ಶಾಲೆಯ ಮೇಲ್ಛಾವಣಿ ಕುಸಿತ: ಪವಾಡ ಸದೃಶ ರೀತಿಯಲ್ಲಿ ಪಾರಾದ ಮಕ್ಕಳು
Team Udayavani, May 26, 2022, 1:17 PM IST
ಮುದ್ದೇಬಿಹಾಳ: ಪಟ್ಟಣದ ನಾಲತವಾಡ ರಸ್ತೆ ಪಕ್ಕದ ಮಹಿಬೂಬ ನಗರದಲ್ಲಿರುವ ಸರ್ಕಾರಿ ಉರ್ದು ಮತ್ತು ಇಂಗ್ಲೀಷ್ ಮೀಡಿಯಂ ಶಾಲೆಯ ಕೊಠಡಿಯೊಂದರ ಮೇಲ್ಛಾವಣಿಯ ಸಿಮೆಂಟ್ ಕಾಂಕ್ರಿಟ್ ಪದರ ಕುಸಿದು ಬಿದ್ದಿದ್ದು, ಮಕ್ಕಳು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಗುರುವಾರ ನಡೆದಿದೆ.
ವಿದ್ಯಾರ್ಥಿಗಳು ಪ್ರಾರ್ಥನೆಗೆಂದು ತರಗತಿಯಿಂದ ಹೊರಗೆ ಬಂದಿರುವ ವೇಳೆ ಕೊಠಡಿಯೊಳಗಿಂದ ಭಾರೀ ಸದ್ದು ಕೇಳಿಬಂದಿದೆ. ಕೂಡಲೇ ಶಿಕ್ಷಕರು ಹೋಗಿ ನೋಡಿದಾಗ ಮೇಲ್ಛಾವಣಿಯ ಪದರ ಕುಸಿದು ಬಿದ್ದಿರುವುದು ಕಂಡು ಬಂದಿದೆ.
ವಿಷಯ ತಿಳಿದು ಎಸ್ಡಿಎಂಸಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಮಹಿಬೂಬ ಗೊಳಸಂಗಿ ಅವರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ.ಧರಿಕಾರ ಸ್ಥಳಕ್ಕಾಗಮಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದರು. ಆ ಕೊಠಡಿಯಲ್ಲಿ ಮಕ್ಕಳನ್ನು ಕೂರಿಸದಂತೆ ಸೂಚಿಸಿದರು. ಇದೇ ವೇಳೆ ಮತ್ತೊಂದು ಬಿರುಕು ಬಿಟ್ಟ ಕೊಠಡಿಯನ್ನೂ ಪರಿಶೀಲಿಸಿ ಮುನ್ನೆಚ್ಚರಿಕೆ ಕ್ರಮವಹಿಸಲು ಶಾಲೆಯ ಮುಖ್ಯಾಧ್ಯಾಪಕಿ ಬಾಗವಾನ ಅವರಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ:ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ
ಹಲವು ಬಾರಿ ಬಿಇಓ ಕಚೇರಿಗೆ ಶಾಲೆ ದುರಸ್ಥಿ, ಹೆಚ್ಚುವರಿ ಕೊಠಡಿ ಒದಗಿಸಲು ಕೋರಿ ಮನವಿಗಳ ಮೇಲೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂದು ಮುಖ್ಯಾಧ್ಯಾಪಕಿ ಅಸಮಾಧಾನ ತೋಡಿಕೊಂಡರು.
ಪ್ರತಿಭಟನೆ ಎಚ್ಚರಿಕೆ
ಮಹಿಬೂಬ ಗೊಳಸಂಗಿ ಮಾತನಾಡಿ ಶಾಲೆ ಸಂಪೂರ್ಣ ಜೀರ್ಣಾವಸ್ಥೆಗೀಡಾಗಿದೆ. ದುರಸ್ತಿಗೆ, ಹೊಸ ಕೊಠಡಿ ಮಂಜೂರಾತಿಗೆ ಯಾರೂ ಗಮನ ಹರಿಸುತ್ತಿಲ್ಲ. ಕೆಲ ಸಣ್ಣ ಪುಟ್ಟ ಕೆಲಸಗಳನ್ನೂ ಶಿಕ್ಷಕರು, ಎಸ್ಡಿಎಂಸಿಯವರ ಸಹಾಯದಿಂದ ಮಾಡಿದ್ದೇವೆ. ಈ ಘಟನೆಯಿಂದಾದರೂ ಇಲಾಖೆ ಎಚ್ಚೆತ್ತುಕೊಂಡು ಮಕ್ಕಳ ಪ್ರಾಣ ರಕ್ಷಣೆಗೆ ಕ್ರಮವಹಿಸಬೇಕು. ಇಲ್ಲವಾದರೆ ಮಕ್ಕಳ ಸಮೇತ ಬಿಇಓ ಕಚೇರಿಗೆ ತೆರಳಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪುರಸಭೆಯಿಂದಲೇ ನಿರ್ಲಕ್ಷ ಆರೋಪ
ಕ್ಷೇತ್ರ ಸಮನ್ವಯಾಧಿಕಾರಿ ಧರಿಕಾರ ಮಾತನಾಡಿ ಶಾಲೆ ಪುರಸಭೆ ವ್ಯಾಪ್ತಿಯಲ್ಲಿ ಬರುವುದರಿಂದ ಸಣ್ಣಪುಟ್ಟ ದುರಸ್ಥಿಗೆ, ಕಂಪೌಂಡ್ ನಿರ್ಮಾಣಕ್ಕೆ ಪುರಸಭೆಯವರು ಮುಂದಾಗಬೇಕು. ಹಲವು ಬಾರಿ ಪುರಸಭೆ ಆಡಳಿತಕ್ಕೆ ಈ ಕುರಿತು ಗಮನ ಸೆಳೆದರೂ ಅವರು ಸ್ಪಂದಿಸಿಲ್ಲ. ನಮ್ಮಲ್ಲಿ ಅನುದಾನ ಇಲ್ಲ ಎಂದು ಹೇಳುತ್ತಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯಪುರ: 34 ಲಕ್ಷ ರೂ. ಮೌಲ್ಯದ 763 ಕೆಜಿ ಮಾದಕ ವಸ್ತು ನಾಶ
ಅಗ್ನಿಅನಾಹುತಕ್ಕೆ ಗಾದಿ ಗೋದಾಮು ಭಸ್ಮ : ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗಾಹುತಿ
ವಿಜಯಪುರ ಜಿಲ್ಲೆಗೆ ಅಪಕೀರ್ತಿ ತಂದಲ್ಲಿ ಕಠಿಣ ಕ್ರಮ: ರೌಡಿಶೀಟರ್ ಗಳಿಗೆ ಎಸ್ ಪಿ ವಾರ್ನಿಂಗ್
ವಿಜಯಪುರ ಲೋಕ ಅದಾಲತ್ ನಲ್ಲಿ ಒಂದಾದ ವಕೀಲರ ಕುಟುಂಬ: 10 ಸಾವಿರ ಪ್ರಕರಣ ಇತ್ಯರ್ಥ
ಪ್ರಜಾಸತ್ತಾತ್ಮಕ ಸುಭದ್ರ ಸರ್ಕಾರಗಳ ಪತನವೇ ಬಿಜೆಪಿ ಪ್ರವೃತ್ತಿ: ಎಂ.ಬಿ.ಪಾಟೀಲ
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ
ಅಂಜನಾದ್ರಿಗೆ ಮೈಸೂರು ಒಡೆಯರ್ ಕುಟುಂಬ ಭೇಟಿ; ದೇವರ ದರ್ಶನ