ಭಯೋತ್ಪಾದನೆ ಮಟ್ಟ ಹಾಕಲು ಕೇಂದ್ರ ಮುಂದಾಗಲಿ


Team Udayavani, Feb 17, 2019, 9:45 AM IST

vij-1.jpg

ವಿಜಯಪುರ: ದೇಶದ ಕಣಿವೆ ರಾಜ್ಯಗಳಲ್ಲಿ ಭಯೋತ್ಪಾದನೆ ಚಟುವಟಿಕೆಗೆ ಸಂಪೂರ್ಣ ಮಟ್ಟ ಹಾಕಲು ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಉಗ್ರಗಾಮಿಗಳ ಮಟ್ಟ ಹಾಕಲು ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಸಂಪೂರ್ಣ ಬೆಂಬಲ ಕೊಡುತ್ತೇವೆ ಎಂದು ಮುಸ್ಲಿಂ ಧರ್ಮಗುರು,
ಮುತ್ತಹೀದಾ ಕೌನ್ಸಿಲ್‌ ಅಧ್ಯಕ್ಷ ಹಜರತ್‌ ಸೈಯ್ಯದ್‌ತನ್ವೀರ್‌ ಪೀರಾ ಹಾಶ್ಮಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಸೈನಿಕರ ಮೇಲೆ ದಾಳಿ ನಡೆಸುವ ಕೃತ್ಯ ಹೇಡಿತನದ್ದು. ಉಗ್ರಗಾಮಿಗಳಿಗೂ ಹಾಗೂ ಇಸ್ಲಾಂಗೂ ಯಾವುದೇ ಸಂಬಂಧವಿಲ್ಲ. ಕಾಶ್ಮೀರದ ಪುಲ್ವಾಮಾದಲ್ಲಿ ವೀರಯೋಧರ ಪ್ರಾಣ ಕಸಿದವರು ಮನುಷ್ಯರೇ ಅಲ್ಲ. ಭಯೋತ್ಪಾದನೆಯೇ ಅವರ ಧರ್ಮ, ಭಯೋತ್ಪಾದಕರ ಹೆಸರು ಮುಸಲ್ಮಾನರಾಗಿರಬಹುದು. ಇಂತಹ ಕೃತ್ಯ ಎಸಗುವವರು ಮುಸಲ್ಮಾನರೇ ಅಲ್ಲ. ಅವರು ಮನುಷ್ಯರೇ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ವೀರಯೋಧರ ಪ್ರಾಣ ಕಳೆದುಕೊಂಡಿದ್ದೇವೆ. ಇದಕ್ಕೆ ಕೇಂದ್ರ ಸರ್ಕಾರ ಸೂಕ್ತ ಪ್ರತ್ಯುತ್ತರ ನೀಡಬೇಕು. ಪ್ರವಾದಿ ಹಜರತ್‌ ಮೊಹ್ಮದ್‌ ಪೈಗಂಬರ್‌ ಅವರು, ಒಬ್ಬ ಅಮಾಯಕ ಮನುಷ್ಯನನ್ನು ಕೊಂದರೆ ಅದು ಇಡಿ ಮಾನವ ಕುಲವನ್ನೇ ಕೊಂದಂತೆ ಎಂದು ಹೇಳಿದ್ದಾರೆ. ಉಗ್ರಗಾಮಿಗಳಿಗೆ ಯಾವುದೇ ಧರ್ಮವಿಲ್ಲ. ಭಯ ಹುಟ್ಟಿಸುವುದು ಮಾತ್ರ ಅವರ ಧರ್ಮ ಎಂದರು.

ಭಯೋತ್ಪಾದಕರ ಇಂತಹ ಕೃತ್ಯಗಳಿಂದ ದೇಶದಲ್ಲಿ ಭಯದ ವಾತಾವರಣ ಮೂಡಿಸಿವೆ. ಈ ರೀತಿಯ ಘಟನೆಗಳು ದೇಶದ ಏಕತೆ ಒಡೆಯುವ ಷಡ್ಯಂತ್ರವಾಗಿವೆ. ಆದರೆ ದೇಶದ ಏಕತೆಯನ್ನು ಯಾವ ಭಯೋತ್ಪಾದಕನೂ ಒಡೆಯಲು ಸಾಧ್ಯವಿಲ್ಲ ಎಂದರು.

ಅಹಿಂದ ಮುಖಂಡ ಎಸ್‌.ಎಂ. ಪಾಟೀಲ (ಗಣಿಹಾರ) ಮಾತನಾಡಿ, ದೇಶದಲ್ಲಿ ನಿರಂತರ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯಗಳನ್ನು ಸಂಪೂರ್ಣ ಮಟ್ಟ ಹಾಕಬೇಕಿದೆ. ಅಂತಹ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವವರ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ
ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮುಸಲ್ಮಾನರು ದೇಶಭಕ್ತಿ ಪ್ರದರ್ಶಿಸಬೇಕಾದ ಅವಶ್ಯಕತೆ ಇಲ್ಲ. ಇದು ನಮ್ಮ ಮಾತೃಭೂಮಿ. ನಾವು ಇಲ್ಲಿಯೇ ಜನ್ಮತಾಳಿ ಜೀವನ ನಡೆಸುತ್ತಿದ್ದೇವೆ. ಭಾರತದ ಮುಸ್ಲಿಂರೆಲ್ಲರೂ ದೇಶಭಕ್ತರು. ಈ ಮಾತೃಭೂಮಿ ಬಗ್ಗೆ ಗೌರವ ಹೊಂದಿದ್ದಾರೆ.
ಆದರೆ ಹೃದಯ, ಧರ್ಮವಿಲ್ಲದ ಪಾಪಿ ಭಯೋತ್ಪಾದಕರು ಇಸ್ಲಾಂ ಹೆಸರನ್ನು ದುರ್ಬಳಕೆ ಮಾಡಿಕೊಂಡು, ಧರ್ಮಕ್ಕೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದರು.

ಹಿರಿಯ ಮುಖಂಡ ಅಬ್ದುಲ್‌ಹಮೀದ್‌ ಮುಶ್ರೀಫ್‌, ವಿವಿಧ ಪ್ರಗತಿ ಸಂಘಟನೆಗಳ ಪ್ರಮುಖರಾದ ಎಂ.ಸಿ. ಮುಲ್ಲಾ, ನ್ಯಾಯವಾದಿ ಬಷೀರುಜ್ಜಮಾ ಲಾಹೋರಿ, ಅಸ್ಲಂ ಮುಜಾವರ, ಮೊಹ್ಮದ್‌ಯೂಸೂಫ್‌ ಖಾಜಿ, ಅಬ್ದುಲ್‌ರಹಿಮಾನ ನಾಸರ ಇದ್ದರು.

ಟಾಪ್ ನ್ಯೂಸ್

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.