ಬೇಡಿಕೆ ಈಡೇರಿಕೆಗೆ ಶಿಕ್ಷಕರ ಆಗ್ರಹ


Team Udayavani, Aug 6, 2018, 12:18 PM IST

vij-2.jpg

ವಿಜಯಪುರ: ಪ್ರತಿ ತಿಂಗಳು 5ರೊಳಗೆ ಶಿಕ್ಷಕರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ವ ಶಿಕ್ಷಣ ಅಭಿಯಾನ ವಿಜಯಪುರ ಗ್ರಾಮೀಣ ವಲಯದ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಎರಡು ವಾರದಲ್ಲಿ ಬೇಡಿಕೆ ಈಡೇರಿಸುವ ಗಡುವು ನೀಡಿದರು.

ನಗರದ ಟಕ್ಕೆ ಪ್ರದೇಶದಲ್ಲಿರುವ ವಿಜಯಪುರ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಶಿಕ್ಷಕರು, ಸರ್ಕಾರದ ಆದೇಶದವಿದ್ದರೂ ವಿಜಯಪುರದ ಗ್ರಾಮೀಣ ವಲಯದ ಸರ್ವ ಶಿಕ್ಷಣ ಅಭಿಯಾನ ಯೋಜನೆಯ ಶಿಕ್ಷಕರ 2-3 ತಿಂಗಳ ವೇತನ ಬಾಕಿ ಉಳಿಸಿಕೊಳ್ಳಲಾಗುತ್ತದೆ. ಪದೇ ಪದೇ ಈ ವಿಷಯದಲ್ಲಿ ಹೋರಾಟ ಮಾಡುವುದು ಸಾಮಾನ್ಯವಾಗಿದೆ ಎಂದು ದೂರಿದರು.

ಎಸ್‌ಎಸ್‌ಎ, ಎಜಿಟಿ ಹಾಗೂ ಎನ್‌ಪಿಎಸ್‌ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು ಈ ಶಿಕ್ಷಕರಿಗೆ ಕಳೆದ ಎರಡು ತಿಂಗಳಿಂದ ವೇತನ ಪಾವತಿಸಿಲ್ಲ. 2005ರಿಂದ ಈ ವರೆಗೆ ಸೇವೆಗೆ ಸೇರಿದ ಶಿಕ್ಷಕರ ಮೂಲ ವೇತನ ರೂ. 31,850ರಂತೆ ನಿಗದಿ ಮಾಡುವ ಬೇಡಿಕೆ ಈಡೇರಿಲ್ಲ. ಶಿಕ್ಷಕರ ವಂತಿಗೆ ಹಣ ಕಟಾವು ಮಾಡಿದ್ದರೂ ಸರ್ಕಾರದ ಪಾಲಿನ ವಂತಿಗೆ ಹಣ ಜಮೆ ಮಾಡಿಲ್ಲ. ಕೂಡಲೇ ಶೇ. 8ರ ಬಡ್ಡಿಯೊಂದಿಗೆ ಜಮೆ ಮಾಡುವಂತೆ ಆಗ್ರಹಿಸಿದರು.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಕಾಯಂ ಪೂರ್ವ ಸೇವಾ ಅವಧಿ ವಿಳಂಬವಾಗಿ ಘೋಷಣೆ ಮಾಡಿದ್ದು ಆ ಅವಧಿಯ ಬಾಕಿ ವೇತನ ತಕ್ಷಣ ನೀಡಬೇಕು. 10 ವರ್ಷದ ಕಾಲಮಿತಿ ವೇತನ ಬಡ್ತಿ ವಿಳಂಬವಾಗಿ ಮಂಜೂರಿ ಮಾಡಿದ್ದು ಅವಧಿಯ ಬಾಕಿ ವೇತನವನ್ನು ಶೀಘ್ರ ಜಮೆ ಮಾಡಬೇಕು. ಶಿಕ್ಷಕರಿಗೆ ಒಂದು ವಿಶೇಷ ವೇತನ ಬಡ್ತಿ ವಿಳಂಬವಾಗಿದ್ದು,
ವಿಶೇಷ ವೇತನ ಬಡ್ತಿಯ ಬಾಕಿ ವೇತನ ಜಮೆ ಮಾಡಬೇಕು.

ಎಸ್‌ಎಸ್‌ಎ ಯೋಜನೆಯ ಶಿಕ್ಷಕರ 2008 ರಿಂದ 2011 ಅವ ಧಿವರೆಗಿನ ಕಂತುಗಳು ಶಿಕ್ಷಕರ ವೇತನದಲ್ಲಿ ಕಟಾವು ಮಾಡಿದ್ದರೂ ಅವರ ಖಾತೆಗೆ ಇನ್ನು ಜಮೆ ಆಗಿರುವುದಿಲ್ಲ. ಅದನ್ನು ತಕ್ಷಣವೇ ಅವರ ಖಾತೆಗೆ ಜಮೆ ಮಾಡಿಸಬೇಕು. ತುಟ್ಟಿಭತ್ಯೆ ಬಾಕಿ ಹಣ ಜಮೆ ಮಾಡಬೇಕು. ಬೇಡಿಗೆ ಸಂಭ್ರಮದಲ್ಲಿ ಕಾರ್ಯನಿರ್ವಹಿಸಿದ ಸುಮಾರು 105 ಶಿಕ್ಷಕರ ಗಳಿಕೆ ರಜೆ ಜಮೆ ಮಾಡಿ ಸೇವಾಪುಸ್ತಕದಲ್ಲಿ ನಮೂದಿಸಬೇಕು.

ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಕಚೇರಿಗೆ ಬಿಲ್‌ ಸಲ್ಲಿಸಿದರೂ ಮಂಜೂರು ಮಾಡಿಲ್ಲ. ತಕ್ಷಣ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು. ನಿವೃತ್ತಿ ವೇತನ ಸಹಿತವಾಗಿ 2005ರಲ್ಲಿ ಸೇವೆಗೆ ಸೇರಿದ ಶಿಕ್ಷಕರಿಗೂ ಇಲಾಖೆ ಅನುಮತಿ ಸಹಿತ ನೇಮಕಗೊಂಡಿರುವ ಶಿಕ್ಷಕರ ನಿವೃತ್ತಿ ವೇತನ ಸಹಿತವಾಗಿ ಎಲ್ಲ ಆರ್ಥಿಕ ಸೌಲಭ್ಯ ಕಲ್ಪಿಸಬೇಕು
ಎಂದ ಆಗ್ರಹಿಸಿದರು. 

ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌. ಎನ್‌. ಹುರಳಿ, ಶಿಕ್ಷಕರ ವೇತನ ಬಿಡುಗಡೆ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಬರುವ ಒಂದು ವಾರದಲ್ಲೇ ಪರಿಹರಿಸುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಶಿಕ್ಷಕರ ಸಂಘದ ಗ್ರಾಮೀಣ ವಲಯದ ಅಧ್ಯಕ್ಷ ಎ.ಎನ್‌. ಬಗಲಿ, ಕಾರ್ಯದರ್ಶಿ ಎ.ಆರ್‌. ಮಾಶ್ಯಾಳ, ಆರ್‌.ಎಸ್‌. ಬನಸೋಡೆ, ಅಶೋಕ ಬೂದಿಹಾಳ, ಎಂ.ಎಸ್‌. ಟಕ್ಕಳಕಿ, ಮಹಾಂತೇಶ ಕದ್ದಿ, ಬಸವರಾಜ ಪಡಗನೂರ,
ಹನುಮಂತ ಕಾಲೆಬಾಗ, ಪರಮೇಶ್ವರ ಗದ್ಯಾಳ, ಅನಿಲ ಗುಡೆಪ್ಪಗೋಳ, ಅಡಿವೆಪ್ಪ ಸಾಹುಕಾರ, ವಿ.ಎಸ್‌. ನಿಂಗರೆಡ್ಡಿ, ಶಿವಶರಣಪ್ಪ ತಡಲಗಿ, ಪ್ರಕಾಶ ಕುಲಂಗಿ, ಕುಮಾರ ಗಳತಗಿ, ಎಸ್‌.ಎನ್‌. ಬಾಗಲಕೋಟೆ, ವಿ.ಎಸ್‌. ಕಪಟಕರ, ಎಂ.ಎಚ್‌. ಜಮಾದಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.