ಬಾವಡಿ ಪುನಶ್ಚೇತನ‌ಕ್ಕೆ ಟೆಂಡರ್‌ ಪ್ರಕ್ರಿಯೆ


Team Udayavani, Jul 17, 2018, 4:23 PM IST

vij-1.jpg

ವಿಜಯಪುರ: ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಜಲ ಸಂಪನ್ಮೂಲ ಇಲಾಖೆಯಿಂದ ಐತಿಹಾಸಿಕ ಜಲ ಸಂಗ್ರಹಗಳಾದ ಬಾವಡಿಗಳ ಪುನಶ್ಚೇತನಕ್ಕೆ ಕೈಗೊಂಡಿದ್ದ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ವಿಜಯಪುರ ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ಐತಿಹಾಸಿಕ 10 ಬಾವಡಿಗಳ ಪುನಶ್ಚೇತನಕ್ಕೆ ಟೆಂಡರ್‌ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಮಾಜಿ ಸಚಿವರಾದ ಬಬಲೇಶ್ವರ ಶಾಸಕ ಡಾ| ಎಂ.ಬಿ. ಪಾಟೀಲ ಹೇಳಿದರು.

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ತಿಷಯ ತಿಳಿಸಿದ ಅವರು, ನಗರದಲ್ಲಿ ಈಗಾಗಲೇ ತಾಜ್‌ಬಾವಡಿ, ಇಬ್ರಾಹಿಂಪುರ ಬಾವಡಿ ಪುನಶ್ಚೇತನ ಆರಂಭಗೊಳಿಸಿ ಕುಡಿಯುವ ಬಳಕೆಗಾಗಿ ಜಲ ಶುದ್ಧೀಕರಣ ಘಟಕಗಳನ್ನೂ ಅಳವಡಿಸಲಾಗಿದೆ. ಈ ಯಶಸ್ಸಿನ ನಂತರ ನಾನು ಸಚಿವನಾಗಿದ್ದ ಜಲ ಸಂಪನ್ಮೂಲ ಇಲಾಖೆಯಿಂದ ಜಿಲ್ಲೆಯ 10 ಬಾವಡಿಗಳ ಪುನಶ್ಚೇತನಕ್ಕೆ ಮುಂದಾಗಿದ್ದು ಈಗ
ಟೆಂಡರ್‌ ಕರೆಯಲಾಗುತ್ತಿದೆ ಎಂದರು. 

ಇದರಲ್ಲಿ ನಗರದಲ್ಲಿರುವ ಐದು ಬಾವಡಿಗಳ ಪುನಶ್ಚೇತನಕ್ಕೆ ಜೋಡುಗುಮ್ಮಡ ಬಾವಡಿ 23.75 ಲಕ್ಷ ರೂ., ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿರುವ ಬಾವಡಿ 31 ಲಕ್ಷ ರೂ., ಸೈನಿಕ ಶಾಲೆ ಬಾವಡಿ 24 ಲಕ್ಷ ರೂ., ಹಾಸಿಂಪೀರ್‌ ದರ್ಗಾ ಬಳಿ ಇರುವ ಬಾವಡಿ 32 ಲಕ್ಷ ರೂ. ಹಾಗೂ 2 ಎಕರೆ ವಿಸ್ತಾರದಲ್ಲಿರುವ ಬಡಿ ಬಾವಡಿ ಪುನಶ್ಚೇತನಕ್ಕೆ 1.98 ಕೋಟಿ ರೂ. ಸೇರಿದಂತೆ
ಎಲ್ಲ ಕಾಮಗಾರಿಗಳಿಗೆ ಟೆಂಡರ್‌ ಕರೆಯಲಾಗಿದೆ ಎಂದರು.

ಇದಲ್ಲದೇ ಜಿಲ್ಲೆ ಗ್ರಾಮೀಣ ಪ್ರದೇಶದಲ್ಲಿರುವ ದೇವರಹಿಪ್ಪರಗಿ ಪಾತರಗಿತ್ತಿ ಬಾವಡಿ 32 ಲಕ್ಷ ರೂ., ಆಲಮೇಲದ ಅಕ್ಕ ತಂಗಿಯರ ಬಾವಡಿ, 61 ಲಕ್ಷ ರೂ. ಮನಗೂಳಿ ಗ್ರಾಮದಲ್ಲಿರುವ ಬಾವಡಿ 42 ಲಕ್ಷ ರೂ., ಬಸವನಬಾಗೇವಾಡಿಯ ಬಸವರ್ಣಣ ಬಾವಿ 45 ಲಕ್ಷ ರೂ. ಹಾಗೂ ಮುತ್ತಗಿ ಗ್ರಾಮದಲ್ಲಿರುವ ಬಾವಡಿ 65 ಲಕ್ಷ ರೂ. ಸೇರಿದಂತೆ ಈ ಎಲ್ಲ 10 ಬಾವಡಿಗಳ ಪುನಶ್ಚೇತನಕ್ಕೆ 5.57 ಕೋಟಿ ರೂ. ಟೆಂಡರ್‌ ಕರೆಯಲಾಗುತ್ತಿದೆ. ಈ ಎಲ್ಲ ಬಾವಡಿಗಳ ನೀರು ಸದ್ಬಳಕೆ ಮಾಡಿಕೊಳ್ಳಲು ಶುದ್ಧೀಕರಣ ಘಟಕಗಳನ್ನೂ ಅಳವಡಿಸಲಾಗುತ್ತಿದೆ. ಬರುವ ವರ್ಷ ಜಿಲ್ಲೆಯ ಇನ್ನೂ 10 ಬಾವಡಿಗಳ ಪುನಶ್ಚೇತನ ಕಾರ್ಯಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ವಿವರಿಸಿದರು.

ಇದಲ್ಲದೇ ವಿಶೇಷ ಘಟಕ ಯೋಜನೆಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಭಾಷಣ ಮಾಡಿರುವ ನಗರಲ್ಲಿರುವ ಜಿಲ್ಲಾ ಕ್ರೀಡಾಂಗಣಕ್ಕೆ ಅವರ ಹೆಸರನ್ನೇ ಇಡಲಾಗಿದ್ದು, ಇದೀಗ ಈ ಕ್ರೀಡಾಂಗಣವನ್ನು ರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ಮಾಡಲು ಯೋಜನೆ ರೂಪಿಸಲಾಗಿತ್ತು. ಇದರ ಭಾಗವಾಗಿ 400 ಮೀ. ಸಿಂಥೆಟಿಕ್‌ ಟ್ರಾಫಿಕ್‌ ನಿರ್ಮಾಣ, ಈಜುಕೊಳ ನಿರ್ಮಾಣ, ಒಳಾಂಗಣ ಕ್ರೀಡಾಂಣಗ, ವಾಲಿಬಾಲ್‌ ಅಂಕಣ ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆ ಉಲಾಖೆ ಸಿದ್ಧಪಡಿಸಿದೆ. ಸದರಿ ಯೋಜನೆಗಳಲ್ಲಿ ಈಜುಗೊಳ ನಿರ್ಮಾಣ ಯೋಜನೆಯೂ ಸೇರಿದ್ದು, ಸ್ಥಳಾಭವದಿಂದಾಗಿ ಬೇರೆ ಕಡೆ ನಿರ್ಮಿಸಿದರೂ ಡಾ| ಅಂಬೇಡ್ಕರ್‌ ಹೆಸರು ಇರಿಸಲಾಗುತ್ತದೆ ಎಂದರು. 

ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮಂಗಾರು ಕ್ಷೀಣಿಸಿದೆ. ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಆಗುತ್ತಿರುವ ಕಾರಣ ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದು ಆಲಮಟ್ಟಿಯ ಶಾಸ್ತ್ರಿ ಜಲಾಶಯ ಸೇರಿದಂತೆ ಎಲ್ಲ ಜಲಾಶಯಗಳು ಭರ್ತಿಯಾಗುತ್ತಿವೆ. ಹೀಗಾಗಿ ನಾಲೆಗಳಿಗೆ ಹಾಗೂ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಗೆ ಜಲಾಶಯಗಳ ನೀರು ಬಿಡುವಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ, ಜಲಾಶಯದ ನೀರು ನಿರ್ವಹಣಾ ಮಂಡಳಿ ಅಧ್ಯಕ್ಷರಾಗಿರುವ ಜಿಲ್ಲೆಯ ಸಚಿವ ಶಿವಾನಂದ ಪಾಟೀಲ, ಸಚಿವ ಎಂ.ಸಿ. ಮನಗೂಳಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದೇನೆ ಎಂದು ವಿವರಿಸಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.