ಶೀಘ್ರ ತೊಲಗಲಿದೆ ಕೋವಿಡ್


Team Udayavani, Oct 27, 2020, 4:15 PM IST

vp-tdy-2

ಬಸವನಬಾಗೇವಾಡಿ: ರಾಜ್ಯದ ಜನರು ಇನ್ನೂ ಆರು ತಿಂಗಳು ಕೋವಿಡ್ ದೊಂದಿಗೆ ಬದುಕು ಸಾಗಿಸಬೇಕಾದ ಅನಿವಾರ್ಯತೆಇದೆ. ದೇವಿ ಕೃಪೆಯಿಂದ ದೇಶವು ಶೀಘ್ರ ಕೋವಿಡ್ ಮುಕ್ತವಾಗಲಿದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು.

ಮುತ್ತಗಿ ಗ್ರಾಮದಲ್ಲಿ ದುರ್ಗಾದೇವಿ ನೂತನ ಮೂರ್ತಿ ಪ್ರತಿಷ್ಠಾನೆ ಹಾಗೂ ದೇವಸ್ಥಾನ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ಎರಡನೇ ಹಂತಕ್ಕೆ ಕಾಲಿಟ್ಟಿದ್ದು ಜನರು ಜಾಗೃತಿಯಿಂದ ಇರಬೇಕು ಎಂದರು. ರೈತರು ಮತ್ತು ಭೋವಿ (ವಡ್ಡರು) ಸಮಾಜದ ಜನರು ಶ್ರಮಿಕರು. ನಿತ್ಯ ಕಾಯಕ ದೊಂದಿಗೆ ತಮ್ಮ ಜೀವನ ಸಾಗಿಸುವಂತ ಜನರು. ಇತಿಹಾಸದಲ್ಲಿ ಭೋವಿ ಸಮಾಜದ ಕೊಡುಗೆ ಅಪಾರವಾಗಿದೆ. ಅನೇಕ ಮಠ ಮಂದಿಯಗಳನ್ನು ಮತ್ತು ಬೃಹತ್‌ ಕಟ್ಟಡ ಗಳನ್ನು ವಾಸ್ತು ಶಿಲ್ಪ ಮೂಲಕ ನಿರ್ಮಿಸುವಂತ ಕಲೆ ಹೊಂದಿದೆ ಎಂದು ಹೇಳಿದರು.

ದಸರಾ ಹಬ್ಬ ಹಾಗೂ ದೇವಿ ಪ್ರತಿಷ್ಠಾಪನೆ ಹೆಚ್ಚು ಆಚರಣೆ ಮಾಡುವುದು ಪಶ್ಚಿಮ ಬಂಗಾಳ ರಾಜ್ಯದಲ್ಲಿ. ಹೆಚ್ಚು ದೇವಿ ಪ್ರತಿಷ್ಠಾಪಿಸಿ ಅದ್ಧೂರಿಯಿಂದ ಹಬ್ಬವನ್ನು ಆಚರಣೆ ಮಾಡುತ್ತಾರೆ. ರಾಜ್ಯದಲ್ಲಿ ಕೂಡಾ ದೇವಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಆದರೆ ಈ ಬಾರಿ ಕೋವಿಡ್‌ನಿಂದ ಸರಳ ರೀತಿ ಆಚರಿಸುವಂತ ಸ್ಥಿತಿ ಬಂದಿದೆ ಎದರು. ಸಾನ್ನಿಧ್ಯ ವಹಿಸಿದ್ದ ಮನಗೂಳಿ ಹಿರೇಮಠದ ಸಂಗಬಸವ ಶಿವಚಾರ್ಯರು ಮಾತನಾಡಿ, ಪ್ರತಿಯೊಬ್ಬ ಮನುಷ್ಯನಿಗೆ ಸುಖ, ಶಾಂತಿ, ನೆಮ್ಮದಿ ದೇವಸ್ಥಾನಗಳ ಮೂಲಕ ಸಿಗುತ್ತದೆ ಎಂದರು.

ಜಾತಿ, ಧರ್ಮ, ಬೇಧ, ಭಾವ ಬಿಟ್ಟು ಮನುಷ್ಯ ಸಮಾಜದ ಸೇವೆಗಳನ್ನು ತೊಡಗಿಕೊಂಡಾಗ ಮಾತ್ರ ಅವರ ಹೆಸರು ಉಳಿಯಲು ಸಾಧ್ಯ. ಅನೇಕ ಮಠ, ಮಂದಿರಗಳನ್ನು ನಿರ್ಮಾಣ ಮಾಡುವ ಮೂಲಕ ಭೋವಿ ಸಮುದಾಯ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ ಎಂದರು.

ಆರ್‌.ಎಸ್‌. ಸೂಳಿಬಾವಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಒಕ್ಕೂಲೂತನ ಹುಟ್ಟುವಳಿ ಸಹಕಾರಿ ಸಂಘದ ಅಧ್ಯಕ್ಷ ಪ್ರೇಮು ಮ್ಯಾಗೇರಿ, ತಾಪಂ ಸದಸ್ಯ ಬಸವರಾಜ ಚಿಮ್ಮಲಗಿ, ಈರಣ್ಣ ಹಾರಿವಾಳ, ಸುರೇಶ ತಳವಾರ, ರಾಮು ಹೊಸಪೇಟಿ, ಶಿವಶಂಕರಗೌಡ ಪಾಟೀಲ, ಜಗದೇವ ಮನಹಳ್ಳಿ, ಶ್ರೀಶೈಲ ದೇವರಗಾವ, ಭೀಮಸಿ ಜಗ್ಗಲ, ಸೋಮಶೇಖರ ಹೊಸಹಳ್ಳಿ, ಚನ್ನಪ್ಪ ಸಿಡಿ, ಜಯನಾರಾಯಣ, ಡಿ.ಜಿ.ಎಂ ಮಂಜುನಾಥಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮಧುಸೂಧನ ಶಿಲ್ಪಿ ಸ್ವಾಗತಿಸಿದರು ವೈ.ಎ. ಗೊಲ್ಲರ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.