ಗ್ರಾಮ ಸೇವಕರ ಹುದ್ದೆ ಖಾಲಿ ಖಾಲಿ!


Team Udayavani, Feb 15, 2022, 5:39 PM IST

26project

ಹೂವಿನಹಿಪ್ಪರಗಿ: ರೈತರಿಗಾಗಿ ಸರ್ಕಾರ ಜಾರಿ ಮಾಡಿದ ಕೃಷಿ ಇಲಾಖೆ ವಿವಿಧ ಯೋಜನೆ ಅನುಷ್ಠಾನದ ಮೇಲುಸ್ತುವಾರಿ ಹೊತ್ತು ಕಾರ್ಯನಿವಹಿಸುವ ಹಾಗೂ ರೈತರಿಗೆ ನೇರವಾಗಿ ಸಂಪರ್ಕದಲ್ಲಿರುವ ಸಹಾಯಕ ಕೃಷಿ ಅಧಿಕಾರಿ (ಗ್ರಾಮ ಸೇವಕ) ಇಲ್ಲದೇ ಹೂವಿನಹಿಪ್ಪರಗಿ ಹೋಬಳಿ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬಸವನಬಾಗೇವಾಡಿ ತಾಲೂಕಿನಲ್ಲಿ ಹೂವಿನಹಿಪ್ಪರಗಿ ಹೋಬಳಿ ಅತಿ ದೊಡ್ಡದಿದೆ. ಸದರ ಹೋಬಳಿ ವ್ಯಾಪ್ತಿಯಲ್ಲಿ ಎಂಟು ಗ್ರಾಪಂನ 23 ಗ್ರಾಮಗಳನ್ನು ಒಳಗೊಂಡಿದೆ. ಹೂವಿನಹಿಪ್ಪರಗಿ ರೈತ ಸಂಪರ್ಕ ಕಾರ್ಯಾಲಯಕ್ಕೆ ದಿನಾಲು ನೂರಾರು ರೈತರು ಸರ್ಕಾರಿ ಸೌಲಭ್ಯ ಪಡೆಯಲು ಬರುತ್ತಾರೆ. ಗ್ರಾಮ ಸೇವಕರು ಇಲ್ಲದ್ದು ಕಂಡು ರೈತರು ಬರಿಗೈಯಿಂದ ಬಂದ ದಾರಿ ಹಿಡಿಯುವಂತಾಗಿದೆ. ಇಲ್ಲಿ ಕಾರ್ಯನಿರ್ವಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿಗಳು ಒಬ್ಬರ ನಂತರ ಒಬ್ಬರಂತೆ ನಿವೃತ್ತರಾಗಿದ್ದಾರೆ.

ಕಳೆದ ಒಂದೆರಡು ವರ್ಷದಿಂದ ಇಲಾಖೆಯಲ್ಲಿ ಅಧಿಕಾರಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿ ಇಂದು ಯಾರೂ ಇಲ್ಲದ ಸ್ಥಿತಿ ಬಂದಿದೆ. ರೈತರಿಗೆ ಇಷ್ಟೊಂದು ತೊಂದರೆಯಿದ್ದರೂ ಕೂಡಾ ಸರ್ಕಾರ ಹಾಗೂ ಸ್ಥಳೀಯ ಜನ ಪತಿನಿಧಿಗಳು ಕಂಡು ಕಾಣದಂತೆ ಇರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕೈಗೂಡದ ರೈತ ಮಿತ್ರ ಹುದ್ದೆ

ಸರ್ಕಾರ ನೂತನವಾಗಿ ಸೃಷ್ಟಿಸಲಿರುವ ಗ್ರಾಪಂಗೆ ಸ್ಥಳೀಯ ಹಂತದಲ್ಲಿ ರೈತರಿಗೆ ಅನಕೂಲದ ದೃಷ್ಟಿಯಿಂದ ತಾತ್ಕಾಲಿಕ ರೈತ ಮಿತ್ರ ಹುದ್ದೆಯನ್ನು ಸೃಷ್ಟಿಸಬೇಕು ಎಂಬ ಯೋಜನೆಯೂ ಸರ್ಕಾರದ ಮಟ್ಟದಲ್ಲಿದೆ. ಆದರೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆಯಬೇಕು ಅಂದರೆ ಮಾತ್ರ ರೈತ ಮಿತ್ರ, ರೈತರಿಗೆ ಮಿತ್ರನಾಗಿ ವರ್ತಿಸಿ ರೈತರ ಕೆಲಸಗಳು ಸ್ಥಳೀಯ ಮಟ್ಟದಲ್ಲಿ ಈಡೇರಲು ಸಾಧ್ಯ. ಅದು ಏನೇ ಆಗಲಿ ಸರ್ಕಾರ ಮತ್ತು ಕೃಷಿ ಇಲಾಖೆ ಆದಷ್ಟು ಬೇಗನೆ ಕೃಷಿ ಇಲಾಖೆಯಲ್ಲಿರುವ ಖಾಲಿ ಹುದ್ದೆಯನ್ನು ಭರ್ತಿ ಮಾಡಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂಬುದು ರೈತರ ಆಗ್ರಹವಾಗಿದೆ.

ಪ್ರಸ್ತುತವಾಗಿ ಕಾರ್ಯಾನಿರ್ವಹಿಸುವ ಸಹಾಯಕ ಕೃಷಿ ಅಧಿಕಾರಿಗಳಿಗೆ ಬಡ್ತಿ ನೀಡಿ ಅವರನ್ನು ಕೃಷಿ ಅಧಿಕಾರಿಗಳೆಂದು ನೇಮಕ ಮಾಡಿ ಬೇರೆ ಕಡೆಗೆ ವರ್ಗಾಯಿಸಲಾಗಿದೆ. ಕೆಲ ಅಧಿಕಾರಿಗಳು ಸೇವೆಯಿಂದ ನಿವೃತ್ತಿಯಾಗಿದ್ದರಿಂದ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆ ಖಾಲಿಯಿವೆ. ಸರ್ಕಾರ ಹೊಸದಾಗಿ ನೇಮಕ ಮಾಡಬೇಕು. ಇಲ್ಲವೇ ಬೇರೆ ಕಡೆಯಿಂದ ವರ್ಗಾವಣೆ ಮಾಡಿದರೆ ಇಲ್ಲಿ ಈ ಕೊರತೆ ನೀಗಿಸಬಹುದು. ಎಂ.ಎಚ್‌. -ಯರಝರಿ, ಕೃಷಿ ಅಧಿಕಾರಿ, ಬಸವನಬಾಗೇವಾಡಿ

ಕೃಷಿ ಸಹಾಯಕ ಅಧಿಕಾರಿಗಳ ಹುದ್ದೆಗಳು ಖಾಲಿಯಿದ್ದು ಸರ್ಕಾರದ ಗಮನಕ್ಕಿದೆ. ಈ ವಿಷಯವಾಗಿ ಸಚಿವರ ಸಭೆಯಲ್ಲಿ ಹಲವು ಬಾರಿ ಚರ್ಚೆಗೆ ಬಂದಿದೆ. ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದು ಖಾಲಿಯಿರುವ ಹುದ್ದೆಯನ್ನು ಭರ್ತಿ ಮಾಡಿದ ನಂತರವೇ ಇದು ಸರಿಯಾಗಲಿದೆ. -ರಾಜಶೇಖರ ವಿಲಿಯಮ್ಸ್‌, ಜಿಲ್ಲಾ ಕೃಷಿ ಅಧಿಕಾರಿ, ವಿಜಯಪುರ

ಕೃಷಿ ಇಲಾಖೆ ರೈತ ವಿರೋಧಿಯಂತೆ ವರ್ತಿಸುತ್ತಿದೆ. ಬೆಳೆ ಹಾನಿಯಾದ ಹಲವು ದಿನಗಳು ಕಳೆದು ಅದರ ಬಗ್ಗೆ ವರದಿಯಾದರು ಈವರೆಗೆ ಸರ್ಕಾರ ಹಾಗೂ ಜನ ಪತ್ರಿನಿಧಿಗಳು ತಲೆ ಕೆಡಿಸಿಕೊಂಡಿಲ್ಲ. ದ್ರಾಕ್ಷಿ ಸೇರಿ ಇತರೆ ಬೆಳೆಗಳ ವಿಮೆ ಮಂಜೂರು ಮಾಡಿ ರೈತರ ಹಿತ ಕಾಪಾಡಬೇಕು. ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರ ನೇಮಕ ಮಾಡಿ ರೈತರಿಗೆ ಅನುಕೂಲ ಮಾಡಿ ಕೊಡಬೇಕು. -ರಾಜುಗೌಡ ಪಾಟೀಲ, ಜೆಡಿಎಸ್‌ ಧುರೀಣ, ದೇವರಹಿಪ್ಪರಗಿ ಕ್ಷೇತ್ರ

-ದಯಾನಂದ ಬಾಗೇವಾಡಿ

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.