ಬಸವ ನಗರ ಬಡಾವಣೆ ಸೀಲ್ಡೌನ್
Team Udayavani, Jul 6, 2020, 3:50 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಾಳಿಕೋಟೆ: ತಾಲೂಕಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ ಪಟ್ಟಣದ ಬಸವ ನಗರ ಬಡಾವಣೆ ಒಬ್ಬನಿಗೆ ಸೋಂಕು ದೃಢಪಟ್ಟಿದೆ. ಹೀಗಾಗಿ ಈ ಪ್ರದೇಶವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದ್ದು, ಬಸವ ನಗರ ಬಡಾವಣೆ ಪ್ರದೇಶದ 100 ಮೀ. ವರೆಗೆ ಕಂಟೇನ್ಮೆಟ್ ಝೋನ್ ಎಂದು ತಾಲೂಕಾಡಳಿತ ಘೋಷಿಸಿದೆ.
ಸುತ್ತಲಿನ ರಸ್ತೆಗಳಿಗೆ ಪೊಲೀಸ್ ಇಲಾಖೆ ಬ್ಯಾರಿಕೇಡ್ ಹಾಗೂ ಪುರಸಭೆ ಸಿಬ್ಬಂದಿ ಮುಳ್ಳುಕಂಠಿ ಕಟ್ಟಿ ಆ ಪ್ರದೇಶದೊಳಗೆ ಯಾರೂ ಹೋಗದಂತೆ ಮತ್ತು ಅಲ್ಲಿಂದ ಯಾರೂ ಹೊರಬರದಂತೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.
ಇಲ್ಲಿನ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಗಾಗಿ ಕ್ರಮ ಕೈಗೊಳ್ಳಲಾಗಿದ್ದು, ಕಾಯಿಪಲ್ಲೆ, ಹಾಲು, ಕಿರಾಣಿ, ಕುಡಿಯುವ ನೀರು ಒಳಗೊಂಡು ಅಗತ್ಯ ವಸ್ತುಗಳು ಅಲ್ಲಿಯೇ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಸಿಲ್ಡೌನ್ ಪ್ರದೇಶದೊಳಗಿನ ಜನರಿಗೆ ಥರ್ಮಲ್ ಸ್ಕ್ರೀನಿಂಗ್, ಸೋಂಕಿನ ಲಕ್ಷಣಗಳ ಕುರಿತು ಆರೋಗ್ಯ ತಪಾಸಣೆ ಕಾರ್ಯದಲ್ಲಿ ತೊಡಗಿದ್ದಾರೆ. ಸೋಂಕಿತರಿಂದ ಪ್ರಾಥಮಿಕ ಸಂಪರ್ಕ ಹೊಂದಿದ ಸಂಬಂಧಿಕರೊಳಗೊಂಡು 4 ಜನರನ್ನು ಸಾಂಸ್ಥಿಕ ಕ್ವಾರಂಟೈನ್ಗೆ ತಾಲೂಕಾಡಳಿತ ಒಳಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…