ಜನರ ನಿರೀಕ್ಷೆ ಹುಸಿ ಮಾಡಿದ ಡಿಸಿಎಂ: ಶಾಸಕ ಡಾ| ಚವ್ಹಾಣ
ನಾಗಠಾಣ ಕ್ಷೇತ್ರಕ್ಕೆ ಕೇಳಿದರೆ ಕೊರೊನಾ- ಪ್ರವಾಹ ನೆಪವಿದೆ ಎಂದು ವ್ಯಂಗ್ಯವಾಡಿದರು.
Team Udayavani, Jan 22, 2021, 5:46 PM IST
ಚಡಚಣ: ವಿವಿಧ ಕಾಮಗಾರಿ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಗೆ ಪ್ರಥಮ ಬಾರಿಗೆ ಆಗಮಿಸಿದ ಡಿಸಿಎಂ ಗೋವಿಂದ ಕಾರಜೋಳ ಮೇಲೆ ಕ್ಷೇತ್ರದ ಜನತೆ ಅಪಾರ ನಿರೀಕ್ಷೆ ಇಟ್ಟಿದ್ದರು. ಆದರೆ ಅದೆಲ್ಲವೂ ಹುಸಿಯಾಗಿದೆ ಎಂದು ಶಾಸಕ ಡಾ| ದೇವಾನಂದ ಚವ್ಹಾಣ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಅಧಿಕಾರವಧಿಯಲ್ಲಿ ಪ್ರವಾಸಿ ಮಂದಿರ ನಿರ್ಮಾಣವಾಗಿದೆ. ಇದೇ ವೇಳೆ ಚಡಚಣ-ಹತ್ತಳ್ಳಿ-ಹಾವಿನಾಳ ಹಾಗೂ ಲೋಣಿ ರಸ್ತೆ ಅನುಷ್ಠಾನಗೊಳಿಸಲಾಗಿತ್ತು. ಹತ್ತಳ್ಳಿ ಬೋರಿ ಹಳ್ಳಕ್ಕೆ ಬ್ರಿಡ್ಜ್ ಕಂಬಾಂದಾರ ನಿರ್ಮಾಣ ಕಾಮಗಾರಿ ಹಿಂದಿನ ಸರ್ಕಾರದಲ್ಲಿ ಅನುಮೋದನೆಗೊಂಡಿತ್ತು. ಅಲ್ಲದೇ ನನೆಗುದಿಗೆ ಬಿದ್ದ ಉಮರಾಣಿ ಬ್ಯಾರೇಜ್ ಕಾಮಗಾರಿಗೆ ಸಮ್ಮಶ್ರ ಸರ್ಕಾರದಲ್ಲಿ ಚಾಲನೆ ನೀಡಲಾಗಿದೆ ಎಂದ ಅವರು, ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳಾದರೂ ಯಾವುವು? ಎಂದು ಪ್ರಶ್ನಿಸಿದರು.
ಕೇವಲ ತೋರಿಕೆಗೋಸ್ಕರ ಡಿಸಿಎಂ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಣಗಿ ಜಂಟಿಯಾಗಿ ವಿವಿಧ ಕಾಮಗಾರಿ ಭೂಮಿ ಪೂಜೆ, ಲೋಕಾರ್ಪಣೆ,
ಉದ್ಘಾಟನೆ ಮಂಗಳವಾರ ನೆರವೇರಿಸಿದ್ದಾರೆ.
ನಾಗಠಾಣ ಕ್ಷೇತ್ರದ ಜನತೆ ನೂತನ ತಾಲೂಕಿಗೆ ಅಪಾರ ಪ್ರಮಾಣದ ಅನುದಾನದ ಘೋಷಣೆ, ಬೃಹತ್ ಪ್ರಮಾಣದ ಅಭಿವೃದ್ಧಿ ಕಾರ್ಯ ಪ್ರಾರಂಭವಾಗುವ ನಿರೀಕ್ಷೆ, ನೂತನ ತಾಲೂಕಿಗೆ ಬೇಕಾಗುವ ಬಸ್ ಡಿಪೋ, ಅಗ್ನಿ ಶಾಮಕ ಕಚೇರಿ, ಮಿನಿ ವಿಧಾನಸೌಧ, ಕುಡಿವ ನೀರಿನ ಸಮಸ್ಯೆ, ನನೆಗುದಿಗೆ ಬಿದ್ದ ಪಟ್ಟಣದ ಪ್ರಮುಖ ರಸ್ತೆ ಕಾಮಗಾರಿಗೆ ಚಾಲನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಘೋಷಣೆಯಾಗುತ್ತವೆ ಎಂದುಕೊಂಡಿದ್ದ ಜನತೆ ಹಾಗೂ ವೈಯಕ್ತಿಕವಾಗಿ ನನಗೂ ನಿರಾಸೆ ತಂದಿದೆ ಎಂದರು. ಬಿಜೆಪಿ ಶಾಸಕರಿರುವ ಕಡೆ ಅನುದಾನ ಇರುತ್ತದೆ. ಆದರೆ ನಾಗಠಾಣ ಕ್ಷೇತ್ರಕ್ಕೆ ಕೇಳಿದರೆ ಕೊರೊನಾ- ಪ್ರವಾಹ ನೆಪವಿದೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ