ಅನುದಾನ ರಹಿತ ಶಿಕ್ಷಕರ ಪ್ರತಿಭಟನೆ


Team Udayavani, Sep 21, 2020, 6:18 PM IST

ಅನುದಾನ ರಹಿತ ಶಿಕ್ಷಕರ ಪ್ರತಿಭಟನೆ

ಸಾಂದರ್ಭಿಕ ಚಿತ್ರ

ವಿಜಯಪುರ: ಅನುದಾನ ರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಸಹಾಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಖಾಸಗಿ ಆಡಳಿತ ಮಂಡಳಿಗಳ ಹಾಗೂನೌಕರರ ಒಕ್ಕೂಟ ಜಿಲ್ಲಾ ಘಟಕ ಪದಾಧಿಕಾರಿಗಳು ಜಿಲ್ಲಾ ಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ಎಸ್‌.ಡಿ. ಕುಮಾನಿ ಮಾತನಾಡಿ, ಕೋವಿಡ್‌-19 ಕಾರಣದಿಂದಾಗಿ ಶಾಲೆಗಳು ಸಂಪೂರ್ಣ ಬಂದಾಗಿದ್ದು, ಅನುದಾನ ರಹಿತ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ತುಂಬಾ ಸಂಕಷ್ಟದಲ್ಲಿದ್ದಾರೆ. 4-5 ತಿಂಗಳಿಂದ ಅವರಿಗೆ ವೇತನವಿಲ್ಲ ಹೀಗಾಗಿ ಈ ನೌಕರರ ಕುಟುಂಬಗಳು ಬೀದಿಪಾಲಾಗಿವೆ ಎಂದರು.

ಈ ಶಿಕ್ಷಕರ ಸಂಕಷ್ಟಕ್ಕೆ ಇದುವರೆಗೂ ಸರಕಾರಯಾವುದೇ ಸಹಾಯ ಮಾಡಿಲ್ಲ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಮರಣ, ರಾಜೀನಾಮೆ ಮತ್ತು ನಿವೃತ್ತಿಯಿಂದ ಶಿಕ್ಷಕ, ಶಿಕ್ಷಕೇತರ ಹುದ್ದೆಗಳು ಖಾಲಿಯಾಗಿವೆ. 2014ರಿಂದ ಇಲ್ಲಿವರೆಗೆ ಈ ಹುದ್ದೆಗಳನ್ನು ತುಂಬಿಕೊಳ್ಳಲು ಸರಕಾರ ಅನುಮತಿ ನೀಡಿಲ್ಲ. ಶಾಲೆಗಳಲ್ಲಿ ಮಕ್ಕಳಿಗೆ ಕಲಿಸಲು ಶಿಕ್ಷಕರ ಕೊರತೆ ಉಂಟಾಗಿದೆ. ಸರಕಾರ ಈ ಹುದ್ದೆಗಳನ್ನು ತುಂಬಿಕೊಳ್ಳಲು ಆರ್ಥಿಕ ಮಿತವ್ಯಯ ಸಡಿಲಗೊಳಿಸಬಬೇಕು ಎಂದು ಒತ್ತಾಯಿಸಿದರು.

ಸಂಘಟನೆ ಗೌರವಾಧ್ಯಕ್ಷ ಸಹಜಾನಂದ ದಂದರಗಿ ಮಾತನಾಡಿ, 2006ರಲ್ಲಿ ನೇಮಕಾತಿ ಹೊಂದಿದ ಶಿಕ್ಷಕರಿಗೆ ಹೊಸ ಯೋಜನೆಗಳ ಪ್ರಕಾರ ಪಿಂಚಣಿ ನಿವೃತ್ತಿಯ ನಂತರ ಪಿಂಚಣಿ ನೀಡಲಾಗುತ್ತಿದೆ.ಈ ಕಾರಣದಿಂದಾಗಿ ನೌಕರರಿಗೆ ತುಂಬಾ ಅನ್ಯಾಯವಾಗಿದೆ. ಕೂಡಲೇ ಸರ್ಕಾರ ಹಳೆಯ ಮಾದರಿಯ ಪಿಂಚಣಿ ನೀಡಬೇಕು ಎಂದರು.

ಸರಕಾರ 1995ರ ನಂತರದ ಶಾಲೆ, ಕಾಲೇಜುಗಳಿಗೆ ಅನುದಾನ ನೀಡಬೇಕು. ರಾಜ್ಯ ಸರಕಾರಿ ನೌಕರರಿಗೆ 7 ಸ್ಥಗಿತ ವೇತನ ಬಡ್ತಿ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಅನುದಾನಿತ ಶಾಲಾ ನೌಕರರಿಗೆ ವಿಸ್ತರಿಸಬೇಕು ಹಾಗೂ ಕಾಲ್ಪನಿಕ ವೇತನ ಬಡ್ತಿಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಕೆ.ಜಿ. ಕುಲಗೊಂಡ, ಮುರುಗೇಶ ಹೊಕ್ರಾಣಿ, ಎಂ.ಬಿ. ಬಿರಾದಾರ, ಚಂದ್ರಶೇಖರ ಲೋಣಿ, ಶರಣು ಕಡಬಿ, ಸಿದ್ದಣ್ಣ ಬಡದಗೋಳ, ಎಸ್‌.ಆರ್‌. ಕಟ್ಟಿ, ಈಶ್ವರ ಕಂಬಾರ, ಎಂ.ಕೆ. ಕುಲಕರ್ಣಿ, ಎಸ್‌.ಎ. ಪುಣೇಕರ, ರಾಜೇಶ ದರಬಾರ, ಮಹಿಬೂಬಖಾದ್ರಿ ಮುಶ್ರೀಫ್‌, ಎಸ್‌.ಎ. ಜಿದ್ದಿ, ಎಲ್‌.ಆರ್‌. ಅಂಗಡಿ, ಜಿ.ಎಸ್‌. ಮಕಾನದಾರ, ಕೆ.ಎ. ಚವ್ಹಾಣ ಇದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.