ಕಾಯದ ಮಹತ್ವ ಸಾರಿದ ಮಾಚಿದೇವ


Team Udayavani, Feb 2, 2018, 3:55 PM IST

vij-2.jpg

ವಿಜಯಪುರ: ತಮ್ಮ ನಿಷ್ಟುರ ನಡೆಯಿಂದಾಗಿ ಬಸವೇಶ್ವರರ ಬಲಗೈ ಬಂಟ ಎನಿಸಿಕೊಂಡಿದ್ದ ಹಾಗೂ ಕಾಯಕದ ಮಹತ್ವ ಸಾರಿದವರು ಮಡಿವಾಳ ಮಾಚಯ್ಯ ಶರಣರು. ಕಾಯಕದಲ್ಲಿ ತಾವು ಮಾಡುತ್ತಿದ್ದ ಅಗಸತನ ಕೀಳಲ್ಲ. ಅರಸುತನ ಮೇಲಲ್ಲ ಎಂಬುದನ್ನು ಸಾರಿದ ಅಚಲ ಕಾಯನಿಷ್ಠ ಶರಣರು ಎಂದು ಸಂಸದೀಯ ಕಾರ್ಯದರ್ಶಿ, ನಗರ ಶಾಸಕ ಡಾ| ಎಂ.ಎಸ್‌. ಬಾಗವಾನ ಬಣ್ಣಿಸಿದರು.

ನಗರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಡಿವಾಳ ಮಾಚಿದೇವ ಶರಣರು ರಚಿಸಿದ ಸಾವಿರಾರು ವಚನಗಳು ಉತ್ತಮ ಸಮಾಜ ನಿರ್ಮಾಣದಲ್ಲಿ ಸಹಕಾರಿ ಆಗಿವೆ. ಇಂತಹ ಮಹಾನ್‌ ವಚನಕಾರರು ನಮ್ಮ ಜಿಲ್ಲೆಯಲ್ಲಿ ಜನಿಸಿದರು ಎಂಬುದು ಜಿಲ್ಲೆಯ ಜನರಿಗೆಲ್ಲ ಹೆಮ್ಮೆಯ ಸಂಗತಿ. ಮಡಿವಾಳ ಸಮಾಜ ನಗರದಲ್ಲಿ ಸಮುದಾಯ ಭವನ ನಿರ್ಮಾಣದ ಕುರಿತ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳುವುದಾಗಿ ಎಂದು ಭರವಸೆ ನೀಡಿದರು.

ವಿಶೇಷ ಉಪನ್ಯಾಸ ನೀಡಿದ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ| ಎಂ.ನಾಗರಾಜ, 12ನೇ ಶತಮಾನದ ಶರಣರ ಇತಿಹಾಸ ವಿಶ್ವದ ಇತಿಹಾಸದಲ್ಲಿ ಒಂದು ಬೆಳ್ಳಿ ಚುಕ್ಕಿ. ಸಾಮಾನ್ಯ ಜನರಲ್ಲಿರುವ ಮೂಢನಂಬಿಕೆ ಕಿತ್ತೆಸೆದು ಶೋಷಿತರಲ್ಲಿ ಆತ್ಮಗೌರವ ಬೆಳೆಸಿ ಆತ್ಮಸ್ಥೈರ್ಯ ತುಂಬಿದವರೇ ಶರಣರು ಎಂದು ವಿಶ್ಲೇಷಿಸಿದರು.

ಪ್ರತಿ ವೃತ್ತಿಗೂ ವಿಶೇಷ ವೃತ್ತಿಗೌರವ ನೀಡಿದ ಶರಣರು, ಅಂದು ಸಮಾಜದಲ್ಲಿ ತಾಂಡವಾಡುತ್ತಿದ್ದ ಮೋಸ, ವಂಚನೆ, ಮೇಲು-ಕೀಳು ಎಂಬ ಭಾವನೆ ತೊಡೆದುಹಾಕಿ ಅಧ್ಯಾತ್ಮದಲ್ಲಿ ಗಂಡು- ಹೆಣ್ಣು ಸಮಾನರು ಎಂದು ತಮ್ಮ ವಚನಗಳಲ್ಲಿ ಸಾರಿದ ಮಹಾನ್‌ ವ್ಯಕ್ತಿ ಎಂದು ಹೇಳಿದರು.

ಮಡಿವಾಳ ಮಾಚಿದೇವರು ವಚನ ಸಾಹಿತ್ಯಕ್ಕೆ ದೊಡ್ಡ ಕೊಡುಗೆ ನೀಡಿದ ಶರಣ. ಇವರು ವಚನ ಸಾಹಿತ್ಯ ರಚನೆ ಮಾತ್ರವಲ್ಲ. ಇಡೀ ಮಾನವ ಕುಲಕ್ಕೆ ವಚನ ಸಾಹಿತ್ಯ ಸಂರಕ್ಷಿಸಿ ಮಹಾನ್‌ ಕೆಲಸ ಮಾಡಿದರು. ವಚನಗಳನ್ನು ರಕ್ಷಿಸುವಲ್ಲಿ ಮಡಿವಾಳ ಮಾಚಿದೇವರು ನಿರ್ಲಕ್ಷ್ಯ ಮಾಡಿದ್ದರೆ ಈಗ ವಚನ ಚಳವಳಿ ಎಂಬುದೊಂದು ನಮ್ಮ ನಲೆದಲ್ಲಿ ನಡೆದ ಬಗ್ಗೆ ಸಾಕ್ಷಾಧಾರಗಳೇ ಇರುತ್ತಿರಲಿಲ್ಲ. ಕನ್ನಡ ಸಾಹಿತ್ಯ ಲೋಕದಲ್ಲಿ ವಚನ ಎಂಬ ಮಹಾನ್‌ ಸಾಹಿತ್ಯ ನಮಗೆ ಅಧ್ಯಯನಕ್ಕೆ ಲಭ್ಯವಾಗುತ್ತಲೇ ಇರಲಿಲ್ಲ. ವನಚಗಳಲ್ಲಿರುವ ಜೀವನ ಮೌಲ್ಯಗಳು, ಶರಣರ ಆದರ್ಶ ಜೀವನದ ಸಂದೇಶಗಳು, ವಾಸ್ತವಿಕ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಿಕೊಂಡು ಕರ್ತವ್ಯ ನಮ್ಮ ಮೇಲಿದೆ ಎಂದು ಹೇಳಿದರು. 

ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಹಾನಗರ ಪಾಲಿಕೆ ಮೇಯರ್‌ ಸಂಗೀತಾ ಪೋಳ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಝಾದ್‌ ಪಟೇಲ್‌, ಜಿಪಂ ಸಿಇಒ ಸುದರೇಶಬಾಬು, ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಬಿ.ಅಂಕದ, ವಿ.ಸಿ.ನಾಗಠಾಣ, ಐ.ಡಿ.ಅಗಸರ, ಶಿವಪ್ಪ ಹುಬ್ಬಳಿ ಇದ್ದರು.

ಇದಕ್ಕೂ ಮೊದಲು ಬೆಳಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಮಡಿವಾಳ ಮಾಚಿದೇವರ ಭಾವಚಿತ್ರ ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ ಮತ್ತು ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಬಿ. ಅಂಕದ ಚಾಲನೆ ನೀಡಿದರು. ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮಹಾತ್ಮಾ ಗಾಂಧೀಜಿ ವೃತ್ತದ ಮಾರ್ಗವಾಗಿ ಕಂದಗಲ್‌ ಹನುಮಂತರಾಯ ರಂಗಮಂದಿರದ ವರೆಗೆ ಸಾಗಿತು

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.