ಮಳಿ-ಬೆಳಿ ಕೈ ಕೊಟ್ಟೈತಿ-ಸಾಲ ತೀರ್ಸೋದು ಹೆಂಗಂತ


Team Udayavani, Aug 24, 2018, 3:29 PM IST

vij-1.jpg

ವಿಜಯಪುರ: ಮುಂದೋಡಿ ಮಳೆ ಆತಂತ ಸಾಲಸೂಲ ಮಾಡಿ ಬಿತ್ತಿದ ಕಾಳು ಮೇಲೆದ್ದ ಮ್ಯಾಲ ಮತ್ತೆ ಮಳಿ ಸುರಿಲಾರ ಬೆಳಿ ಒಣಗೇತಿ. ಸರ್ಕಾರ ಸಾಲ ಮನ್ನಾ ಮಾಡಿನಂತಿದ್ರೂ ತೀರಿಲ್ಲ. ಮುಂದೆ ಹೆಂಗ ಜೀವನ ಅನ್ನೋದೇ ಚಿಂತ್ಯಾಗೇತಿ. ಬರ್ತೀರಿ, ಹೊಕ್ಕೀರಿ ಅನ್ನಂಗಾಗ ಸರ್ಕಾರ ರೈತರ ನೆರವಿಗೆ ಬರಬೇಕು. 

ಇದು ವಿಜಯಪುರ ಜಿಲ್ಲೆಯಲ್ಲಿ ಮಳೆ ಇಲ್ಲದೇ ಬರ ಆವರಿಸಿ ಬೆಳೆ ಕಳೆದುಕೊಂಡು ಕಂಗಾಲಾಗಿರುವ ರೈತರ ಗೋಳಿನ ಮಾತು. ಗುರುವಾರ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಜಿಲ್ಲೆಯ ಬರ ಅಧ್ಯಯನಕ್ಕಾಗಿ ಹೊನಗನಹಳ್ಳಿ ರೈತ ಶಿವನಗೌಡ ಶಂಕರಗೌಡ ಬಿರಾದಾರ ಅವರ ಜಮೀನಿನಲ್ಲಿ ಬೆಳೆ ಹಾನಿ ಪರಿಶೀಲನೆ ವೇಳೆ ಸ್ಥಳದಲ್ಲಿದ್ದ ರೈತರು ತಮ್ಮ ಗೋಳು ಹೇಳಿಕೊಂಡರು.

ಮುಂಗಾರು ಹಂಗಾಮಿನ ಆರಂಭದಲ್ಲಿ ಉತ್ತಮ ಮಳೆ ಆಗಿತ್ತೆಂದು ಹತ್ತಾರು ಸಾವಿರ ರೂ. ಸಾಲ ಮಾಡಿ ಬಿತ್ತನೆ ಮಾಡಿದೆವು, ಕಸ, ಕಳೆ ತೆಗೆಸಿ, ಗೊಬ್ಬರ ಹಾಕಿದೆವು. ಆದರೆ ಬಿತ್ತನೆ ಬಳಿಕ ಮಳೆ ಇಲ್ಲದೇ ಒಣಗಿನಿಂತ ತೊಗರಿ ಬೆಳೆ, ಮಳೆ ನಿರೀಕ್ಷೆಯಲ್ಲಿ ಬಿತ್ತಿದ್ದರೂ ಮೊಳಕೆ ಒಡೆಯದ ಬೆಳೆ ಹಾನಿಯಾಗಿದೆ. ಒಂದೆಡೆ ಮುಂಗಾರು ಬಿತ್ತನೆಗೆ ತೊಡಗಿಸಿ ಬಂಡವಾಳ ಕೈ ಬಿಡುತ್ತಿದೆ. ಮತ್ತೂಂದೆಡೆ ಹಿಂಗಾರು ಹಂಗಾಮಿಗೆ ಬಿತ್ತನೆಗೆ ಬೀಜ-ಗೊಬ್ಬರಕ್ಕೆ ಹಣ ಹೊಂದಿಸಿಕೊಳ್ಳಬೇಕು ಎಂದು ರೈತರು ಅವಲತ್ತುಕೊಂಡರು.

ಸರ್ಕಾರ ಬರ ಸಂದರ್ಭದಲ್ಲಿ ರೈತರ ನೆರವಿಗೆ ಜಾರಿಗೆ ತಂದಿರುವ ಬೆಳೆ ವಿಮೆ ಮಾಡಿಸಿದಲ್ಲಿ ಪರಿಹಾರ ದೊರೆಯುತ್ತದೆ. ನೀವೇಕೆ ಇದರ ಸೌಲಭ್ಯ ಪಡೆಯಲು ವಿಮೆ ಹಣ ಪಾವತಿಸುವುದಿಲ್ಲ ಎಂದಾಗ ರೈತರು ಎರಡು ವರ್ಷಗಳ ಹಿಂದೆ ಕಟ್ಟಿದ ಬೆಳೆ ವಿಮೆ ಹಣವೇ ಇನ್ನೂ ಪಾವತಿ ಆಗಿಲ್ಲ. ಕೊನೆ ಕ್ಷಣದಲ್ಲಿ ವಿಮೆ ಕಟ್ಟಿ ಅಂತಾರೆ, ಬ್ಯಾಂಕಿಗೆ ಹೋದ್ರೆ ವಿಮೆ ಕಟ್ಟದಷ್ಟು ದಟ್ಟಣೆ ಇರುತ್ತವೆ. ಬೆಳೆ ವಿಮೆ
ಹಂತದಲ್ಲಿ ಹೆಚ್ಚಿನ ಕೌಂಟರ್‌ ತೆರೆದು, ರೈತರ ಅನುಕೂಲ ಮಾಡಿಕೊಡುವುದಿಲ್ಲ. ಇಂಥ ಸ್ಥಿತಿಯಲ್ಲಿ ರೈತರು ಬೆಳೆ ವಿಮೆಯನ್ನು ನಂಬಿದರೆ ರೈತರು ಕೃಷಿ ಮಾಡಲು ಸಾಧ್ಯವಿಲ್ಲ . ಇತರೆ ರೈತರಂತೂ ಪ್ರತಿ ಎಕರೆಗೆ ಈಗಾಲೇ ಸುಮಾರು 30 ಸಾವಿರಕ್ಕಿಂತ ಹೆಚ್ಚಿನ ಖರ್ಚು ಮಾಡಿದ್ದು, ಬೆಳೆ ಹಾನಿ ಆಗಿರುವ ಕಾರಣ ಲಕ್ಷಾಂತರ ಸಾಲ ತಲೆ ಮೇಲೆ ಬಂದಿದೆ. ಇದೀಗ ಮತ್ತೆ ಹಿಂಗಾರಿಗೆ ಬಿತ್ತನೆ ಮಾಡಲು ಜಮೀನು ಹದ ಮಾಡಬೇಕು, ಬೀಜ-ಗೊಬ್ಬರ ಖರೀದಿಗೆ ಮುಂದಾಗಬೇಕು.
 
ಹಣ ಹೊಂದಿಸುವ ಬಗೆ ತಿಳಿಯುತ್ತಿಲ್ಲ ಎಂದು ಶಿವನಗೌಡ ಬಿರಾದಾರ ಕಂಗಾಲಾಗಿದ್ದರು. ಸಾಲ ಕೊಡುವವರಾದರೂ ಎಷ್ಟು ಅಂತ ಕೊಡುತ್ತಾರೆ ನೀವೇ ಹೇಳಿ, ನಾವಾದರೂ ಹತ್ತಾರು ವರ್ಷ ನಿರಂತರ ಸಾಲ ಮಾಡಿ ಬಿತ್ತನೆ ಮಾಡಿ ಕೈಸುಟ್ಟುಕೊಳ್ಳುತ್ತಿದ್ದರೆ ನಮ್ಮ ಕುಟುಂಬಗಳು ಬದುಕು ಕಟ್ಟಿಕೊಳ್ಳುವುದಾದರೂ ಹೇಗೆ ಎಂದು ತಿಪ್ಪಣ್ಣ ತುಪ್ಪದ ಸಚಿವ ದೇಶಪಾಂಡೆ ಎದುರು ಗೋಳಿಟ್ಟರು.

ಕೇವಲ ಅಧ್ಯಯನ, ವರದಿ ಅಂತೆಲ್ಲ ಕಾಲ ಕಳೆಯದೇ ಸರ್ಕಾರ ತಕ್ಷಣ ರೈತರ ನೆರವಿಗೆ ಬರಬೇಕು. ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡಿ, ಕೂಡಲೇ ಋಣಮುಕ್ತರಾಗಿ ಮಾಡಿ, ಹಿಂಗಾರು ಬಿತ್ತನೆಗೆ ಉಚಿತ ಬೀಜ-ಗೊಬ್ಬರ ಪೂರೈಕೆಗೆ ಮುಂದಾಗಬೇಕು ಎಂದು ಮಹಾದೇವಪ್ಪ ಕೆಂಗನಾಳ ಆಗ್ರಹಿಸಿದರು. 

ರೈತರ ಗೋಳು ಆಲಿಸಿದ  ಬಳಿಕ ಪ್ರತಿಕ್ರಿಯಿಸಿದ ಸಚಿವ ಆರ್‌.ವಿ.ದೇಶಪಾಂಡೆ ರೈತರು ದೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಸಂಕಷ್ಟಕ್ಕೆ ಸ್ಪಂದಿಸಲಿದೆ. ಸರ್ಕಾರ ರೈತರ ಸಂಕಷ್ಟಕ್ಕೆ ತ್ವರಿತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ದೇಶಪಾಂ ಡೆ ರೈತರಿಗೆ ಭರವಸೆ ನೀಡಿದರು. ಆಗಸ್ಟ್‌ 31ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಬರ ಘೋಷಣೆ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಜಿ.ಎಸ್‌.ಕಮತರ

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.