ದೇಶದಲ್ಲೇ ರಾಜ್ಯದ ಘನತೆ ಹೆಚ್ಚಿತ್ತು, ಆದರೆ ಬಿಜೆಪಿ…. : ಎಂ.ಬಿ.ಪಾಟೀಲ್ ಕಿಡಿ
ಸಿ.ಟಿ.ರವಿ ಕೂಡಲೇ ಜನತೆ ಮುಂದೆ ಸಿದ್ದರಾಮಯ್ಯರ ಕ್ಷಮೆ ಯಾಚಿಸಬೇಕು
Team Udayavani, Sep 12, 2022, 3:28 PM IST
ವಿಜಯಪುರ: ಕೆಂಗಲ್ ಹನುಮಂತಯ್ಯ, ನಿಜಲಿಂಗಪ್ಪ, ದೇವರಾಜ ಅರಸು, ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್, ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ ಅವರಂಥ ಮುಖ್ಯಮಂತ್ರಿಗಳ ಅವಧಿಯಲ್ಲಿ ದೇಶದಲ್ಲೇ ರಾಜ್ಯದ ಘನತೆ ಹೆಚ್ಚಿತ್ತು. ಆದರೆ ಬಿಜೆಪಿ ಹಾಲಿ ರಾಜ್ಯ ಸರ್ಕಾರದ ಕಮಿಷನ್ ದಂಧೆಯಿಂದ ಕರ್ನಾಟಕದ ಘನತೆಗೆ ಚ್ಯುತಿ ಬಂದಿದೆ. ಆದಷ್ಟು ಶೀಘ್ರವಾಗಿ ರಾಜ್ಯದ ಮತದಾರ ಈ ಕೆಟ್ಟ ಸರ್ಕಾರವನ್ನು ಕಿತ್ತು ಎಸೆಯಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೋಮವಾರ ಕಿಡಿಕಾರಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ”ರಾಜ್ಯದಲ್ಲಿ ಶೇ.40 ಕಮಿಷನ್ ಸರ್ಕಾರ ಇದ್ದು, ಬಿಬಿಎಂಪಿ ವ್ಯವಸ್ಥೆಯಲ್ಲಿ ಇದು ಶೇ. 50 ರಷ್ಟಿದೆ ಎಂದು ಗುತ್ತಿಗೆದಾರರು ಸ್ವಯಂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇನ್ನು ಶಾಸಕರು ಪಿಎಸ್ಐ ನೇಮಕಾತಿ ವಿಷಯಕ್ಕೆ ಹಣ ಪಡೆಯುವುದು ಅವರ ಮಟ್ಟಿಗೆ ದೊಡ್ಡದೇನಲ್ಲಎಂದು ಕನಕಗಿರಿ ಶಾಸಕ ದಡೇಸಗೂರು ಲಂಚದ ಹಗರಣದ ಪ್ರಕರಣ ಪ್ರಸ್ತಾಪಿಸಿದರು. ಪಿಎಸ್ಐ ನೇಮಕಾತಿ ಹಗರಣ ಮಾತ್ರವಲ್ಲ ಇನ್ನೂ ಹಲವು ಇಲಾಖೆಯ ಭ್ರಷ್ಟಾಚಾರದ ಹಗರಣ ಹೊರ ಬರುತ್ತಿವೆ. ಯಾರೋ ಕೆಲವರು ಮಾಡಿದ ತಪ್ಪಿನಿಂದ ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಎದುರಿಸಿದ ಅರ್ಹರಿಗೆ ಅನ್ಯಾಯ ಆಗದಂತೆ ತ್ವರಿತವಾಗಿ ತನಿಖೆ ಪೂರ್ಣಗೊಳಿಸಿ ಸರ್ಕಾರ ಕೂಡಲೇ ನೇಮಕ ಪ್ರಕ್ರಿಯೆ ಮುಗಿಸಬೇಕು” ಎಂದು ಆಗ್ರಹಿಸಿದರು.
”ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಹಗುರವಾಗಿ ಮಾತನಾಡಿರುವುದು ಮಾಧ್ಯಮಗಳಿಂದ ನನ್ನ ಗಮನಕ್ಕೆ ಬಂದಿದೆ. ಸಿ.ಟಿ.ರವಿ ಕೂಡಲೇ ನಾಡಿನ ಜನತೆ ಮುಂದೆ ಸಿದ್ದರಾಮಯ್ಯ ಅವರ ಕ್ಷಮೆ ಯಾಚಿಸಬೇಕು” ಎಂದು ಆಗ್ರಹಿಸಿದರು.
”ತಮ್ಮ ಬಳಿ = ಬಿಜೆಪಿ ಭ್ರಷ್ಟಾಚಾರದ ದಾಖಲೆಗಳಿದ್ದು, ಬಿಡುಗಡೆ ಮಾಡಲು ಕಾಂಗ್ರೆಸ್ ಸಹಕಾರ ಬೇಕು ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ವಿಶ್ವಾಸಾರ್ಹವಲ್ಲ. ರಾಜ್ಯದ ವಿಧಾನಸಭೆ ಉಪ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುತ್ತಾರೆ. ಮತ್ತೊಂದೆಡೆ ಅಧಿಕಾರಕ್ಕಾಗಿ ಮೈಸೂರಿನಲ್ಲಿ ಬಿಜೆಪಿ ಜತೆ ಕೈ ಜೋಡಿಸುತ್ತಾರೆ. ಹೀಗಾಗಿ ಅಧಿಕಾರಕ್ಕಾಗಿ ಅನುಕೂಲ ಸಿಂಧು ರಾಜಕೀಯ ಮಾಡುವ ಜೆಡಿಎಸ್ ರಾಜಕೀಯ ವಿಶ್ವಾಸಾರ್ಹವಲ್ಲ” ಎಂದು ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ