ಮೈದುಂಬಿದ ಕೃಷೆಗೆ ಬಾಗಿನ ಅರ್ಪಣೆ ಎಂದು?


Team Udayavani, Sep 1, 2022, 8:12 PM IST

20-rivers

ಆಲಮಟ್ಟಿ: ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಕಡಿಮೆಯಾಗಿದ್ದು ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದರೂ ಸರ್ಕಾರದಿಂದ ಕೃಷ್ಣೆಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸದಿರುವುದು ಕೃಷ್ಣೆಯ ಒಡಲ ಮಕ್ಕಳ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದ ಒಟ್ಟು ನೀರಾವರಿ ಪ್ರದೇಶದಲ್ಲಿ ಶೇ.60ರಷ್ಟು ಭೂಮಿಯನ್ನು ಕೃಷ್ಣಾ ಕಣಿವೆಯಿಂದ ನೀರಾವರಿಗೊಳಪಟ್ಟಿದೆ. ಕಾವೇರಿ ನದಿಗೆ ಕೃಷ್ಣ ರಾಜ ಸಾಘರ ಜಲಾಶಯ ತುಂಬುತ್ತಿದ್ದಂತೆಯೇ ಕಾವೇರಿಗೆ ಸರ್ಕಾರದಿಂದ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಾಗುತ್ತಿದೆ. ಕೃಷ್ಣೆಯ ಜಲನಿಧಿ ಸಂಪೂರ್ಣವಾಗಿ ತುಂಬಿ 15 ದಿನಗಳು ಗತಿಸಿದರೂ ಕೃಷ್ಣೆ ಕಡೆಗೆ ಸರ್ಕಾರದಿಂದ ಕೃಷ್ಣೆಯ ಜಲನಿಧಿಗೆ ಗಂಗಾ ಪೂಜೆ ಮತ್ತು ಬಾಗಿನ ಅರ್ಪಿಸುವ ಬಗ್ಗೆ ಯಾರಲ್ಲಿಯೂ ಸ್ಪಷ್ಟತೆ ಇಲ್ಲದಿರುವುದು ಕಾವೇರಿಗೊಂದು ನೀತಿ ಕೃಷ್ಣೆಗೊಂದು ನೀತಿಯಾಗಿದೆ. ಸರ್ಕಾರ ಎರಡೂ ನದಿಗಳಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಪ್ರಜ್ಞಾವಂತ ನಾಗರಿಕರ ಆರೋಪವಾಗಿದೆ.

ಅನುಮಾನ: ಕೃಷ್ಣೆ ಮತ್ತು ಉಪ ನದಿಗಳ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗಿದ್ದರಿಂದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಗೆ ಲಕ್ಷಾಂತರ ಕ್ಯೂಸೆಕ್‌ ನೀರು ಹರಿದು ಬಂದಿದೆ. ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಕೇಂದ್ರ ಜಲ ಆಯೋಗದ ನೀತಿಯಂತೆ ಈ ಮೊದಲು ಸಾಕಷ್ಟು ಪ್ರಮಾಣದಲ್ಲಿ ಜಲಾಶಯದಿಂದ ನದಿ ಪಾತ್ರಕ್ಕೆ ನೀರನ್ನು ಹರಿ ಬಿಡಲಾಗಿದೆ. ಜಲಾಶಯದಲ್ಲಿ ಸಂಗ್ರಹಿಸಿಕೊಂಡಿರುವ ನೀರಿನಲ್ಲಿ ಜನತೆಯ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಗಳಿಂದ ನೀರನ್ನು ಹೊರ ಬಿಡುವುದರಿಂದ ಸಹಜವಾಗಿ ತುಂಬಿದ ಜಲಾಶಯ ಅರ್ಧವಾಗಲಿದೆ. ಇದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಂಗಾಪೂಜೆ ಮತ್ತು ಬಾಗಿನ ಅರ್ಪಿಸುವುದಾದರೂ ಹೇಗೆ ಎನ್ನುವುದು ನಾಗರಿಕರ ಅನುಮಾನಕ್ಕೆ ಕಾರಣವಾಗಿದೆ.

ಕೃಷ್ಣೆಯ ಉಗಮಸ್ಥಾನ ಮಹಾರಾಷ್ಟ್ರದ ಮಹಾಬಳೇಶ್ವರ, ನವಜಾ, ವೇದಗಂಗಾ, ಪಂಚಗಂಗಾ ಸೇರಿದಂತೆ ಮಹಾರಾಷ್ಟ್ರದಲ್ಲಿರುವ ಕೃಷ್ಣೆಯ ಉಪ ನದಿಗಳ ನೀರು ಸೇರಿಕೊಂಡು ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಗಡಿ ಭಾಗದಲ್ಲಿರುವ ರಾಜಾಪುರ ಬ್ಯಾರೇಜ್‌ ಮೂಲಕ ನೀರು ರಾಜ್ಯಕ್ಕೆ ಹರಿದು ಬಂದಿದೆ. ರಾಜ್ಯದಲ್ಲಿ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದ ಹಿನ್ನೀರು ಪ್ರದೇಶವಾಗಿರುವ ಬಾಗಲಕೋಟೆ ಜಿಲ್ಲೆಯ ಚಿಕ್ಕ ಸಂಗಮದ ಹತ್ತಿರ ಘಟಪ್ರಭಾ ನದಿಯು ಕೃಷ್ಣೆಯನ್ನು ಸೇರುತ್ತದೆ. ಅವಳಿ ಜಲಾಶಯವಾಗಿರುವ ನಾರಾಯಣಪುರ ಬಸವಸಾಗರ ಜಲಾಶಯದ ಹಿನ್ನೀರು ಪ್ರದೇಶವಾಗಿರುವ ಕೂಡಲಸಂಗಮದ ಬಳಿ ಮಲಪ್ರಭಾ ನದಿಯೂ ಕೂಡ ಕೃಷ್ಣೆಯನ್ನು ಸೇರುತ್ತದೆ.

ತಪ್ಪಿದ ಪ್ರವಾಹ: ಪ್ರತಿ ಬಾರಿಯೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾದಾಗಲೊಮ್ಮೆ ನಾರಾಯಣಪುರ ಬಸವಸಾಗರ ಜಲಾಶಯದ ಹಿನ್ನೀರು ಪ್ರದೇಶದಲ್ಲಿರುವ ಅಖಂಡ ವಿಜಯಪುರ ಜಿಲ್ಲೆಯ ಹುನಗುಂದ, ಮುದ್ದೇಬಿಹಾಳ, ತಾಳಿಕೋಟೆ, ನಿಡಗುಂದಿ, ಬಾಗಲಕೋಟೆ ತಾಲೂಕಿನ ನೂರಾರು ಗ್ರಾಮಗಳ ರೈತರ ಜಮೀನುಗಳು ಪ್ರವಾಹಕ್ಕೀಡಾಗುತ್ತಿದ್ದವು. ಈ ಬಾರಿ ರಾಜ್ಯ ಮತ್ತು ಮಹಾರಾಷ್ಟ್ರ ರಾಜ್ಯದ ಜಲ ಸಂಪನ್ಮೂಲ ಇಲಾಖೆ, ಕಂದಾಯ, ಆರೋಗ್ಯ, ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿವೆ. ಇದರ ಪರಿಣಾಮವಾಗಿ ಜಲ ಸಂಪನ್ಮೂಲ ಇಲಾಖೆಯ ವ್ಯಾಪ್ತಿಯ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ಸಕಾಲಕ್ಕೆ ಸೂಕ್ತ ನಿರ್ಣಯ ಕೈಗೊಂಡಿರುವುದರಿಂದ ರೈತರ ಜಮೀನಿನಲ್ಲಿ ನೀರು ಹೋಗಿ ಹಾನಿಯಾಗಿಲ್ಲ. ಇದರಿಂದ ರೈತರು ಬಿತ್ತನೆ ಮಾಡಿರುವ ಬೆಳೆಗಳು ಸೊಂಪಾಗಿ ಬೆಳೆದು ನಿಂತಿವೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.