![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಮೊಸಳೆ ಸೆರೆ
Team Udayavani, Jul 12, 2021, 8:29 PM IST
![gದಸಗದಗ್ಗಹಗಹಗಹ](https://www.udayavani.com/wp-content/uploads/2021/07/gದಸಗದಗ್ಗಹಗಹಗಹ-620x372.png)
ಮುದ್ದೇಬಿಹಾಳ: ಹಡಲಗೇರಿ ಗ್ರಾಮದ ಕೆರೆಯಲ್ಲಿ ಅಡಗಿಕೊಂಡು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಾರ್ಗದರ್ಶನದಲ್ಲಿ ಮೊಸಳೆ ಪರಿಣಿತರು ರವಿವಾರ ಸೆರೆ ಹಿಡಿದಿದ್ದಾರೆ. ಕೆಲ ದಿನಗಳ ಹಿಂದೆ ಗ್ರಾಮಸ್ಥರು ಕೆರೆಯಲ್ಲಿ ಮೊಸಳೆ ಸೇರಿದ್ದನ್ನು ಕಂಡಿದ್ದರು.
ಇದನ್ನು ಹಿಡಿಯಲು ಅಂದಿನಿಂದಲೇ ಬಲೆ ಬೀಸಲಾಗಿತ್ತು. ಮೊಸಳೆ ಇದೆ ಎನ್ನುವ ಎಚ್ಚರಿಕೆ ಫಲಕ ಗ್ರಾಪಂನವರು ಕೆರೆ ಬಳಿ ಅಳವಡಿಸಿದ್ದರು. ಕೆರೆಯಲ್ಲಿ ನೀರು ಕಡಿಮೆ ಆಗಿರುವುದನ್ನು ಅರಿತು ತಜ್ಞರನ್ನು ಕರೆಸಲಾಗಿತ್ತು. ಮೊದಲೇ ಹಾಕಿದ್ದ ಬಲೆಗೆ ಮೊಸಳೆ ಸಿಕ್ಕಿದ್ದನ್ನು ಅರಿತು ತೆಪ್ಪದ ನೆರವಿನಲ್ಲಿ ಅದರ ಬಳಿ ತೆರಳಿ ಹರಸಾಹಸದಿಂದ ಮೊಸಳೆ ಕಟ್ಟಿ ಹಾಕಿ ದಂಡೆಗೆ ತರಲಾಯಿತು.
ಮೊಸಳೆ ಹಿಡಿಯುವ ಪರಿಣಿತರಾದ ನಾಗೇಶ ಮೋಪಗಾರ, ಸುರೇಶ ಮೋಪಗಾರ, ಶಿವು ಮೋಪಗಾರ, ಮಂಜು, ಸುಭಾಸ, ಯಮನೂರಿ, ಮೂರ್ತಿ, ಮುದುಕು ಕಿರಶ್ಯಾಳ, ಎಂ. ಮಂಜು, ಶ್ರೀಶೈಲ ಮನಗೂರ, ಲೋಹಿತ ಮುದ್ದೇಬಿಹಾಳ, ಹೃತಿಕ ಮುದ್ದೇಬಿಹಾಳ ಇತರರು ತಂಡದ ಮುಖಂಡ ಮೌನೇಶ ಮೋಪಗಾರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದರು. ಮುದ್ದೇಬಿಹಾಳ ಬಿಜೆಪಿ ಧುರೀಣ ಪರಶುರಾಮ ನಾಲತವಾಡ ಸುದ್ದಿಗಾರರೊಂದಿಗೆ ಮಾತನಾಡಿ, ಮೊಸಳೆ ಕಂಡು ಬಂದ ದಿನದಿಂದ ಬಲೆ ಹಾಕಿ ಸೆರೆ ಹಿಡಿಯಲು ಹಗಲು-ರಾತ್ರಿ ಕಾವಲು ಕಾಯಲಾಗುತ್ತಿತ್ತು.
ಮೊಸಳೆ ಬಲೆಗೆ ಬಿದ್ದಿದ್ದನ್ನು ತಿಳಿದು ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ ಎಂದರು. ಎಆರ್ಎಫ್ಒ ಮಲ್ಲಪ್ಪ ತೇಲಿ ಮಾತನಾಡಿ, ಆಲಮಟ್ಟಿ ಜಲಾಶಯದ ಕೃಷ್ಣಾ ನದಿ ಹಿನ್ನೀರಿನಲ್ಲಿ ಮೊಸಳೆಯನ್ನು ಸುರಕ್ಷಿತವಾಗಿ ಬಿಡಲಾಗುತ್ತದೆ. ಮೊಸಳೆ ಹಿಡಿಯಲು ಧೈರ್ಯದಿಂದ ಮುಂದೆ ಬಂದ ಪರಿಣಿತರ ತಂಡವನ್ನು ಅರಣ್ಯ ಇಲಾಖೆ ವತಿಯಿಂದ ಶ್ಲಾಘಿಸುವುದಾಗಿ ತಿಳಿಸಿದರು. ಪಿಡಿಒ ಶೋಭಾ ಮುದಗಲ್ಲ ಮಾತನಾಡಿ, ಪರಶುರಾಮ ನಾಲತವಾಡ ಪ್ರಯತ್ನದಿಂದ ಬಂಧುಗಳು ಮೊಸಳೆ ಹಿಡಿಯುವಲ್ಲಿ ಪಳಗಿದ್ದರಿಂದ ಈ ಕೆಲಸ ಯಶಸ್ವಿಯಾಗಿದೆ.
ಇದಕ್ಕಾಗಿ ಪಂಚಾಯಿತಿ ವತಿಯಿಂದ ಅವರನ್ನು ಅಭಿನಂದಿಸುತ್ತೇವೆ ಎಂದರು. ಕಾರ್ಯಾಚರಣೆ ನಂತರ ಮೊಸಳೆ ಹಿಡಿದ ತಂಡವನ್ನು ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅರಣ್ಯ ರಕ್ಷಕ ಈಶ್ವರ ಹಿರೇಮಠ, ಗ್ರಾಮಸ್ಥರಾದ ವಿಠuಲ ಹರಿಂದ್ರಾಳ, ಭೀಮಣ್ಣ ಹರಿಂದ್ರಾಳ, ಮಾಳಪ್ಪ ಹರಿಂದ್ರಾಳ, ಚಿನ್ನಪ್ಪಗೌಡ ನಾಡಗೌಡ ಸೇರಿದಂತೆ ಗ್ರಾಪಂ ಸದಸ್ಯರು ಇದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.