ಶಿಕ್ಷಕರ ಸಮಸ್ಯೆ ಅರಿವಿದೆ: ಚಂದ್ರಶೇಖರ


Team Udayavani, May 18, 2022, 5:41 PM IST

21teachers

ವಿಜಯಪುರ: ಪ್ರಸ್ತುತ ಸಂದರ್ಭದಲ್ಲಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳು ಹತ್ತು ಹಲವಾರಿದ್ದು, ಪರಿಹಾರ ಕ್ರಮಗಳು ಮಾತ್ರ ಸಾಧ್ಯವಾಗಿಲ್ಲ. ಓರ್ವ ಶಿಕ್ಷಕನಾಗಿ ಶಿಕ್ಷಕರ ಸಮಸ್ಯೆಗಳ ನೈಜ ಅರಿವು ಇರುವ ನಾನು ಸದನದಲ್ಲಿ ಶಿಕ್ಷಕರ ನೋವಿಗೆ ಧ್ವನಿಯಾಗುತ್ತದೆ. ಆ ಮೂಲಕ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದೇ ನನ್ನ ಆದ್ಯತೆ ಎಂದು ವಾಯುವ್ಯ ಶಿಕ್ಷಕರ ಮೇಲ್ಮನೆ ಕ್ಷೇತ್ರದ ಜೆಡಿಎಸ್‌ ಘೋಷಿತ ಅಭ್ಯರ್ಥಿ ಚಂದ್ರಶೇಖರ ಲೋಣಿ ಭರವಸೆ ನೀಡಿದರು.

ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದಿಂದ ಈಗಾಗಲೇ ನನಗೆ ಅಭೂತಪೂರ್ವ ಬೆಂಬಲ ದೊರೆತಿದ್ದು, ನಾನು ಅವರ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು.

ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ ನಿವಾರಣೆಗೆ ನನ್ನ ಪ್ರಣಾಳಿಕೆಯಲ್ಲಿ ಪ್ರಾಮುಖ್ಯತೆ ನೀಡಿದ್ದೇನೆ. ಮತದಾನ ಅರ್ಹತೆ ಇರುವ ಶಿಕ್ಷಕ ಪ್ರಭುಗಳು ನನಗೆ ಹೆಚ್ಚಿನ ಮತಗಳ ಆಶೀರ್ವಾದ ಮಾಡಿ ಗುರು ಸ್ವರೂಪಿ ಶಿಕ್ಷಕರ ಸೇವೆ ಮಾಡುವ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಶಿಕ್ಷಕ ಬಂಧುಗಳು ಎದುರಿಸುತ್ತಿರುವ ನೋವುಗಳನ್ನು ಸ್ವಯಂ ಅನುಭವಿಸಿರುವ ನಾನು, ಹತ್ತಿರದಿಂದ ಇತರೆ ಶಿಕ್ಷಕರ ನೋವಿನ ಅರಿವೂ ಇದೆ. ಹೀಗಾಗಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸಂಕಲ್ಪ ಮಾಡಿರುವ ನನಗೆ ನನ್ನ ಬದ್ಧತೆ ತೋರಲು ಶಿಕ್ಷಕರು ನನ್ನನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಬೆಳಗಾವಿ ಭಾಗದಲ್ಲಿ ಗಡಿ ಪ್ರದೇಶಗಳಲ್ಲಿ ಕನ್ನಡ ಶಾಲೆಗಳು ಅನೇಕ ತೊಂದರೆ ಎದುರಿಸುತ್ತಿವೆ. ಇವುಗಳನ್ನು ಸಶಕ್ತಗೊಳಿಸಲು ಸರ್ಕಾರ ವಿಶೇಷ ಅನುದಾನ ನೀಡಬೇಕಿದೆ. ಈ ಕುರಿತು ಸದನದಲ್ಲಿ ಧ್ವನಿ ಎತ್ತುವ ಮೂಲಕ ಗಡಿ ಭಾಗದ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಪಣ ತೊಟ್ಟಿದ್ದೇನೆ ಎಂದರು.

ಇದಲ್ಲದೇ 2006ರ ನಂತರ ನೇವಕವಾದ ಶಿಕ್ಷಕ ವೃತ್ತಿ ಬಾಂಧವರಿಗೆ ಪಿಂಚಣಿ ವ್ಯವಸ್ಥೆ ಜಾರಿಗೆ ಧ್ವನಿಯಾಗುತ್ತೇನೆ. 1994-95 ನಂತರ ಆರಂಭವಾದ ಎಲ್ಲ ಖಾಸಗಿ ಶಾಲಾ-ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದ ನನ್ನ ಆದ್ಯತೆಯಲ್ಲಿ ಒಂದು. ರಾಜ್ಯದ ನಿರ್ಲಕ್ಷಿತ ಶಿಕ್ಷಣ ವ್ಯವಸ್ಥಯಾಗಿರುವ ಐಟಿಐ ಕಾಲೇಜು ಸಿಬ್ಬಂದಿಗಳಿಗೂ ಅನುದಾನ ವ್ಯಾಪ್ತಿಗೆ ತರಬೇಕಿದೆ. ಅಲ್ಲಿನ ಶಿಕ್ಷಕರ ಸಮಸ್ಯೆಗೆ ಗಮನ ಹರಿಸಬೇಕಿದೆ. ಹೀಗಾಗಿ ನನ್ನ ಗೆಲುವಿಗೆ ಸಮಸ್ಯೆಗಳ ಅರಿವಿರುವ ಶಿಕ್ಷಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು.

ಸಹಜಾನಂದ ದಂಧರಗಿ ಮಾತನಾಡಿ, ರಾಜಕೀಯೇತರ ಸಂಘವಾಗಿರುವ ಮಾಧ್ಯಮಿಕ ಶಾಲಾ ನೌಕರರ ಸಂಘಕ್ಕೆ ಅಧ್ಯಕ್ಷರಾಗಿರುವ ಚಂದ್ರಶೇಖರ ಲೋಣಿ ಅವರಿಗೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡಿದೆ. ಓರ್ವ ಶಿಕ್ಷಕರಾಗಿ ಶಿಕ್ಷಕರ ನೋವಿನ ಅರಿವು ಇರುವ ಕಾರಣ, ಅವರು ಸದನದಲ್ಲಿ ನಮ್ಮ ಭಾವನೆಯನ್ನು ಸ್ಪಷ್ಟವಾಗಿ ವ್ಯಕ್ತಪಡಿಸಲಿದ್ದಾರೆ. ಹೀಗಾಗಿ ಅವರ ಆಯ್ಕೆಯೂ ಖಚಿತವಾಗಲಿದೆ ಎಂದರು.

ಶಾಸಕ ದೇವಾನಂದ ಚವ್ಹಾಣ ಮಾತನಾಡಿ, ಶಿಕ್ಷಕರ ನೋವಿಗೆ ಕಾಳಜಿ ಹೊಂದಿರುವ ಪ್ರಗತಿಪರ ಚಿಂತನೆಯ ಶಿಕ್ಷಕ ಚಂದ್ರಶೇಖರ ಅವರಿಗೆ ಮೂರೂ ಜಿಲ್ಲೆಗಳ ಶಿಕ್ಷಕ ಮತದಾರರು ಪ್ರಥಮ ಆಧ್ಯತೆಯ ಮತ ನೀಡಿ ಗೆಲ್ಲಿಸುವ ವಿಶ್ವಾಸವಿದೆ ಎಂದರು. ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ.ಎಸ್‌. ಪಾಟೀಲ ಮಾಡಗಿ, ರಾಜುಗೌಡ ಪಾಟೀಲ ಕುದರಿ ಸಾಲೋಡಗಿ, ಜೆಡಿಎಸ್‌ ಜಿಲಾಧ್ಯಕ್ಷೆ ಸ್ನೇಹಲತಾ ಶೆಟ್ಟಿ ಸೇರಿದಂತೆ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.