಿತ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ತುಂಬಾ ಸಂಕಷ್ಟದಲ್ಲಿದ್ದಾರೆ. 4-5 ತಿಂಗಳಿಂದ ಅವರಿಗೆ ವೇತನವಿಲ್ಲ ಹೀಗಾಗಿ ಈ ನೌಕರರ ಕುಟುಂಬಗಳು ಬೀದಿಪಾಲಾಗಿವೆ ಎಂದರು.
ಈ ಶಿಕ್ಷಕರ ಸಂಕಷ್ಟಕ್ಕೆ ಇದುವರೆಗೂ ಸರಕಾರಯಾವುದೇ ಸಹಾಯ ಮಾಡಿಲ್ಲ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಮರಣ, ರಾಜೀನಾಮೆ ಮತ್ತು ನಿವೃತ್ತಿಯಿಂದ ಶಿಕ್ಷಕ, ಶಿಕ್ಷಕೇತರ ಹುದ್ದೆಗಳು ಖಾಲಿಯಾಗಿವೆ. 2014ರಿಂದ ಇಲ್ಲಿವರೆಗೆ ಈ ಹುದ್ದೆಗಳನ್ನು ತುಂಬಿಕೊಳ್ಳಲು ಸರಕಾರ ಅನುಮತಿ ನೀಡಿಲ್ಲ. ಶಾಲೆಗಳಲ್ಲಿ ಮಕ್ಕಳಿಗೆ ಕಲಿಸಲು ಶಿಕ್ಷಕರ ಕೊರತೆ ಉಂಟಾಗಿದೆ. ಸರಕಾರ ಈ ಹುದ್ದೆಗಳನ್ನು ತುಂಬಿಕೊಳ್ಳಲು ಆರ್ಥಿಕ ಮಿತವ್ಯಯ ಸಡಿಲಗೊಳಿಸಬಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಗೌರವಾಧ್ಯಕ್ಷ ಸಹಜಾನಂದ ದಂದರಗಿ ಮಾತನಾಡಿ, 2006ರಲ್ಲಿ ನೇಮಕಾತಿ ಹೊಂದಿದ ಶಿಕ್ಷಕರಿಗೆ ಹೊಸ ಯೋಜನೆಗಳ ಪ್ರಕಾರ ಪಿಂಚಣಿ ನಿವೃತ್ತಿಯ ನಂತರ ಪಿಂಚಣಿ ನೀಡಲಾಗುತ್ತಿದೆ.ಈ ಕಾರಣದಿಂದಾಗಿ ನೌಕರರಿಗೆ ತುಂಬಾ ಅನ್ಯಾಯವಾಗಿದೆ. ಕೂಡಲೇ ಸರ್ಕಾರ ಹಳೆಯ ಮಾದರಿಯ ಪಿಂಚಣಿ ನೀಡಬೇಕು ಎಂದರು.
ಸರಕಾರ 1995ರ ನಂತರದ ಶಾಲೆ, ಕಾಲೇಜುಗಳಿಗೆ ಅನುದಾನ ನೀಡಬೇಕು. ರಾಜ್ಯ ಸರಕಾರಿ ನೌಕರರಿಗೆ 7 ಸ್ಥಗಿತ ವೇತನ ಬಡ್ತಿ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಅನುದಾನಿತ ಶಾಲಾ ನೌಕರರಿಗೆ ವಿಸ್ತರಿಸಬೇಕು ಹಾಗೂ ಕಾಲ್ಪನಿಕ ವೇತನ ಬಡ್ತಿಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಕೆ.ಜಿ. ಕುಲಗೊಂಡ, ಮುರುಗೇಶ ಹೊಕ್ರಾಣಿ, ಎಂ.ಬಿ. ಬಿರಾದಾರ, ಚಂದ್ರಶೇಖರ ಲೋಣಿ, ಶರಣು ಕಡಬಿ, ಸಿದ್ದಣ್ಣ ಬಡದಗೋಳ, ಎಸ್.ಆರ್. ಕಟ್ಟಿ, ಈಶ್ವರ ಕಂಬಾರ, ಎಂ.ಕೆ. ಕುಲಕರ್ಣಿ, ಎಸ್.ಎ. ಪುಣೇಕರ, ರಾಜೇಶ ದರಬಾರ, ಮಹಿಬೂಬಖಾದ್ರಿ ಮುಶ್ರೀಫ್, ಎಸ್.ಎ. ಜಿದ್ದಿ, ಎಲ್.ಆರ್. ಅಂಗಡಿ, ಜಿ.ಎಸ್. ಮಕಾನದಾರ, ಕೆ.ಎ. ಚವ್ಹಾಣ ಇದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.