ದಿನಸಿ ಕಿಟ್ಗಳ ವಿತರಣೆಗೆ ಚಾಲನೆ
ಕೋವಿಡ್ ಹತ್ತಿಕ್ಕಲು ಮನೆಯಲ್ಲಿರುವುದೇ ಮದ್ದು: ನಡಹಳಿ
Team Udayavani, Apr 24, 2020, 3:38 PM IST
ನಾಲತವಾಡ: ಆಶಾ ಕಾರ್ಯಕರ್ತೆಯರಿಗೆ, ಪೊಲೀಸ್ ಸಿಬ್ಬಂದಿಗಳಿಗೆ, ಪೌರ ಕಾರ್ಮಿಕರಿಗೆ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಆಹಾರ ಕಿಟ್ ವಿತರಿಸಿದರು.
ತಾಳಿಕೋಟೆ: ಕೋವಿಡ್ ಮಟ್ಟಹಾಕಲು ಎಲ್ಲರೂ ಮನೆಯಲ್ಲಿಯೇ ಇರುವುದು ಅಗತ್ಯವಾಗಿದೆ ಎಂದು ಶಾಸಕ ಎ.ಎಸ್. ಪಾಟೀಲ (ನಡಹಳ್ಳಿ) ಹೇಳಿದರು. ಗುರುವಾರ ಪಟ್ಟಣದ ವಾರ್ಡ್ ನಂ. 1 ಮತ್ತು 2ರ ಆಶ್ರಯ ಬಡಾವಣೆಯಲ್ಲಿ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, 20 ಸಾವಿರ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಗುತ್ತದೆ. ಎಲ್ಲ ಬಡವರಿಗೆ ಕಿಟ್ ಮುಟ್ಟಿಸುವ ಕಾರ್ಯವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದರು.
ಕೋವಿಡ್ ತಡೆಗಟ್ಟುವ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿ, ಪೌರಕಾಮಿರಕರ ಕಾರ್ಯ ಶ್ಲಾಘನೀಯ. ಲಾಕ್ಡೌನ್ ಮುಗಿಯುವವರೆಗೂ ಬಡವರ ಹೊಟ್ಟೆ ತುಂಬಿಸುವ ಜವಾಬ್ದಾರಿ ನನ್ನದು ಎಂದರು.
ಮಹಾದೇವಿ ಪಾಟೀಲ (ನಡಹಳ್ಳಿ), ಶಾಂತಗೌಡ ಪಾಟೀಲ, ವಾಸುದೇವ ಹೆಬಸೂರ, ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಸಂಗಮೇಶ ಇಂಗಳಗಿ, ಜಯಸಿಂಗ್ ಮೂಲಿಮನಿ, ಮುದಕಣ್ಣ ಬಡಿಗೇರ, ಬಸನಗೌಡ ವಣಕ್ಯಾಳ, ಎಚ್.ಎಸ್. ಪಾಟೀಲ, ಪ್ರಕಾಶ ಹಜೇರಿ, ಕಾಶೀನಾಥ ಮುರಾಳ, ಮುತ್ತಪ್ಪ ಚಮಲಾಪುರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ