ಮಹಾಪುರುಷರು ಒಂದೇ ಸಮಾಜಕ್ಕೆ ಸೀಮಿತರಲ್ಲ: ಶಾಸಕ ನಾಡಗೌಡ


Team Udayavani, Jan 16, 2018, 1:18 PM IST

vij-4.jpg

ಮುದ್ದೇಬಿಹಾಳ: ಮಹಾನ್‌ ವ್ಯಕ್ತಿಗಳನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸುವ ಕೆಲಸ ಆಗಬಾರದು. ಮಹಾತ್ಮರು ಯಾವ ಸಮಾಜದಲ್ಲಿ ಹುಟ್ಟುತ್ತಾರೆ ಅನ್ನೋದು ಮುಖ್ಯವಲ್ಲ. ಹುಟ್ಟಿದ ವ್ಯಕ್ತಿ ಸಂತನಾಗಿ ಸರ್ವಸ್ವವನ್ನು ತ್ಯಾಗಮಾಡಿ ಮಾನವ ಕಲ್ಯಾಣಕ್ಕಾಗಿ ಶ್ರಮಿಸುವವರು ನಮ್ಮ ಪಾಲಿಗೆ ದೇವರೆಂದೆನಿಸಿಕೊಳ್ಳುತ್ತಾರೆ ಎನ್ನುವುದನ್ನು ನಾವೆಲ್ಲ ಅರಿಯಬೇಕು ಎಂದು ಶಾಸಕ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಸಿ.ಎಸ್‌. ನಾಡಗೌಡ ಹೇಳಿದರು.

ಇಲ್ಲಿನ ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಸೋಮವಾರ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸೋಗು ಹಾಕಿಕೊಂಡು ಬರುವುದು ಬಹಳ ದಿನ ನಡೆಯುವಂಥದ್ದಲ್ಲ. ನಮ್ಮ ಮಕ್ಕಳು ಕೆಟ್ಟರೆ ಇಡಿ ಸಮಾಜ ಕೆಟ್ಟಂತೆ. ನಾವು ತಪ್ಪು ಹೆಜ್ಜೆ ಇಟ್ಟರೆ ಅದರ ನಷ್ಟ ನಮ್ಮ ವಂಶಕ್ಕೆ ಅನ್ನೋದನ್ನ ಎಲ್ಲರೂ ಗಮನಿಸಬೇಕು. ಒಂದು ತಪ್ಪು ನಡೆ ಇಡೀ ವಂಶವನ್ನೇ ನಾಶ ಮಾಡುತ್ತೆ. ಬಸವಣ್ಣನ ಹೊಲಸು ತಿಂಬುವನೇ ಹೊಲೆಯ ಅನ್ನೋ ಮಾತು ಸತ್ಯ. ಹೊಲಸು ತಿನ್ನೋರು ಅಂದರೆ ತಪ್ಪು ಕೆಲಸ ಮಾಡೋರೇ ಹೊರತು ಆಹಾರದ ವಿಷಯದಲ್ಲಿ ಅಲ್ಲ. ವ್ಯಸನ ಬಿಡಬೇಕು. ಮಕ್ಕಳಿಗೆ ಒಳ್ಳೆ ವಿದ್ಯೆ ಕೊಡಬೇಕು. ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. 

ಸಿದ್ದರಾಮೇಶ್ವರರ ಕುರಿತು ಸರ್ಕಾರಿ ಪಿಯು ಕಾಲೇಜು ಕನ್ನಡ ಉಪನ್ಯಾಸಕ ಐ.ಬಿ. ಹಿರೇಮಠ ಉಪನ್ಯಾಸ ನೀಡಿದರು. ತಾಪಂ ಅಧ್ಯಕ್ಷೆ ಚನ್ನಮ್ಮ ತಂಗಡಗಿ, ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ಕಸಾಪ ತಾಲೂಕಾಧ್ಯಕ್ಷ ಎಂ.ಬಿ. ನಾವದಗಿ, ಬಿ.ಎಚ್‌. ಮಾಗಿ, ತಹಶೀಲ್ದಾರ್‌ ಎಂ.ಎ.ಎಸ್‌. ಬಾಗವಾನ, ಜಿ.ಎಸ್‌. ಪಾಟೀಲ, ಗುರಣ್ಣ ತಾರನಾಳ, ಅಬ್ದುಲ್‌ಗ‌ಫೂರ ಮಕಾನದಾರ, ಹನುಮಂತ ವಡ್ಡರ, ಸಿದ್ರಾಮಪ್ಪ ಹಡಲಗೇರಿ, ಪರಶುರಾಮ ನಾಲತವಾಡ ಮತ್ತಿತರರು ವೇದಿಕೆಯಲ್ಲಿದ್ದರು. ಡಾ| ಎಸ್‌.ಸಿ. ಚೌಧರಿ ಸ್ವಾಗತಿಸಿದರು. ಟಿ.ಡಿ. ಲಮಾಣಿ ನಿರೂಪಿಸಿದರು.

ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ನೇತಾಜಿ ನಗರದಿಂದ ಮಿನಿ ವಿಧಾನಸೌಧವರೆಗೆ ಸಿದ್ದರಾಮೇಶ್ವರರ ಭಾವಚಿತ್ರದ ಮೆರವಣಿಗೆ ನಡೆಯಿತು. ಪುರಸಭೆ ಸದಸ್ಯ ಹನುಮಂತ ವಡ್ಡರ ಕೇಸರಿ ಧ್ವಜಾರೋಹಣ ನಡೆಸುವ ಮೂಲಕ ಚಾಲನೆ ನೀಡಿದರು. ಪ್ರಮುಖರಾದ ಪರಶುರಾಮ ನಾಲತವಾಡ, ರವಿ ನಾಲತವಾಡ, ಶೆಟ್ಟೆಪ್ಪ ಭೋವಿ, ರಾಮಣ್ಣ ಹಡಲಗೇರಿ, ಶೇಖರ ಢವಳಗಿ, ಸಂತೋಷ ವಡ್ಡರ, ನಾಗೇಶ ಅಮರಾವತಿ, ಹನುಮಂತ ಬೆಳಗಲ್ಲ, ಎಸ್‌.ಕೆ. ಘಾಟಿ, ನಾಗಪ್ಪ ಮದರಿ, ಕುಮಾರ ಢವಳಗಿ ಇದ್ದರು.

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.