ಪಠ್ಯಪೂರಕ ಚಟುವಟಿಕೆ ಅಗತ್ಯ


Team Udayavani, Dec 26, 2021, 3:47 PM IST

24book

ಸಿಂದಗಿ: ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಪಠ್ಯದಷ್ಟೇ ಪಠ್ಯಪೂರಕ ಚಟುವಟಿಕೆಗಳು ಅಷ್ಟೇ ಪ್ರಮುಖ ಪಾತ್ರ ನಿರ್ವಹಿಸುತ್ತವೆ ಎಂದು ತಾಲೂಕಿನ ಮಲಘಾಣ ಗ್ರಾಮದ ಶರಣಬಸವೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿವೇಕಾನಂದ ಪಾಟೀಲ ಹೇಳಿದರು.

ಪಟ್ಟಣದ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಬಿಎಸ್‌ಡಬ್ಲ್ಯು, ಬಿಕಾಂ ಮತ್ತು ಬಿಎ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ 2021-22ನೇ ಸಾಲಿನ ವಿದ್ಯಾರ್ಥಿಗಳ ಒಕ್ಕೂಟ ಉದ್ಘಾಟಿಸಿ ಪಠ್ಯಪೂರಕ ಚಟುವಟಿಕೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸಕ್ರಿಯವಾಗಿ ಪಠ್ಯಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಭಾಗವಹಿಸುವಿಕೆಯಿಂದ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಬೆಳವಣಿಗೆಯಾಗುವ ಜೊತೆಗೆ ನಾಯಕತ್ವ ಗುಣ ಬೆಳವಣಿಗೆಯಾಗುತ್ತದೆ. ಪ್ರತಿಭೆ ಅನಾವರಣಗೊಳಿಸಲು ಒಂದು ಮುಖ್ಯ ವೇದಿಕೆಯಾಗುತ್ತದೆ. ಈ ವೇದಿಕೆ ಮೇಲೆ ನಿಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಆಡಳಿತಾಧಿಕಾರಿ ಡಾ| ಬಿ.ಜಿ. ಮಠ ಮಾತನಾಡಿ, ಪಠ್ಯಪೂರಕ ಚಟುವಟಿಕೆಗಳಿಂದ ಜ್ಞಾನ ಮತ್ತು ವಿಜ್ಞಾನ ಎರಡು ದೊರೆಯುತ್ತವೆ. ಹೊಸ ಪಠ್ಯಕ್ರಮವೂ ನಮಗೆ ದಾರಿ ದೀಪವಾಗಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ. 2021-22ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ವಿಭಾಗಗಳಲ್ಲಿ ಪದಾಧಿಕಾರಿಗಳ ಪಾತ್ರ ವಿದ್ಯಾರ್ಥಿಗಳ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಸಾರಂಗಮಠ-ಗಚ್ಚಿನಮಠದ ಡಾ| ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ಶ್ರದ್ಧೆ, ಪ್ರಾಮಾಣಿಕತೆಯಿಂದ ಅಧ್ಯಯನ ಮಾಡುವ ಮೂಲಕ ವಿದ್ಯಾಲಯಕ್ಕೆ ಕೀರ್ತಿ ತರುವಂತ ಕೆಲಸ ವಿದ್ಯಾರ್ಥಿಗಳು ಮಾಡಬೇಕು. ವಚನ, ಮೌಲ್ಯಾಧಾರಿತ ಸಾಹಿತ್ಯ ಅಧ್ಯಯನ ಹವ್ಯಾಸ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವ ಪಠ್ಯಪೂರಕ ಚಟುವಟಿಕೆ ಆಯೋಜಿಸಬೇಕು ಎಂದು ಹೇಳಿದರು.

ಡಾ| ಚನ್ನಪ್ಪ ಕಟ್ಟಿ, ಡಾ| ಎಂ.ಎಂ. ಪಡಶೆಟ್ಟಿ, ಎಂ.ಎಸ್‌. ಹೈಯ್ನಾಳಕರ, ಡಾ| ಶರಣಬಸವ ಜೋಗೂರ, ಅಂಗವಿಕಲರ ಐಕ್ಯತಾ ವೇದಿಕೆ ಅಧ್ಯಕ್ಷೆ ಸಬಿಯಾ ಮರ್ತೂರ, ಮಹಾಂತೇಶ ನೂಲಾನವರ, ಉಮೇಶ ಪೂಜೇರಿ, ಗದಿಗೆಯ್ಯ ನಂದಿಮಠ, ಅನಿಲಕುಮಾರ ರಜಪೂತ, ಸರಸ್ವತಿ ಪಟೇದ, ಭಾಗ್ಯಶ್ರೀ ನಂದಿಮಠ, ಪ್ರಭಾವತಿ ಮಾಲಿಪಾಟೀಲ, ಶೃತಿ ಹೂಗಾರ, ಮುರ್ತುಬಿಬೇಗಂ ಬಿರಾದಾರ, ಲಕ್ಷ್ಮೀ ಕೆಸರಗೊಪ್ಪ, ಚೈತ್ರಾ ನಿರಂಬಳ್ಳಿ, ಪ್ರಿಯಾಂಕಾ ಬ್ಯಾಕೋಡ, ಮಂಗಳಾ ಈಳಗೇರ, ದಾನಮ್ಮ ಜೋಗೂರ, ಮಮತಾ ಹರನಾಳ, ನಾಗಯ್ಯ ಹಿರೇಮಠ ಮತ್ತು ಮುದ್ದು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಇದ್ದರು.

ಇದೇ ಸಂದರ್ಭದಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ರ್‍ಯಾಂಕ್‌ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು. ವಿದ್ಯಾ ರುಕುಂಪುರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರಾಚಾರ್ಯ ಎಸ್‌.ಎಂ. ಪೂಜಾರಿ ಸ್ವಾಗತಿಸಿದರು. ವಿದ್ಯಾ ಕಡಲಗೊಂಡ ಹಾಗೂ ಪವಿತ್ರಾ ದಿಗಸಂಗ ನಿರೂಪಿಸಿದರು. ನಜ್ಮಾ ಮಣೂರ ವಂದಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.