ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ತರ


Team Udayavani, Sep 6, 2017, 2:58 PM IST

06-YAD-4.jpg

ಬಸವನಬಾಗೇವಾಡಿ: ಭಾರತದಲ್ಲಿ ಪ್ರಜಾಪ್ರಭುತ್ವ ಉಳಿಯಲು ಮತ್ತು ಭಾರತ ದೇಶ ಅಭಿವೃದ್ಧಿ ಪಥದತ್ತ ಸಾಗಲು ಶಿಕ್ಷಕರ ಪಾತ್ರ ಪ್ರಮುಖವಾಗಿದೆ
ಎಂದು ಕರ್ನಾಟಕ ನಗರ ನೀರು ಸರಬುರಾಜು ಮತ್ತು ಒಳಚರಂಡಿ ನಿಗಮ ಮಂಡಳಿ ಅಧ್ಯಕ್ಷ, ಶಾಸಕ ಶಿವಾನಂದ ಪಾಟೀಲ ಹೇಳಿದರು.

ಮಂಗಳವಾರ ಪಟ್ಟಣದ ವಿರಕ್ತಮಠದ ಶಿವಾನುಭವ ಮಂಟಪದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ಸಮಿತಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚಾರಣೆ ಹಾಗೂ ಗುರವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜ್ಞಾನವನ್ನು ಪ್ರತಿಯೊಬ್ಬರಿಗೂ ಧಾರೆ ಎರೆಯುವಲ್ಲಿ  ಗುರುವಿನ ಪಾತ್ರ ಪ್ರಮುಖವಾಗಿದೆ ಎಂದರು. ದೇಶದ ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಅದಕ್ಕೆ ಗುರುವಿನ ದೈವ ಇದ್ದಗಾ ಮಾತ್ರ ಸಾಧ್ಯ. ಆತ ತಾನು ಮಾಡಬೇಕೆಂಬ ಸಾಧನೆ ಮತ್ತು ಛಲವನ್ನು ಸಾಧಿಸಲು ಸಾಧ್ಯವಾಗುತ್ತದೆ. ಯಾವುದೇ ಕ್ಷೇತ್ರ ತೆಗೆದುಕೊಂಡರು ಕೂಡಾ ಶಿಕ್ಷಕರ ಮತ್ತು ವೈದ್ಯರ ನಿಸ್ವಾರ್ಥ ಸೇವೆ ಗಣನೀಯವಾಗಿದೆ. ಹೀಗಾಗಿ ಅವರನ್ನು ಪ್ರತಿಯೊಬ್ಬರು ಶಿಕ್ಷಕರನ್ನು ಪೂಜಿಸುತ್ತಾರೆ ಎಂದು ಹೇಳಿದರು.

ಉಪನ್ಯಾಸಕರಾಗಿ ಆಗಮಿಸಿದ್ದ ಶಿಕ್ಷಕಿ ಸುಮಂಗಲಾ ಕೊಳೂರ ಮಾತನಾಡಿ, ಪ್ರತಿಯೊಬ್ಬ ಮನುಷ್ಯ ತನ್ನ ಜೀವನದಲ್ಲಿ ಯಾವುದೇ ಸಾಧನೆ ಮಾಡಬೇಕಾದರೆ ಆ ವ್ಯಕ್ತಿಗೆ ಮುಂದೆ ಗುರಿ ಮತ್ತು ಹಿಂದೆ ಗುರು ಇರಬೇಕು. ಅಂದಾಗ ಮಾತ್ರ ಆ ವ್ಯಕ್ತಿ ಸಮಾಜದಲ್ಲಿ ಏನಾದರು ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು. ನಮ್ಮ ನಾಡಿನಲ್ಲಿ ನೆಹರು ಮತ್ತು ಡಾ| ರಾಧಾಕೃಷ್ಣನ್‌ ಸೇರಿದಂತೆ ಅನೇಕ ಮಹಾನ್‌ ನಾಯಕರು ಈ ದೇಶಕ್ಕೆ ತಮ್ಮದೆ ಕೊಡುಗೆ ನೀಡಿದ್ದಾರೆ. ಅಂತವರನ್ನು ನಾವು ನೆನಸಲೇಬೇಕು. ಆದರೆ ಅವರ ಜನ್ಮದಿನವನ್ನು  ಯಾವ ರೀತಿ ಆಚರಣೆ ಮಾಡಬೇಕು ಎಂದು ಆಲೋಚಿಸಿದಾಗ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚಾರಣೆಯಾಗಿ, ಡಾ| ರಾಧಾಕೃಷ್ಣನ್‌ ಅವರ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸುವ ಮೂಲಕ ಅವರ ಮಾರ್ಗದಲ್ಲಿ ನಡೆಯಬೇಕು ಎಂದರು. 

ವಿರಕ್ತಮಠದ ಸಿದ್ದಲಿಂಗ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಜಿಪಂ ಸದಸ್ಯ ಕಲ್ಲಪ್ಪ ಮಟ್ಟಿ, ತಾನಾಜಿ ನಾಗರಾಳ, ಶಿವಾನಂದ ಅವಟಿ, ಸಂಜೀವ ಕಲ್ಯಾಣಿ, ಕ್ಷೇತ್ರ ಸಮನ್ವಯ ಅಧಿಕಾರಿ ಮಲ್ಲಣ್ಣ ಎಸ್‌.ಎಚ್‌, ಆರ್‌.ಎಸ್‌. ತುಂಗಳ, ಪಿ.ಟಿ. ಗೌಡರ, ಎ.ಎಲ್‌. ಗಂಗೂರ, ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ, ಶಿವಾನಂದ ಮಂಗಾನವರ, ಶರಣಪ್ಪ ಮಾದರ, ಎಂ.ಬಿ. ತೋಟದ, ಆರ್‌.ಜಿ. ಅಳ್ಳಗಿ, ಸಿದ್ದು ಉಕ್ಕಲಿ ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭಯ್ಯ ಚಿಕ್ಕಮಠ ಸ್ವಾಗತಿಸಿದರು. ಶಿಕ್ಷಕ ಎಚ್‌.ಸಿ. ಬಾರಿಕಾಯಿ ನಿರೂಪಿಸಿದರು. ಶಿಕ್ಷಕಿ ಗಿರಿಜಾ ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.