ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಿ


Team Udayavani, Sep 8, 2020, 6:16 PM IST

ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಿ

ಸಿಂದಗಿ: ಶಿಕ್ಷಕರು ಆದರ್ಶ ಜೀವನ ಕಟ್ಟಿಕೊಂಡು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕುಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.

ಸೋಮವಾರ ಪಟ್ಟಣದ ಮಾಂಗಲ್ಯ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ದೈಹಿಕಶಿಕ್ಷಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನೋತ್ಸವ, ಸಿರಿಗನ್ನಡ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ವಯೋಮಾನಕ್ಕಿಳಿದು ಪಾಠ ಬೋಧನೆ ಮಾಡಿದಾಗ ಮಾತ್ರ ಪರಿಣಾಮಕಾರಿ ಕಲಿಕೆಯಾಗುವುದು. ಈ ಕಲಿಕೆಯಿಂದ ವಿದ್ಯಾರ್ಥಿಯಾಗಿ ಮುಂದೆ ಉತ್ತಮ ನಾಗರಿಕನಾಗುತ್ತಾನೆ. ಈ ನಿಟ್ಟಿನಲ್ಲಿ ಶೈಕ್ಷಣಿಕ ಕಾರ್ಯ ಮಾಡಿದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡುವಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನಿಯ ಎಂದರು.

ಬರಡೋಲದ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಈರಣ್ಣ ಶಾಸ್ತ್ರಿ ಮಾತನಾಡಿ, ಶಿಕ್ಷಕರು ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳ ಬೇಕು.ಮಕ್ಕಳಿಗೆ ಪಾಠ ಬೋಧನೆ ಮಾಡುವ ಜೊತೆಗೆ ಮೌಲ್ಯಾಧಾರಿತ ನೀತಿಗಳನ್ನು ತಿಳಿ ಹೇಳಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಲಬುರಗಿಯ ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ಮಾತನಾಡಿ, ಶಿಕ್ಷಕರಿಗೆ ಪ್ರಶಸ್ತಿ ನೀಡುವ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ದೈಹಿಕ ಶಿಕ್ಷಕರ ಸಂಘದ ಕಾರ್ಯ ಅನುಕರಣೀಯ ಎಂದರು.

ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಿಕ್ಷಕರಾದ ಧನ್ಯಕುಮಾರ ಧನಶೆಟ್ಟಿ, ಲಕ್ಷ್ಮೀ ತೇರದಾಳಮಠ, ಬಸವರಾಜ ಬಿರಾದಾರ, ಮಹಾಂತೇಶ ಕಲಶೆಟ್ಟಿ, ಸಂತೋಷ ಕ್ಷತ್ರಿ, ರೇವಣಸಿದ್ದ ಮೇತ್ರಿ, ಜಯಶ್ರೀ ಬಾಸಗಿ, ಚನ್ನಮ್ಮ ಬಮ್ಮಣ್ಣಿ, ಯಲ್ಲಪ್ಪ ಬೂದಿಹಾಳ, ಮಂಜುನಾಥ ಪಾಟೀಲ, ಪಲ್ಲವಿ ವೈದಂಡೆ, ಸರಸ್ವತಿ ಬಿರಾದಾರ, ಲಕ್ಷ್ಮಣ ಸೊನ್ನ, ಮಾಳಪ್ಪ ಹೊಸೂರ, ಸಿದ್ರಾಮಪ್ಪ ಗಬಸಾವಳಗಿ, ಕೆಂಚಪ್ಪ ಡೋಣಿ, ಪ್ರಕಾಶ ಹೋಳಿನ, ಸವಿತಾ ಬಿರಾದಾರ, ತಾರಾಮತಿ ಪಾಟೀಲ, ಚಂದ್ರಶೇಖರ ಕೆಳಗಿನಮನಿ, ಮಹಿಬೂಬಭಾಷಾ ಬಾವಿಪಟೇಲ್‌, ಶಿವಾನಂದ ಶಹಾಪುರ, ಎಂ.ಜಿ. ಚೌಧರಿ, ಜಿ.ಎಂ. ಯಲಗಾರ, ಇಬ್ರಾಹಿಂ ಸಿಪಾಯಿ, ರಂಗಾ ಶಿಂಧೆ, ಕಸ್ತೂರಿ ಗೆಡ್ಡೆಪ್ಪನವರ, ಜಿ.ಎಂ. ಪಾಟೀಲ, ಶಶಿಧರ ಅವಟಿ, ಎಂ.ಎಂ. ಆಳಂದ, ಮಹಾಂತೇಶ ಅಂಗಡಿ, ರೋಹಿಣಿ ಬರಡೋಲ, ಸಂತೋಷಕುಮಾರ ಬಂಡೆ, ಮೆಹರುನಸಾ ಬೇಪಾರಿ, ಮಹಿಬೂಬ ಅಸಂತಾಪುರ, ಚಂದ್ರಕಲಾ ಬಿರಾದಾರ, ಪುಷ್ಪಾವತಿ ಬಡಿಗೇರ, ರುದ್ರಗೌಡ ಬಿರಾದಾರ, ಪ್ರೀತಿ ಕಾಳೆ, ವಿಜಯಲಕ್ಷ್ಮೀ ಶೆಟಗಾರ, ಬರಮಪ್ಪ ಹಿರೆಹೊಳಿ ಅವರಿಗೆ ಸಿರಿಗನ್ನಡ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಂತರ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ವಾರ್ಷಿಕಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ಜ್ಞಾನಭಾರತಿ ಶಾಲೆ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಶಿಕ್ಷಕ ಚಂದ್ರಕಾಂತ ಸಿಂಗೆ ಮತ್ತು ಪ್ರಲ್ಹಾದ ದೊಡಮನಿ ರೈತ ಗೀತೆ ಹಾಡಿದರು. ಕಸಾಪ ಅಧ್ಯಕ್ಷ ಎಸ್‌.ಬಿ. ಚೌಧರಿ ಸ್ವಾಗತಿಸಿದರು. ಮುಕ್ತಾಯಕ್ಕ ಕಟ್ಟಿ ನಿರೂಪಿಸಿದರು. ಬಸವರಾಜ ಅಗಸರ ವಂದಿಸಿದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.