ಕಾಂಗ್ರೆಸ್‌ ಪಕ್ಷಕ್ಕಿದೆ ಭವ್ಯ ಇತಿಹಾಸ


Team Udayavani, May 7, 2018, 12:03 PM IST

vij-2.jpg

ಇಂಡಿ: ಭಾರತದ ಏಕತೆ, ಸಮಗ್ರತೆ, ಅಭಿವೃದ್ಧಿಗೆ ಶ್ರಮಿಸಿದ್ದು ಅಲ್ಲದೇ ದೇಶಕ್ಕೆ ತ್ಯಾಗ, ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದುಕೊಟ್ಟ ಕೀರ್ತಿ ಕಾಂಗ್ರೆಸ್‌ ಪಕ್ಷಕ್ಕಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ತಾಲೂಕಿನ ಪಡನೂರ ಗ್ರಾಮದಲ್ಲಿ ಕಾಂಗ್ರೆಸ್‌ ಪಕ್ಷದ ಪರ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. 

ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಸೋನಿಯಾಗಾಂಧಿ ಅವರು ದೇಶವನ್ನು ಮುನ್ನಡೆಸುವತ್ತ ಪ್ರಯತ್ನ ಪಟ್ಟಿದ್ದಾರೆ. ಕಾಂಗ್ರೆಸ್‌ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಬದ್ಧತೆಯಿಂದ ನಡೆದುಕೊಂಡಿದೆ. ಅದರಂತೆ ಇಂಡಿ ತಾಲೂಕಿನಲ್ಲಿ ನನ್ನ ಅಧಿಕಾರದ ಅವಧಿಯಲ್ಲಿ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಪದಾಧಿ ಕಾರಿಗಳನ್ನಾಗಿ ನೇಮಿಸಿ ಅಣ್ಣ ಬಸವಣ್ಣನ ನಾಡಿನಲ್ಲಿ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ತತ್ವದಡಿಯಲ್ಲಿ ನ್ಯಾಯ ಒದಗಿಸಲಾಗಿದೆ. ತಾಲೂಕಿನ ಸಹಕಾರಿ ರಂಗ, ಸಾಮಾಜಿಕ ರಂಗ, ಧಾರ್ಮಿಕ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಸ ಶಕೆಯನ್ನು ಬರೆದು ಮನ್ವಂತರ ಸಾರಲಾಗಿದೆ.
 
ತಾಲೂಕಿನ ರೈತರ ಹಿತಕ್ಕಾಗಿ 17 ಕೆರೆಗಳಲ್ಲಿ 13 ಕೆರೆ ತುಂಬಿಸಲಾಗಿದೆ. ಉಳಿದ ಕೆರೆಗಳನ್ನು ತಾಂತ್ರಿಕ ಕಾರಣದಿಂದ ತುಂಬಿಸಲಾಗಿಲ್ಲ. ಪಟ್ಟಣದ ಸೌಂದರ್ಯಿಕರಣ ರಸ್ತೆ ಕಾಮಗಾರಿ, ಒಳಚರಂಡಿ ಕಾಮಗಾರಿಗಳನ್ನು ಮಾಡಲಾಗಿದೆ. ಇಂಡಿ ನಗರಕ್ಕೆ 90 ಲಕ್ಷ ವೆಚ್ಚದಲ್ಲಿ ದೂಳಖೇಡ, ಟಾಕಳಿ ಹತ್ತಿರ ಜಾಕ್‌ ವೆಲ್‌ ನಿರ್ಮಿಸಿ 24×7 ಕುಡಿಯುವ ನೀರು ಪೂರೈಕೆಗೆ ಯೋಜನೆ ಕಾರ್ಯಗತಗೊಳ್ಳಲಿದೆ ಎಂದರು. 

ತಾಲೂಕಿನ ಎಲ್ಲ ಗ್ರಾಮಗಳಿಗೆ ಸಮರ್ಪಕ ರಸ್ತೆಗಳು, ಶುದ್ಧ ಕುಡಿಯುವ ನೀರಿನ ಘಟಕಗಳು, ವಿವಿಧ ಸಮಾಜ ಮಂದಿರಗಳು, ಭವನಗಳನ್ನು ನಿರ್ಮಿಸಲಾಗಿದೆ. 2013ರ ಚುನಾವಣೆಯಲ್ಲಿ ತಾಲೂಕಿನ ಜನತೆ ಅತಿ ಹೆಚ್ಚು ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದೀರಿ. ಅದಕ್ಕೆ ತಕ್ಕುದಾಗಿ ನಾನು ನಿಮ್ಮೇಲ್ಲರ ಅಳಿಲು ಸೇವೆ ಮಾಡಿದ್ದೇನೆ. ನನ್ನ ಕಾರ್ಯ ನನಗೆ ತೃಪ್ತಿ ತಂದಿದೆ. ಮತದಾರ ಪ್ರಭುಗಳು ನನಗೆ ಮೇ 12ರಂದು ಜರುಗುವ ಸಾರ್ವತ್ರಿಕ ಚುನಾವಣೆಯಲ್ಲಿ ಮತ ನೀಡಿ ಆಶೀರ್ವಧಿಸಲು ಕೋರಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.