ಬಾಲಕಿಯರ ವಸತಿ ನಿಲಯದಲ್ಲಿ ಅವ್ಯವಸ್ಥೆ


Team Udayavani, Dec 30, 2017, 4:00 PM IST

vij-4.jpg

ಸಿಂದಗಿ: ಪಟ್ಟಣದ ಖಾಸಗಿ ಕಟ್ಟಡದಲ್ಲಿರುವ ವಿಜಯಪುರ ಜಿಪಂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಅವ್ಯವಸ್ಥೆ ಆಗರವಾಗಿದೆ.

ವಸತಿ ನಿಲಯಗಳು ಅದರಲ್ಲಿ ಬಾಲಕಿಯರ ವಸತಿ ನಿಲಯಗಳು ಮೂಲಭೂತ ಸೌಕರ್ಯಗಳೊಂದಿಗೆ ವಸತಿ ನಿಲಯ ವಿದ್ಯಾರ್ಥಿಗಳ ಆರೈಕೆ, ರಕ್ಷಣೆ ನೀಡುವುದು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಮತ್ತು ವಸತಿ ನಿಲಯದ ಮೇಲ್ವಿಚಾರ ಕರ್ತವ್ಯ. ವಸತಿ ನಿಲಯದ ಮೇಲ್ವಿಚಾರಕಿ ಆಗೊಮ್ಮೆ ಈಗೊಮ್ಮೆ ಬಂದು ಹೋದರೆ ರಾತ್ರಿ ಕಾವಲುಗಾರತಿ (ನೈಟ್‌ ವಾಚ್‌ಮನ್‌) ಸಾಯಂಕಾಲ 6ಕ್ಕೆ ಬರುವ ಬದಲು ರಾತ್ರಿ 9ರ ನಂತರ ವಸತಿ ನಿಲಯಕ್ಕೆ ಬಂದರೇ ವಿದ್ಯಾರ್ಥಿಯರಿಗೆ ರಕ್ಷಣೆ ಮಾಡುವವರಾರು? ಏನಾದರು ಅವಘಡಗಳು ಸಂಭವಿಸಿದರೇ ಉತ್ತರ ನೀಡುವವರಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಖಾಸಗಿ ಕಟ್ಟಡದಲ್ಲಿದ್ದರೂ ಕಟ್ಟಡ ಸುರಕ್ಷಿತವಾಗಿದೆ. ನೀರಿನ ಸೌಲಭ್ಯವಿದೆ. ಆದರೆ ವಸತಿ ನಿಲಯದ ನಿರ್ವಹಣೆ ಮಾತ್ರ ತಪ್ಪಿದೆ. ವಸತಿ ನಿಲಯದ ಮೇಲ್ವಿಚಾರಕಿ ನಂದಾಜ್ಯೋತಿ ನಾಸಿ ಅವರಿಗೆ ಸಿಂದಗಿ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಮೆಟ್ರಿಕ್‌ ನಂತರದ ಬಾಲಕಿಯರ ನಿಲಯ ಮತ್ತು ಜಾಲವಾದದಲ್ಲಿನ ವಸತಿ ನಿಲಯದ ಮೇಲ್ವಿಚಾರಣೆಯ ಜವಾಬ್ದಾರಿಯಿದೆ ಎಂದು ನೇಪ ಹೇಳಿ ವಸತಿ ನಿಲಯದಲ್ಲಿ ಇರುವುದಿಲ್ಲ. ಅವರು ಸರಿಯಾಗಿ ಕಾಯಿಪಲ್ಲೆ ಸಂತಿ ಮಾಡುವುದಿಲ್ಲ ಇದರಿಂದ ಇಲ್ಲಿ ಊಟ ಮತ್ತು ರಕ್ಷಣೆಯ ವ್ಯವಸ್ಥೆ ಅವ್ಯವಸ್ಥಿತವಾಗಿದೆ ಎಂದು ವಸತಿ ನಿಲಯದ ಬಾಲಕಿಯರು ದೂರಿದ್ದಾರೆ.

ವಸತಿ ನಿಲಯದಲ್ಲಿ ಗ್ರಂಥಗಳನ್ನು ಇಡುವ ಕಪಾಟಿದ್ದರೂ ಪುಸ್ತಕಗಳಿಲ್ಲ. ಇರುವ ಪುಸ್ತಕಗಳು ರೂಮಿನೊಳಗೆ ಕಟ್ಟಿ ಇಟ್ಟಿದ್ದಾರೆ. ನಮಗೆ ಓದಲು ಪುಸ್ತಕ ನೀಡುವುದಿಲ್ಲ . ವಸತಿ ನಿಲಯದಲ್ಲಿ 50 ವಿದ್ಯಾರ್ಥಿಗಳ ಹೆಸರು ಇರುತ್ತದೆ. 30-35
ವಿದ್ಯಾರ್ಥಿಗಳು ಇರುತ್ತಾರೆ. ಉಳಿದವರು ತಿಂಗಳಿಗೊಮ್ಮೆ ಬಂದು ಕಿಟ್‌ ಪಡೆದುಕೊಂಡು ಹೋಗುತ್ತಾರೆ. ದಿನಕ್ಕೆ ಬೆಳಗ್ಗೆ 7ಕ್ಕೆ ಚಹಾ, 8:45ರಿಂದ 9:35ರವರೆಗೆ ಊಟ, ಸಂಜೆ 5 ರಿಂದ 5:30ರವರೆಗೆ ಚಹಾ, ಉಪಾಹಾರ ಮತ್ತು ರಾತ್ರಿ 7:30 ರಿಂದ 8:30 ರವರೆಗೆ ಊಟ ನೀಡಬೇಕು. ಅದು ಕೇವಲ ವೇಳಾ ಪಟ್ಟಿಯಲ್ಲಿ ಇದೆ. 

ನಮಗೆ ಬೆಳಗ್ಗೆ 9ಕ್ಕೆ ಉಪಹಾರ ನೀಡಿ ಒಮ್ಮೆಲೆ ರಾತ್ರಿ ಊಟ ಹಾಕುತ್ತಾರೆ. ತಿಂಗಳಲ್ಲಿ ವಿಶೇಷ ಊಟ ಕೊಟ್ಟರೆ ಕೊಟ್ಟರು ಇಲ್ಲಾಂದ್ರ ಇಲ್ಲ. ಏನಾದರು ಕೇಳಿದರೆ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಕೊಡುತ್ತಾರಲ್ಲ ಎಂದು ಹೇಳುತ್ತಾರೆ. ಹೆಚ್ಚಿಗೆ ಕೇಳಿದಲ್ಲಿ ನಮ್ಮ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೆದರಿಸುತ್ತಾರೆ ಎಂದು ವಿದ್ಯಾರ್ಥಿನಿಯರು ದೂರಿದರು

ಇಂದಿನ ಕಾಲದಲ್ಲಿ ಅಪ್ರಾಪ್ತ ಬಾಲಕಿಯರನ್ನು ಹೊರಗೆ ಬಿಡುವುದು ಕಷ್ಟವಾಗಿದೆ. ವಸತಿ ನಿಲಯದ ಇಲಾಖೆ ಮತ್ತು ಮೇಲ್ವಿಚಾರಕರನ್ನು ನಂಬಿ ಪಾಲಕರು ತಮ್ಮ ಮಕ್ಕಳನ್ನು ಬಿಟ್ಟಿರುತ್ತಾರೆ. ಇವರಿಗೆ ಮೂಲಭೂತ ಸೌಕರ್ಯ ಒದಗಿಸುವ
ಜೊತೆಗ ಪೌಷ್ಟಿಕ ಆಹಾರ ನೀಡುವ ಜೊತೆಗೆ ರಕ್ಷಣೆ ನೀಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. 
 ಶೈಲಜಾ ಸ್ಥಾವರಮಠ, ಮಹಿಳಾ ಜಾಗರಣಾ ವೇದಿಕೆ ಅಧ್ಯಕೆ 

ವಸತಿ ನಿಲಯದಲ್ಲಿ 50 ವಿದ್ಯಾರ್ಥಿಗಳ ಹಾಜರಾತಿಯಿದೆ. ಅವರಲ್ಲಿ 30-35 ವಿದ್ಯಾರ್ಥಿಗಳು ವಸತಿ ನಿಲಯದಲ್ಲಿರುತ್ತಾರೆ. ಇನ್ನುಳಿದವರು ತಿಂಗಳಿಗೆ ಬಂದು ಇಲಾಖೆ ನೀಡುವ ಕಿಟ್‌ ತಗೆದುಕೊಂಡು ಹೋಗುತ್ತಾರೆ. ವಸತಿ ನಿಲಯದಲ್ಲಿ ಒಬ್ಬ ರಾತ್ರಿ ಕಾವಲುಗಾರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ. ಅವರು ಸರಿಯಾಗಿ ಬರುತ್ತಿಲ್ಲ ಎಂದು ತಿಳಿದು ಬಂದಿದ್ದು ಎಚ್ಚರಿಕೆ ನೀಡಲಾಗಿದೆ.
ದಾಜ್ಯೋತಿ ನಾಸಿ, ವಸತಿ ನಿಲಯದ ಮೇಲ್ವಿಚಾರಕಿ

ವಸತಿ ನಿಲಯದಲ್ಲಿನ ಮಕ್ಕಳ ಹಾಜರಾತಿ ಸಂಖ್ಯೆಯನ್ನು ನೋಡುತ್ತೇನೆ. ಅಲ್ಲಿನ ಅವ್ಯವಸ್ಥೆ ನನಗೆ ತಿಳಿದಿಲ್ಲ. ಈ ಕುರಿತು ಮೇಲ್ವಿಚಾರಕಿಯರನ್ನು ವಿಚಾರ ಮಾಡಲಾಗುವುದು. 
ಬಸಯ್ಯ ಗೋಳಮಠ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ಸಿಂದಗಿ.

ರಮೇಶ ಪೂಜಾರ

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.