ಇಂಡಿಯಲ್ಲಿಂದು ಕನ್ನಡಮ್ಮನ ಹಬ್ಬ


Team Udayavani, Jan 2, 2018, 2:29 PM IST

vij-5.jpg

ಇಂಡಿ: ಕರ್ನಾಟಕ ರಕ್ಷಣಾ ವೇದಿಕೆಯಿಂದ ಜ. 2ರಂದು ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದ ಪಕ್ಕದಲ್ಲಿ ಗಡಿನಾಡು ಕನ್ನಡಿಗರ ಮೂರನೇ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಪಟ್ಟಣದ ತುಂಬೆಲ್ಲ ಕನ್ನಡಾಂಬೆಯ ಮತ್ತು ಕನ್ನಡನಾಡ ಧ್ವಜ ರಾರಾಜಿಸುತ್ತಿವೆ. ಪಟ್ಟಣದ ಎಲ್ಲ ಮುಖ್ಯ ವೃತ್ತಗಳನ್ನು ಅಲಂಕರಿಸಿ ನಾಡು ನುಡಿಯ ಹಬ್ಬಕ್ಕೆ ಅದ್ಧೂರಿಯಾಗಿ ತಯಾರಿ ನಡೆಸಲಾಗುತ್ತಿದೆ.

ಇಂಡಿ ತಾಲೂಕು ಮಹಾರಾಷ್ಟ್ರಕ್ಕೆ ಅಂಟಿಕೊಂಡ ಗಡಿನಾಡು ತಾಲೂಕಾಗಿದ್ದು ಇಲ್ಲಿ ಮಹಾರಾಷ್ಟ್ರದವರ ಪ್ರಭಾವ ತುಸು
ಹೆಚ್ಚಾಗೇ ಕಾಣಬರುತ್ತದೆ. ಗಡಿ ತಾಲೂಕಿನಲ್ಲಿ ಕನ್ನಡ ನುಡಿ ಉಳಿಸಿ ಬೆಳೆಸುವಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಿರಂತರ
ತನ್ನ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯವಾಗಿದೆ.

ತಾಲೂಕಿನಲ್ಲಿ ಅನೇಕ ಕಲಾವಿದರು, ಸಾಹಿತ್ಯಾಭಿಮಾನಿಗಳು, ಶರಣರು, ಆಗಿ ಹೋಗಿದ್ದಾರೆ. ರಕ್ಷಣಾ ವೇದಿಕೆಯ ಈ ಗಡಿನಾಡು ಕನ್ನಡಿಗರ ಸಮಾವೇಶ ಕಾರ್ಯಕ್ರಮದಲ್ಲಿ ಅಂತಹ ಮಹನೀಯರನ್ನು ಸ್ಮರಿಸುವ ಕಾರ್ಯ ಮಾಡಬೇಕು ಎಂಬುದು ಸಾಹಿತ್ಯಾಸಕ್ತರ
ಆಶಯವಾಗಿದೆ.

ತಾಲೂಕಿನ ಅಗರಖೇಡದ ಶ್ರೀರಂಗರು, ಹಲಸಂಗಿಯ ಮಧುರಚೆನ್ನರು, ಚಡಚಣದ ಸಿಂಪಿ ಲಿಂಗಣ್ಣನವರು, ಪಿ. ಧೂಲಾಸಾಹೇಬರು ಸೇರಿದಂತೆ ಇನ್ನಿತರ ಸಾಹಿತ್ಯದ ಕಣಜವಾದ ಮಹನೀಯರನ್ನು ಮತ್ತು ಕನ್ನಡ ಭಾಷೆ ಉಳಿವಿಗೆ ಕನ್ನಡ ಭಾಷೆಯಲ್ಲೇ ಪದ ಪ್ರಯೋಗ ಮಾಡಬೇಕೆಂದು ತಿಳಿ ಹೇಳುವ ಕೆಲಸವನ್ನು ಸಹ ಮಾಡಬೇಕೆಂಬುವುದು ಕನ್ನಡಾಭಿಮಾನಿಗಳ ಆಶಯ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಿರಶ್ಯಾಡ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು, ಹಿರೇಮಣೂರದ ಪಂಡಿತ ಅನಂತಾಚಾರ್ಯರು, ಗೋಳಸಾರದ ಅಭಿನವ ಪುಂಡಲಿಂಗ ಮಹಾರಾಜರು ವಹಿಸಲಿದ್ದಾರೆ.

ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಲಿದ್ದು, ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅಧ್ಯಕ್ಷತೆ ವಹಿಸುವರು. ಕನ್ನಡಾಂಬೆಗೆ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಪುಷ್ಪಾರ್ಚನೆ ಸಲ್ಲಿಸಲಿದ್ದು ಮೆರವಣಿಗೆಗೆ ಮಹಾದೇವ ಭೈರಗೊಂಡ ಚಾಲನೆದ ನೀಡುವರು. ನೇತೃತ್ವವನ್ನು ಕರವೇ ತಾಲೂಕಾಧ್ಯಕ್ಷ ಬಾಳು ಮುಳಜಿ ವಹಿಸಲಿದ್ದಾರೆ. ವಿಶೇಷ ಸನ್ಮಾನಿತರಾಗಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ವಿಶೇಷ ಆಹ್ವಾನಿತರಾಗಿ ಸಿಂದಗಿ
ಶಾಸಕ ರಮೇಶ ಭೂಸನೂರ, ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ, ಬಿಜೆಪಿ ಮುಖಂಡ ಶಂಕರಗೌಡ ಪಾಟೀಲ, ಜಿಪಂ ಸದಸ್ಯ ಶಿವಯೋಗೆಪ್ಪ ನೇದಲಗಿ, ಚಿತ್ರ ನಟ ಶ್ರೀನಗರ ಕಿಟ್ಟಿ, ನಟಿ ಅಮೃತಾ ರಾವ್‌ ಆಗಮಿಸಲಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.